23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಓ.ಟಿ.ಪಿ. ಪಡೆದು ಕೊಕ್ಕಡದ ಮಹಿಳೆಗೆ ರೂ.1.50ಲಕ್ಷ. ವಂಚನೆ

ಕೊಕ್ಕಡ : ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಓ.ಟಿ.ಪಿ ಪಡೆದು ಮಹಿಳೆಯೊವ೯ರಿಗೆ ಅಪರಿಚಿತ ವ್ಯಕ್ತಿ ರೂ.1.50 ಲಕ್ಷ ವಂಚಿಸಿದ ಪ್ರಕರಣ ಜು. 26ರಂದು ವರದಿಯಾಗಿದೆ.
ಕೊಕ್ಕಡ ಗಾಣಗಿರಿ ಸುಶೀಲ ರವರ ಬ್ಯಾಂಕ್ ಖಾತೆಯಿಂದ ರೂ. 1.50 ಲಕ್ಷವನ್ನು ಅಪರಿಚಿತ ವ್ಯಕ್ತಿ ಎಗರಿಸಿದ್ದಾನೆ.
ಸುಶೀಲರವರು ಕೊಕ್ಕಡ ಕೆನರಾ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದು , ಎಟಿಎಂ ಗಾಗಿ ಅಪ್ಲಿಕೇಶನ್ ಹಾಕಿದ್ದು 3-4 ದಿನದ ಹಿಂದೆ ಎಟಿಎಂ ಕಾರ್ಡ್ ಬಂದಿತ್ತು. ಇಂದು ಬೆಳಗ್ಗೆ ಅಪರಿಚಿತ ವ್ಯಕ್ತಿಯೊಬ್ಬರು ಸುಶೀಲರವರಿಗೆ ಫೋನ್ ಮಾಡಿ ನಾನು ಬ್ಯಾಂಕ್ ಅಧಿಕಾರಿ ಎಂದು ಪರಿಚಯಿಸಿಕೊಂಡು ನಂಬಿಸಿ, ನಂತರ ಫೋನ್ ಮಾಡಿ ನಿಮಗೆ ಒಟಿಪಿ ಬಂದಿದೆ ನಂಬರ್ ಹೇಳಿ ಎಂದರು. ಅದರಂತೆ ಓಟಿಪಿ ನಂಬರ್ ಕೊಟ್ಟ ಸ್ವಲ್ಪ ಸಮಯದ ನಂತರ ಮಹಿಳೆ ಸುಶೀಲ ಅವರ ಖಾತೆಯಿಂದ ರೂ. 1.50 ಲಕ್ಷ ಡ್ರಾ ಆಗಿರುವುದು ಕಂಡು ಬಂದಿದೆ.
ಕೊಕ್ಕಡ ಕೆನರಾ ಬ್ಯಾಂಕ್ ನಲ್ಲಿ ಖಾತೆ ಹೊಂದಿರುವ ಹಲವಾರು ಗ್ರಾಹಕರು ಈ ರೀತಿಯ ಮೋಸಕ್ಕೆ ಬಲಿಯಾಗಿದ್ದಾರೆ.

Related posts

ಕೊಕ್ರಾಡಿ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿ ಸಹಿತ ಟಿಪ್ಪರ್ ಲಾರಿ ವಶ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ಕೊಡಗಿನ ಕುಶಾಲನಗರದಲ್ಲಿ ನಡೆದ ಸಂಪತ್ ಎಂಬವರ ಕೊಲೆ ಪ್ರಕರಣ: ಗುರುವಾಯನಕೆರೆಯ ಶಕ್ತಿನಗರದ ಪಿಜಿಯಲ್ಲಿದ್ದ ಆರೋಪಿಯನ್ನು ಬಂಧಿಸಿದ ಕೊಡಗು ಪೊಲೀಸರು

Suddi Udaya

ಬೆಳ್ತಂಗಡಿ: ಪೋಲಿಸರ ಸೂಚನೆ ನಿರ್ಲಕ್ಷಿಸಿ ಅಕ್ರಮಕೂಟ ಸೇರಿದ ಹಿನ್ನೆಲೆ ಅನಿಲ್ ಕುಮಾರ್ ಅಂತರ, ಪ್ರಸನ್ನರವಿ, ಕುಸುಮಾವತಿ ಸೇರಿದಂತೆ 20ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ: ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!