25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿ

ನಾಳೆ (ಜು.28) ಕುಲಾಲ ಮಂದಿರದಲ್ಲಿನೂತನ ಸಂಸದ ಕ್ಯಾ| ಬೃಜೇಶ್ ಚೌಟರಿಗೆ ಅಭಿನಂದನೆ – ವಿದ್ಯಾರ್ಥಿ ವೇತನ ವಿತರಣೆ – ಆಟಿ ಕೂಟ ಕಾಯ೯ಕ್ರಮ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಗುರುವಾಯನಕೆರೆ ಮತ್ತು ಕುಲಾಲ, ಕುಂಬಾರರ ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ಸಹಯೋಗದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟರವರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ವಿದ್ಯಾರ್ಥಿ ವೇತನ ವಿತರಣೆ ಮತ್ತು ಆಟಿದ ಕೂಟ ಕಾರ್ಯಕ್ರಮ ಜು.28 ರಂದು ಕುಲಾಲ ಮಂದಿರ ಗುರುವಾಯನಕೆರೆಯಲ್ಲಿ ಜರುಗಲಿದೆ.

ಜು. 21ರಂದು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಮಾಸಿಕ ಸಭೆಯಲ್ಲಿ
ಈ ನಿಧಾ೯ರವನ್ನು ಕೈಗೊಳ್ಳಲಾಯಿತು. ಅಧ್ಯಕ್ಷತೆಯನ್ನು
ಸಂಘದ ಅಧ್ಯಕ್ಷ ಹರೀಶ್ ಕಾರಿಂಜ ಇವರು ವಹಿಸಿದ್ದರು.
ಸಂಘದ ಕಾರ್ಯದರ್ಶಿ ಯತೀಶ್ ಸಿರಿಮಜಲ್ ಸ್ವಾಗತಿಸಿ ಹಿಂದಿನ ಸಭೆಯ ನಡವಳಿ ಓದಿ ಮಂದಿಸಿದರು. ಜು.28.ರ ಆದಿತ್ಯವಾರ ರಂದು ಶಾಸಕರಾದ ಹರೀಶ್ ಪೂಂಜಾ ಇವರ ಉಪಸ್ಥಿತಿಯಲ್ಲಿ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರನ್ನು ಅಭಿನಂದಿಸುವುದು ಮತ್ತು ಪ್ರಸ್ತುತ ವರ್ಷದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ತರಗತಿಯಲ್ಲಿ ಡಿಸ್ಟಿಂಕ್ಷನ್ (ಶೇಕಡಾ 85.00% ಮತ್ತು ಅಧಿಕ ಅಂಕ) ಪಡೆದ ಸ್ವಜಾತಿ ವಿದ್ಯಾರ್ಥಿಗಳನ್ನು ಗೌರವಿಸುವುದು* ಹಾಗೂ ಆಟಿಡೊಂಜಿ ಕೂಟ* ಕಾರ್ಯಕ್ರಮ ನಡೆಸುವುದು ಎಂದು. ತೀರ್ಮಾನಿಸಲಾಯಿತು.

ನಮ್ಮ ಸಂಘದ ಎಲ್ಲಾ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಈ ಮೂಲಕ ವಿನಂತಿಸಲಾಯಿತು. ಸಭೆಯಲ್ಲಿ ಲೋಕೇಶ್ ಕುಲಾಲ್ ಕಂಚಿಂಜ, ಜಗನ್ನಾಥ್ ಸಿರಿಮಜಲ್, ತಿಲಕ್ ರಾಜ್ ಕುಲಾಲ್ ಕಂಚಿಂಜ, ಹರೀಶ್ ಮೂಲ್ಯ ನಾರಾವಿ, ಪ್ರವೀಣ್ ಕುಲಾಲ್ ಬರಾಯ, ಮೋಹನ್ ಕುಲಾಲ್ ಕಂಚಿಂಜ, ಹರಿಶ್ಚಂದ್ರ ಕುಲಾಲ್ ಪಾಂಡೇಶ್ವರ, ಸಂಜೀವ ಕುಲಾಲ್ ಬೆಳ್ತಂಗಡಿ, ಗಣೇಶ್ ಕುಲಾಲ್ ಗುರುವಾಯನಕೆರೆ, ದಯಾನಂದ ಕುಲಾಲ್ ಅಂಡಿಂಜೆ, ಸಂಘದ ಮೆನೇಜರ್ ಮುಖೇಶ್ ಕುಲಾಲ್ ಉಪಸ್ಥಿತರಿದ್ದರು.

Related posts

ಸ್ನಾನಘಟ್ಟದಿಂದ ಅಜಿಕುರಿ ತನಕ ಹದೆಗೆಟ್ಟ ರಸ್ತೆ :ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯೆ ಬಾಳೆಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗ ದೇವಸ್ಥಾನದ ಬ್ರಹ್ಮಕಲಶ: ಚಪ್ಪರ ಮುಹೂರ್ತ

Suddi Udaya

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

Suddi Udaya

ಪಂಪು ಶೆಡ್ ಫ್ಯೂಸ್ ನಲ್ಲಿ ಅವಿತು ಕೊಂಡ ಅಪಾಯಕಾರಿ ಹಾವು

Suddi Udaya
error: Content is protected !!