23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಜಿ.ಎ.ಎಸ್. ಕಂಬದಲ್ಲಿ ಢಮರ್ ಶಬ್ದ

ಬೆಳ್ತಂಗಡಿ : ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ,ನ್ಯಾಯತರ್ಪು ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣುಮುಚ್ಚಾಲೆ ಆಗುತ್ತಿದೆ. ಜಿ.ಎ.ಎಸ್.ಕಂಬದಲ್ಲಿ ಢಮರ್ ಎಂಬ ದೊಡ್ಡ ಗಾತ್ರದ ಶಬ್ದ. ಜು.26 ರಂದು ಆಗಾಗ ಕೇಳಿಸುವಾಗ ಸಾರ್ವಜನಿಕರನ್ನೂ ಬೆಚ್ಚಿ ಬೀಳಿಸುಂತಿದೆ. ಮತ್ತು ವಿದ್ಯುತ್ ತಂತಿಗಳು ತುಂಡಾಗಿ ಬೀಳುವ ಸಾಧ್ಯತೆ ಇದೆ ಭಾವಿಸಲಾಗುತ್ತದೆ.


ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ತಲೆದೋರುವುದು ಸರ್ವೇಸಾಮಾನ್ಯವಾಗಿದೆ. ಅದರೆ ಇಲ್ಲಿಯ ಸಮಸ್ಯೆಗಳು ಹಲವಾರು ಇದೆ. ಕಳೆದ ವರ್ಷದಿಂದ ಈ ತನಕ ಕೆಲವೊಂದು ಕಡೆಗಳಲ್ಲಿ ವಿದ್ಯುತ್ ಕಂಬಕ್ಕೆ ಮತ್ತು ತಂತಿಗಳಿಗೆ ತಾಗಿಕೊಂಡಿರುವ ಮರದ ಕೊಂಬೆಗಳನ್ನು ತರೆವುಗೊಳಿಸದೆ ಮತ್ತು ಸಂಬಂಧಪಟ್ಟ ಸಿಬ್ಬಂದಿ ಹಾಗೂ ಅಧಿಕಾರಿಗಳ ಬೇಜಾವಬ್ದಾರಿ ಎದ್ದು ಕಾಣುತ್ತದೆ ಎಂದು ಸಾರ್ವಜನಿಕರ ಅಭಿಪ್ರಾಯವಾಗಿದೆ.


ಗೇರುಕಟ್ಟೆ ಮಂಜಲಡ್ಕ ಕ್ರಾಸ್ ರಸ್ತೆಯ ಪಕ್ಕದಲ್ಲಿ ಅಂಗಾರಬೆಟ್ಟು ಕಡೆಗೆ ಹೋಗುವ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬದ ತಂತಿಗಳಿಗೆ ಅಳವಡಿಸಿದ ಗ್ಲಾಸು ಮುರಿದು 3-4 ತಿಂಗಳ ಹಿಂದೆ ಆಗಿದೆ. ಕಂಬದಿಂದ ತಂತಿ ಬೇರ್ಪಟ್ಟ ಸುಮಾರು 6 ರಿಂದ 8 ಅಡಿ ದೂರ ಸರಿದು ಸದ್ಯ ಪಕ್ಕದಲ್ಲಿರುವ ಮರದ ಕೊಂಬೆಗಳ ಅಧಾರದಲ್ಲಿ ನಿಂತಿರುತ್ತದೆ. ಹಾಗೂ ಅದರಲ್ಲಿ ವಿದ್ಯುತ್ ಸಂಚಾರವಿರುವುದನ್ನು ಗಮನಿಸಿದಾಗ ಮೈ ಝಮೇನಿಸುತ್ತದೆ.ಶಾಲಾ ಮಕ್ಕಳು, ಕೃಷಿಕರು ಇದೇ ರಸ್ತೆಯಲ್ಲಿ ಓಡಾಡುವುದು ಅನಿವಾರ್ಯವಾಗಿದೆ.
ಈ ಬಗ್ಗೆ ಸ್ಥಳೀಯರು ಸಿಬ್ಬಂದಿಗಳಿಗೆ ತಿಳಿಸಿದರು ಕ್ಯಾರೆ ಮಾಡುವುದಿಲ್ಲ.ಜೀವ ಬಲಿಪಡೆದ ನಂತರದಲ್ಲಿ ಸರಿಪಡಿಸುವ ಮನೋಭಾವನೆ ಇರಬಹುದಾ..?


