26.1 C
ಪುತ್ತೂರು, ಬೆಳ್ತಂಗಡಿ
September 11, 2026
ಅಪರಾಧ ಸುದ್ದಿ

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಓ.ಟಿ.ಪಿ. ಪಡೆದು ಕೊಕ್ಕಡದ ಮಹಿಳೆಗೆ ರೂ.1.50ಲಕ್ಷ. ವಂಚನೆ

ಕೊಕ್ಕಡ : ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಓ.ಟಿ.ಪಿ ಪಡೆದು ಮಹಿಳೆಯೊವ೯ರಿಗೆ ಅಪರಿಚಿತ ವ್ಯಕ್ತಿ ರೂ.1.50 ಲಕ್ಷ ವಂಚಿಸಿದ ಪ್ರಕರಣ ಜು. 26ರಂದು ವರದಿಯಾಗಿದೆ.
ಕೊಕ್ಕಡ ಗಾಣಗಿರಿ ಸುಶೀಲ ರವರ ಬ್ಯಾಂಕ್ ಖಾತೆಯಿಂದ ರೂ. 1.50 ಲಕ್ಷವನ್ನು ಅಪರಿಚಿತ ವ್ಯಕ್ತಿ ಎಗರಿಸಿದ್ದಾನೆ.
ಸುಶೀಲರವರು ಕೊಕ್ಕಡ ಕೆನರಾ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದು , ಎಟಿಎಂ ಗಾಗಿ ಅಪ್ಲಿಕೇಶನ್ ಹಾಕಿದ್ದು 3-4 ದಿನದ ಹಿಂದೆ ಎಟಿಎಂ ಕಾರ್ಡ್ ಬಂದಿತ್ತು. ಇಂದು ಬೆಳಗ್ಗೆ ಅಪರಿಚಿತ ವ್ಯಕ್ತಿಯೊಬ್ಬರು ಸುಶೀಲರವರಿಗೆ ಫೋನ್ ಮಾಡಿ ನಾನು ಬ್ಯಾಂಕ್ ಅಧಿಕಾರಿ ಎಂದು ಪರಿಚಯಿಸಿಕೊಂಡು ನಂಬಿಸಿ, ನಂತರ ಫೋನ್ ಮಾಡಿ ನಿಮಗೆ ಒಟಿಪಿ ಬಂದಿದೆ ನಂಬರ್ ಹೇಳಿ ಎಂದರು. ಅದರಂತೆ ಓಟಿಪಿ ನಂಬರ್ ಕೊಟ್ಟ ಸ್ವಲ್ಪ ಸಮಯದ ನಂತರ ಮಹಿಳೆ ಸುಶೀಲ ಅವರ ಖಾತೆಯಿಂದ ರೂ. 1.50 ಲಕ್ಷ ಡ್ರಾ ಆಗಿರುವುದು ಕಂಡು ಬಂದಿದೆ.
ಕೊಕ್ಕಡ ಕೆನರಾ ಬ್ಯಾಂಕ್ ನಲ್ಲಿ ಖಾತೆ ಹೊಂದಿರುವ ಹಲವಾರು ಗ್ರಾಹಕರು ಈ ರೀತಿಯ ಮೋಸಕ್ಕೆ ಬಲಿಯಾಗಿದ್ದಾರೆ.

Related posts

ಕುವೆಟ್ಟು: ವಿದ್ಯುತ್ ಅವಘಡದಿಂದ ಸಹಾಯಕ ಪವರ್‌ಮ್ಯಾನ್ ಮೃತ್ಯು

Suddi Udaya

ಬೆಳ್ತಂಗಡಿ: ಮಾಲಾಡಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರು ಆರೋಪಿಗಳನ್ನು ಬಂಧಿಸಿದ ಪುಂಜಾಲಕಟ್ಟೆ ಪೊಲೀಸರು

Suddi Udaya

ಮೂರು ವರ್ಷಗಳ ಹಿಂದೆ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣ: ಮರು ತನಿಖೆಗೆ ಎಸ್.ಐ.ಟಿ ರಚಿಸಿ ರಾಜ್ಯ ಸರಕಾರ ಆದೇಶ

Suddi Udaya

ಕೇರಳ ಹೊಟೇಲ್ ಮಾಲಕನ ಹತ್ಯೆ ಪ್ರಕರಣ: ಹೊಟೇಲ್ ಕೆಲಸಗಾರ ಬೆಳ್ತಂಗಡಿಯ ಯುವಕ ಬಂಧನ

Suddi Udaya

ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ | ಬೆಳ್ತಂಗಡಯ ಇಬ್ಬರು ಮಂಗಳೂರು ಸಿಸಿಬಿ ಬಲೆಗೆ ರೂ. 3.2 ಕೋಟಿ ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ

Suddi Udaya

ಉಜಿರೆ: ರಸ್ತೆಯ ಬದಿ ನಿಲ್ಲಿಸಿದ್ದ ಸ್ಕೂಟರ್ ಕಳವು

Suddi Udaya
error: Content is protected !!