July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುಪ್ಪೆಟ್ಟಿ :ಕುಪ್ಪೆಟ್ಟಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಬಿ. ಗೋಳಿತೊಟ್ಟು ಶಾಲೆಗೆ ವರ್ಗಾವಣೆ

ಬೆಳ್ತಂಗಡಿ ತಾಲೂಕಿನ ಕುಪ್ಪೆಟ್ಟಿ ಕ್ಲಸ್ಟರ್ನಲ್ಲಿ ಆರು ವರ್ಷಗಳಿಂದ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಸೇವೆಯನ್ನು ಸಲ್ಲಿಸಿದ ಶ್ರೀಮತಿ ಸಂಧ್ಯಾ.ಬಿ ಇವರು ಪುತ್ತೂರು ತಾಲೂಕಿನ ನೆಲ್ಯಾಡಿಯ ಸಮೀಪದ ಸ. ಉ.ಪ್ರಾ ಶಾಲೆ ಗೋಳಿತೊಟ್ಟು ಇಲ್ಲಿಗೆ ಶಿಕ್ಷಕಿಯಾಗಿ ವರ್ಗಾವಣೆ ಹೊಂದಿದ್ದಾರೆ.

2018-19ನೇ ಸಾಲಿನಲ್ಲಿ ಬೆಳ್ತಂಗಡಿ ತಾಲೂಕಿನ ಕುಪ್ಪೆಟ್ಟಿ ಕ್ಲಸ್ಟರ್ ನಲ್ಲಿ ಸಮೂಹ ಸಂಪನ್ಮೂಲ ವ್ಯಕ್ತಿಯಾಗಿ(CRP )ಸೇವೆ ಪ್ರಾರಂಭಿಸಿದ ಇವರು ಆರು ವರ್ಷಗಳಿಂದ ಅತ್ಯಂತ ಪ್ರಾಮಾಣಿಕತೆ ನಿಷ್ಠೆಯಿಂದ ತಮ್ಮ ಕರ್ತವ್ಯ ನಿರ್ವಹಿಸಿ ತಮ್ಮ ಕ್ಲಸ್ಟರ್ನಲ್ಲಿ ಬರುವ 19 ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿ ಬೆಳ್ತಂಗಡಿ ತಾಲೂಕಿನಲ್ಲಿಕುಪ್ಪೆಟ್ಟಿ ಕ್ಲಸ್ಟರ್ ಅನ್ನು ಮಾದರಿಯನ್ನಾಗಿಸಿದ ಅತ್ಯಂತ ಕ್ರಿಯಾಶೀಲ ವ್ಯಕ್ತಿತ್ವ ಇವರದು.

ಎಲ್ಲಾ ಸಹೋದ್ಯೋಗಿ ಬಂಧುಗಳ ಜೊತೆ ಪ್ರೀತಿ ತಾಳ್ಮೆಯಿಂದ ಕಾರ್ಯನಿರ್ವಹಿಸುತ್ತಿದ್ದ ಇವರನ್ನು ಜುಲೈ 27 ರಂದು ಸ.ಕಿ.ಪ್ರಾ ಶಾಲೆ ನೆಕ್ಕಿಲು ಇಲ್ಲಿ ಕುಪ್ಪೆಟ್ಟಿ ಕ್ಲಸ್ಟರ್ನ ವತಿಯಿಂದ ಅತ್ಯಂತ ಗೌರವ ಪೂರ್ವಕವಾಗಿ ಬೀಳ್ಕೊಡಲಾಯಿತು.

Related posts

ಬೆಳ್ತಂಗಡಿ: ಹಳೆಕೋಟೆ ಬಳಿ ಓಮಿನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲರ್ಸ್ ವತಿಯಿಂದ ಎಸ್‌ಎಸ್‌ಎಲ್‌ಸಿ ಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ತನುಶ್ರೀ ರವರಿಗೆ ಸನ್ಮಾನ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ

Suddi Udaya

ನಾಲ್ಕೂರು : ಕುದ್ರೋಟ್ಟು ಮುಖ್ಯ ರಸ್ತೆಯಲ್ಲಿ ಪ್ರತ್ಯಕ್ಷವಾದ ಕಾಡುಕೋಣಗಳ ಹಿಂಡು

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಉತ್ಸವ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ- ಶೇ 20 ಡಿವಿಡೆಂಡ್ ಹಾಗೂ ತಾಲೂಕಿನ ಎಲ್ಲಾ ಸರಕಾರಿ ಆಸ್ಪತ್ರೆಗಳ ಡಿ ವರ್ಗದ ಹೊರ ಗುತ್ತಿಗೆ ನೌಕರರಿಗೆ ಉಚಿತ ಸಮವಸ್ತ್ರ ನೀಡುವ ಘೋಷಣೆ

Suddi Udaya
error: Content is protected !!