ಪರಪ್ಪು- ಕೊಯ್ಯೂರು ಕ್ರಾಸ್ ಬಟ್ಟೆಮಾರು ರಸ್ತೆಯ ಪಕ್ಕದಲ್ಲಿ ಟ್ರಾನ್ಸ್ ಫಾರ್ಮ್ ಪೆಟ್ಟಿಗೆ ಯಿಂದ ಹಾದು ಹೋಗುವ ಎಲ್ಲಾ ತಂತಿಗಳು ಪಕ್ಕದ ಮರ,ಬಳ್ಳಿಗಳ ಆಶ್ರಯ ಪಡೆದು ಕೊಂಡಿದೆ.ಅದರಲ್ಲಿ ಆಗಾಗ ಬೆಂಕಿ ಕಾಣಿಸಿಕೊಂಡಾಗ ಭಯವಾಗುತ್ತದೆ ಎಂದು ಪಕ್ಕದ ಮನೆಯವರು ಹಾಗೂ ಸಾರ್ವಜನಿಕ ಹೇಳುತ್ತಾರೆ..ಕೆಲವೇ ತಿಂಗಳ ಹಿಂದೆ ಬೈಹುಲ್ಲಿನ ವಾಹನಕ್ಕೆ ಬೆಂಕಿ ತಗುಲಿದ ನೆನೆಪು ಇನ್ನೂ ಮಾಸಿಲ್ಲ. ಮೆಸ್ಕಾಂ ಇಲಾಖೆಯವರು ಸಾರ್ವಜನಿಕರೊಂದಿಗೆ ಚೆಲ್ಲಾಟವಾಡುವುದನ್ನು ಬಿಟ್ಟು ಸಮಸ್ಯೆಗಳನ್ನು ಸರಿಪಡಿಸುವಂತೆ ಆಗ್ರಹಿಸುತ್ತಾರೆ.ತಪ್ಪಿದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ,ಶಾಸಕರ ಹಾಗೂ ಸಂಸದರ ಗಮನಕ್ಕೆ ತರುವುದು ಅನಿವಾರ್ಯವಾಗಿದೆ ಎಚ್ಚರಿಸಿದ್ದಾರೆ.


ಈ ಹಿಂದೆ ಪತ್ರಿಕೆ, ವೆಬ್ ಸೈಟ್ ಗಳಲ್ಲಿ ವರದಿ ಪ್ರಕಟವಾದ ನಂತರದಲ್ಲಿ ಕಾಟಾಚಾರಕ್ಕೆ ಸ್ವಲ್ಪಮಟ್ಟಿಗೆ ಕೃಷಿಕರ ಮತ್ತು ಸಾರ್ವಜನಿಕರ ಸಹಾಯದಿಂದ ಮರದ ಕೊಂಬೆ ತೆರವು ಕೆಲಸ ಆಗಿದೆ.
ವರದಿ: ಕೆ.ಎನ್ ಗೌಡ

Related posts

ಬೆಳ್ತಂಗಡಿ: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Suddi Udaya

ಬೆಳ್ತಂಗಡಿ ನಗರದ ಬೂತ್ ಸಂಖ್ಯೆ 105, 106 ಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ನರೇಗಾದಲ್ಲಿ ಗುರಿ ಸಾಧಿಸಿದ ಅರಸಿನಮಕ್ಕಿ ಗ್ರಾ.ಪಂ. ಗೆ ಪ್ರಶಂಸಾ ಪತ್ರ ಮತ್ತು ಸ್ಮರಣಿಕೆ ಗೌರವ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಕುಂಭಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಬಳಂಜ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶರಣ್ಯರವರಿಗೆ ಸರ್ಕಾರದ ವತಿಯಿಂದ ಲ್ಯಾಪ್‌ಟಾಪ್ ವಿತರಣೆ

Suddi Udaya

ಕನ್ನಡದಲ್ಲಿ ಬರಲಿದೆ ದಸ್ಕತ್ ತುಳು ಚಿತ್ರ

Suddi Udaya
error: Content is protected !!