September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುಪ್ಪೆಟ್ಟಿ :ಕುಪ್ಪೆಟ್ಟಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಬಿ. ಗೋಳಿತೊಟ್ಟು ಶಾಲೆಗೆ ವರ್ಗಾವಣೆ

ಬೆಳ್ತಂಗಡಿ ತಾಲೂಕಿನ ಕುಪ್ಪೆಟ್ಟಿ ಕ್ಲಸ್ಟರ್ನಲ್ಲಿ ಆರು ವರ್ಷಗಳಿಂದ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಸೇವೆಯನ್ನು ಸಲ್ಲಿಸಿದ ಶ್ರೀಮತಿ ಸಂಧ್ಯಾ.ಬಿ ಇವರು ಪುತ್ತೂರು ತಾಲೂಕಿನ ನೆಲ್ಯಾಡಿಯ ಸಮೀಪದ ಸ. ಉ.ಪ್ರಾ ಶಾಲೆ ಗೋಳಿತೊಟ್ಟು ಇಲ್ಲಿಗೆ ಶಿಕ್ಷಕಿಯಾಗಿ ವರ್ಗಾವಣೆ ಹೊಂದಿದ್ದಾರೆ.

2018-19ನೇ ಸಾಲಿನಲ್ಲಿ ಬೆಳ್ತಂಗಡಿ ತಾಲೂಕಿನ ಕುಪ್ಪೆಟ್ಟಿ ಕ್ಲಸ್ಟರ್ ನಲ್ಲಿ ಸಮೂಹ ಸಂಪನ್ಮೂಲ ವ್ಯಕ್ತಿಯಾಗಿ(CRP )ಸೇವೆ ಪ್ರಾರಂಭಿಸಿದ ಇವರು ಆರು ವರ್ಷಗಳಿಂದ ಅತ್ಯಂತ ಪ್ರಾಮಾಣಿಕತೆ ನಿಷ್ಠೆಯಿಂದ ತಮ್ಮ ಕರ್ತವ್ಯ ನಿರ್ವಹಿಸಿ ತಮ್ಮ ಕ್ಲಸ್ಟರ್ನಲ್ಲಿ ಬರುವ 19 ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿ ಬೆಳ್ತಂಗಡಿ ತಾಲೂಕಿನಲ್ಲಿಕುಪ್ಪೆಟ್ಟಿ ಕ್ಲಸ್ಟರ್ ಅನ್ನು ಮಾದರಿಯನ್ನಾಗಿಸಿದ ಅತ್ಯಂತ ಕ್ರಿಯಾಶೀಲ ವ್ಯಕ್ತಿತ್ವ ಇವರದು.

ಎಲ್ಲಾ ಸಹೋದ್ಯೋಗಿ ಬಂಧುಗಳ ಜೊತೆ ಪ್ರೀತಿ ತಾಳ್ಮೆಯಿಂದ ಕಾರ್ಯನಿರ್ವಹಿಸುತ್ತಿದ್ದ ಇವರನ್ನು ಜುಲೈ 27 ರಂದು ಸ.ಕಿ.ಪ್ರಾ ಶಾಲೆ ನೆಕ್ಕಿಲು ಇಲ್ಲಿ ಕುಪ್ಪೆಟ್ಟಿ ಕ್ಲಸ್ಟರ್ನ ವತಿಯಿಂದ ಅತ್ಯಂತ ಗೌರವ ಪೂರ್ವಕವಾಗಿ ಬೀಳ್ಕೊಡಲಾಯಿತು.

Related posts

ಧರ್ಮಸ್ಥಳ: ನಮ್ಮೂರು ನಮ್ಮ ಕೆರೆ ಸಮಿತಿ ಸದಸ್ಯರೊಂದಿಗೆ ಸಂವಾದ ಹಾಗೂ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಸೌತಡ್ಕ ಪರಿಸರದಲ್ಲಿ ಬೀಡು ಬಿಟ್ಟ ಅರಣ್ಯ ಇಲಾಖೆ: ಸುಳ್ಳು ಸುದ್ದಿಗಳಿಗೆ ಕಿವಿ ಕೊಡದಂತೆ ಮನವಿ

Suddi Udaya

ಗುಂಡೂರಿ ವಿವೇಕಾನಂದ ಸೇವಾ ಟ್ರಸ್ಟ್‌ನಲ್ಲಿ ಹುಟ್ಟು ಹಬ್ಬ ಮತ್ತು ಸಂಸ್ಮರಣೆ ಕಾರ್ಯಕ್ರಮ

Suddi Udaya

ಜೂ.23 : ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಮಹೋತ್ಸವ ಸಂಭ್ರಮ: 1 ಕೋಟಿ 10 ಲಕ್ಷ ರೂ. ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಅಂತಿಮ ಸಿದ್ಧತೆ

Suddi Udaya

ಬೆಳ್ತಂಗಡಿ: ಖೋಟಾ ನೋಟು ಮುದ್ರಣ ಜಾಲ ಪತ್ತೆ ಪ್ರಕರಣ: ಆರೋಪಿಗಳು 6 ದಿನ ಪೊಲೀಸ್ ಕಷ್ಟಡಿಗೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya
error: Content is protected !!