23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ ಶ್ರೀರಾಮ ಭಜನಾ ಮಂದಿರದ ವಾರ್ಷಿಕ ಸಭೆ: ನೂತನ ಪಧಾದಿಕಾರಿಗಳ ಆಯ್ಕೆ

ಕುವೆಟ್ಟು: ಮದ್ದಡ್ಕ ಶ್ರೀರಾಮ ಭಜನಾ ಮಂದಿರ ಇದರ ವಾರ್ಷಿಕ ಸಭೆಯು ಅಧ್ಯಕ್ಷ ರಾಜ್‌ಪ್ರಕಾಶ್ ಪಡ್ಡೈಲು ಇವರ ಅಧ್ಯಕ್ಷತೆಯಲ್ಲಿ ಜು.26ರಂದು ಭಜನಾ ಮಂದಿರದಲ್ಲಿ ಜರಗಿತು.

ಸಭೆಯಲ್ಲಿ ನೂತನ ಪಧಾದಿಕಾರಿಗಳ ಆಯ್ಕೆ ಮತ್ತು ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಗೌರವಾಧ್ಯಕ್ಷರಾಗಿ ರಾಜ್‌ಪ್ರಕಾಶ್ ಶೆಟ್ಟಿ ಪಡ್ಡೈಲು, ನೂತನ ಅಧ್ಯಕ್ಷರಾಗಿ ಮನೋಹರ ಕೇದಳಿಕೆ, ಪ್ರಧಾನ ಕಾರ್ಯದರ್ಶಿಯಾಗಿ ಪ್ರೀತಮ್ ಆಚಾರಿ ಮದ್ದಡ್ಕ, ಕೋಶಾಧಿಕಾರಿಯಾಗಿ ಸಚಿನ್ ವರ್ಧನ್ ಮದ್ದಡ್ಕ, ಉಪಾಧ್ಯಕ್ಷರಾಗಿ ಗಣೇಶ್ ಆಚಾರಿ ಮದ್ದಡ್ಕ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷ ಮನೋಹರ ಕೇದಳಿಕೆ ಮಾತನಾಡಿ ಮುಂದಿನ ದಿನಗಳಲ್ಲಿ ನಡೆಯುವಂತಹ ಧಾರ್ಮಿಕ ಹಬ್ಬಗಳನ್ನು ಭಜನಾ ಕಾರ್ಯಕ್ರಮ ಯಶಶ್ವಿಯಾಗಿ ನಡೆಸಲು ಎಲ್ಲಾ ಸದಸ್ಯರ ಸಹಕಾರ ಕೋರಿದರು.
ಸಭೆಯಲ್ಲಿ ಶೇಖರ್ ಶೆಟ್ಟಿ ಉಪ್ಪಡ್ಕ, ಜಯರಾಮ್ ಶೆಟ್ಟಿ ಕಿನ್ನಿಗೋಳಿ, ಉಮೇಶ್ ಕುಮಾರ್ (ಮನು)ಮದ್ದಡ್ಕ, ಶಿವರಾಮ ಶೆಟ್ಟಿ ಉಪ್ಪಡ್ಕ, ಹರೀಶ್ ಬಪ್ಪಳಿಕೆ, ಯಶೋಧರ ಶೆಟ್ಟಿ ಅರ್ಕಜೆ, ಸುರೇಶ್ ಕುಲಾಲ್ ಓಡೀಲು, ಪುನಿತ್ ಶೆಟ್ಟಿ, ಅನುರಾಗ್ ಮದ್ದಡ್ಕ, ಶೈಲೇಶ್ ಪೂಜಾರಿ ಭದ್ರಕಜೆ ಉಪಸ್ಥಿತರಿದ್ದರು

Related posts

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ

Suddi Udaya

ಅಳದಂಗಡಿ ಬಡಗಕಾರಂದೂರು ಪ್ರಗತಿ ಬಂಧು ಎ’ಬಿ ಒಕ್ಕೂಟದ ಅಧ್ಯಕ್ಷರುಗಳಾಗಿ ಹರೀಶ್ ಸಾಲಿಯನ್, ಕೃಷ್ಣಪ್ಪ ಪೂಜಾರಿ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಆಶಾ ಹರೀಶ್ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22 ರಂದು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹನುಮಾನ್ ಚಾಲಿಸಾ ರಾಮತಾರಕ ಮಂತ್ರ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಬಳಂಜ: ಅಟ್ಲಾಜೆ ಅಂಗನವಾಡಿ ಶಿಕ್ಷಕಿ ಜಾನಕಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!