23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ “ಪಂಜಿನ ಮೆರವಣಿಗೆ”

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ, ತಾಲೂಕು ಯುವಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ ಪಂಜಿನ ಮೆರವಣಿಗೆಯು ಜು.26ರಂದು ಸಂತೆಕಟ್ಟೆ ಅಯ್ಯಪ್ಪ ಮಂದಿರ ಬಳಿಯಿಂದ ಮೂರು ಮಾರ್ಗ ದ ಸ್ಮಾರಕದವರೆಗೆ ನಡೆಯಿತು.

ನಿವೃತ್ತ ಯೋಧ ಶಿವಕುಮಾರ್ ಭಾರತಮಾತೆಗೆ ಪುಷ್ಪಾರ್ಚನೆ ಸಲ್ಲಿಸಿ, ಕಾರ್ಗಿಲ್ ಯುದ್ಧದ ಕ್ಷಣದಲ್ಲಿ ಭಾರತ ಗೆಲುವು ಸಾಧಿಸಿದ ಕ್ಷಣವನ್ನು ನೆನಪಿಸಿದರು.

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಕಾರ್ಗಿಲ್ ವಿಜಯ್ ದಿವಸ್ ೨೫ ವರ್ಷ ಸಂದಿರುವ ಬಗ್ಗೆ ಮಾತಾಡಿ ದೇಶಕ್ಕಾಗಿ ಬಲಿದಾನ ಮಾಡಿದ ವೀರ ಯೋಧರಿಗೆ ನಮನ ಸಲ್ಲಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ರಾಷ್ಟ್ರಭಿಮಾನಿಗಳಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ಪ್ರಭಾರಿ ಮಂಡಲ ಪ್ರಧಾನ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯಪ್ರಸಾದ್ ಗೌಡ ಕಡಮ್ಮಾಜೆ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ಗೌಡ, ಜಿಲ್ಲಾ ಓಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಿಧರ ಕಲ್ಮಂಜ, ತಾಲೂಕು ಮಜ್ದೂರ್ ಅಧ್ಯಕ್ಷ, ವಕೀಲ ಉದಯ ಬಿ.ಕೆ. ಬಂದಾರು, ಯುವ ವಕೀಲ ಯತೀಶ್ ಪಣೆಕ್ಕರ, ಯುವಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು ರಾಷ್ಟ್ರ ಪ್ರೇಮಿಗಳು ಉಪಸ್ಥಿತರಿದ್ದರು

ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ ಸ್ವಾಗತಿಸಿದರು.

Related posts

ಮಲವಂತಿಗೆ: ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ನಿಧನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಭಜನಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ನಾರಾವಿ ಶ್ರೀ ಕ್ಷೇ.ಧ. ಜನಮಂಗಳ ಕಾರ್ಯಕ್ರಮದಡಿಯಲ್ಲಿ ಯು ಶೇಪ್ ವಾಕರ್ ವಿತರಣೆ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್‍ಸ್‌ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ: ಎಸ್.ಐ.ಟಿ ತನಿಖೆಗೆ ಆಗ್ರಹ: ಆ.28ರಂದು ಬೆಳ್ತಂಗಡಿಯಲ್ಲಿ ರಾಜ್ಯ ಮಟ್ಟದ ‘ಚಲೋ ಬೆಳ್ತಂಗಡಿ ಮಹಾ ಧರಣಿ’: ವಿರೋಧಿ ಶಕ್ತಿಗಳ ಸುಳ್ಳು ಸುದ್ದಿಗಳಿಗೆ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ

Suddi Udaya

ನಿವೃತ್ತ ಸಾಧಕ ಯೋಧ ಪ್ರಶಸ್ತಿ ಸ್ವೀಕರಿಸಿ ಆಗಮಿಸಿದ ಲ| ಡಾ.ಗೋಪಾಲಕೃಷ್ಣ ಕಾಂಚೋಡು: ಉಜಿರೆಯಲ್ಲಿ ಭವ್ಯವಾದ ಸ್ವಾಗತ – ಅಭಿನಂದನೆ

Suddi Udaya
error: Content is protected !!