July 23, 2026
ಅಪರಾಧ ಸುದ್ದಿ

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಓ.ಟಿ.ಪಿ. ಪಡೆದು ಕೊಕ್ಕಡದ ಮಹಿಳೆಗೆ ರೂ.1.50ಲಕ್ಷ. ವಂಚನೆ

ಕೊಕ್ಕಡ : ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಓ.ಟಿ.ಪಿ ಪಡೆದು ಮಹಿಳೆಯೊವ೯ರಿಗೆ ಅಪರಿಚಿತ ವ್ಯಕ್ತಿ ರೂ.1.50 ಲಕ್ಷ ವಂಚಿಸಿದ ಪ್ರಕರಣ ಜು. 26ರಂದು ವರದಿಯಾಗಿದೆ.
ಕೊಕ್ಕಡ ಗಾಣಗಿರಿ ಸುಶೀಲ ರವರ ಬ್ಯಾಂಕ್ ಖಾತೆಯಿಂದ ರೂ. 1.50 ಲಕ್ಷವನ್ನು ಅಪರಿಚಿತ ವ್ಯಕ್ತಿ ಎಗರಿಸಿದ್ದಾನೆ.
ಸುಶೀಲರವರು ಕೊಕ್ಕಡ ಕೆನರಾ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದು , ಎಟಿಎಂ ಗಾಗಿ ಅಪ್ಲಿಕೇಶನ್ ಹಾಕಿದ್ದು 3-4 ದಿನದ ಹಿಂದೆ ಎಟಿಎಂ ಕಾರ್ಡ್ ಬಂದಿತ್ತು. ಇಂದು ಬೆಳಗ್ಗೆ ಅಪರಿಚಿತ ವ್ಯಕ್ತಿಯೊಬ್ಬರು ಸುಶೀಲರವರಿಗೆ ಫೋನ್ ಮಾಡಿ ನಾನು ಬ್ಯಾಂಕ್ ಅಧಿಕಾರಿ ಎಂದು ಪರಿಚಯಿಸಿಕೊಂಡು ನಂಬಿಸಿ, ನಂತರ ಫೋನ್ ಮಾಡಿ ನಿಮಗೆ ಒಟಿಪಿ ಬಂದಿದೆ ನಂಬರ್ ಹೇಳಿ ಎಂದರು. ಅದರಂತೆ ಓಟಿಪಿ ನಂಬರ್ ಕೊಟ್ಟ ಸ್ವಲ್ಪ ಸಮಯದ ನಂತರ ಮಹಿಳೆ ಸುಶೀಲ ಅವರ ಖಾತೆಯಿಂದ ರೂ. 1.50 ಲಕ್ಷ ಡ್ರಾ ಆಗಿರುವುದು ಕಂಡು ಬಂದಿದೆ.
ಕೊಕ್ಕಡ ಕೆನರಾ ಬ್ಯಾಂಕ್ ನಲ್ಲಿ ಖಾತೆ ಹೊಂದಿರುವ ಹಲವಾರು ಗ್ರಾಹಕರು ಈ ರೀತಿಯ ಮೋಸಕ್ಕೆ ಬಲಿಯಾಗಿದ್ದಾರೆ.

Related posts

ಧರ್ಮಸ್ಥಳ: ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಇಂದು ಮಂಗಳೂರಿಗೆ

Suddi Udaya

ಬೆಳಾಲು ಪ್ಯಾಕ್ಸ್: ಆರ್ಥಿಕ ಅವ್ಯವಹಾರ ಪ್ರಕರಣಎರಡನೇ ಆರೋಪಿ ಪ್ರಶಾಂತ್ ಬಂಧನ

Suddi Udaya

ಒಂದು ಕ್ವಿಂಟಾಲ್ ಗಾಂಜಾ ವಶಪಡಿಸಿದ ಪ್ರಕರಣ: ಕಕ್ಕಿಂಜೆಯ ಇಬ್ಬರು ಸೇರಿದಂತೆ ಮೂವರು ಆರೋಪಿಗಳ ಬಂಧನ

Suddi Udaya

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

Suddi Udaya

ಉಜಿರೆಗೆ ಹೋಗಿ ಬರುತ್ತೇನೆ ಎಂದ ನಿಡ್ಲೆಯ ವ್ಯಕ್ತಿ ನಾಪತ್ತೆ

Suddi Udaya
error: Content is protected !!