25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಬೆಳ್ತಂಗಡಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ನೆಲ್ಯಾಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರ ನೆಲ್ಯಾಡಿಯಲ್ಲಿ ಜು.26ರಂದು ಭಾರತೀಯ ಸೇನೆಯು ಪಾಕಿಸ್ತಾನವನ್ನು ಕಾರ್ಗಿಲ್ ಯುದ್ಧದಲ್ಲಿ ಪರಾಭವಗೊಳಿಸಿದ ಸವಿ ನೆನಪಿನ ಕಾರ್ಗಿಲ್ ವಿಜಯ ದಿವಸ್ ಅದ್ದೂರಿಯಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸೇನೆಯಲ್ಲಿ ಸೇವೆ ಸಲ್ಲಿಸಿದ ಯೋಧರಾದ ನೈನಾನ್ ಓಲಿಕಲ್ (ಭಾರತೀಯ ನೌಕಾ ಪಡೆ), ಜೋನ್ ಕಾರ್ಮಲ್ ಭವನ್ (ಭಾರತೀಯ ಭೂ ಸೇನೆ), ಬೇಬಿ ಮಟ್ಟಮ್ (ಭಾರತೀಯ ಭೂ ಸೇನೆ), ಅಲೆಕ್ಸ್ ಚೆಛಬಿತ್ತಾನಮ್ (ಭಾರತೀಯ ಭೂ ಸೇನೆ), ಟೋಮಿ ಚುಂಡಯಿಲ್ (ಭಾರತೀಯ ಭೂ ಸೇನೆ), ಮತ್ತಚ್ಚನ್ ವಾಯಪ್ಪಳ್ಳಿ (ಭಾರತೀಯ ಭೂ ಸೇನೆ), ವಿನೋದ್ ಎ.ಜೆ. (ವಾಯುಸೇನೆ ಸಿ.ಆರ್.ಪಿ.ಎಫ್), ಶ್ರೀಮತಿ ಲಿಸಿ ಡೊಮಿನಿಕ್ (ಆರ್‌ಪಿಎಫ್ ಗಡಿ ರಕ್ಷಣಾ ಪಡೆ ಕಮಾಂಡೆಂಟ್), ಶ್ರೀಮತಿ ಅನ್ನಮ್ಮ ಯೇಸುದಾಸ್ (ಆರ್‌ಪಿಎಫ್ ಗಡಿ ರಕ್ಷಣಾ ಪಡೆ ಕಮಾಂಡೆಂಟ್) ಇವರುಗಳನ್ನು ಅಭಿನಂದಿಸಿ ಗೌರವಿಸಲಾಯಿತು.

ಯುದ್ಧದಲ್ಲಿ ಮೃತಪಟ್ಟ ಸೈನಿಕರಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಧರ್ಮ ಗುರು ವಂ. ಫಾ. ಶಾಜಿ ಮಾತ್ಯು ಸೈನಿಕರ ಸೇವೆಯನ್ನು ಮುಕ್ತ ಕಂಠದಿಂದ ಪ್ರಶಂಸಿಸಿದರು. ಪುತ್ತೂರು ಧರ್ಮಾಧ್ಯಕ್ಷ ಗೀವರ್ಗಿಸ್ ಮಾರ್ ಮಕಾರಿಯೋಸ್ ಅವರು ಸೈನಿಕರನ್ನು ಶಾಲು ಹೊದಿಸಿ ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಚರ್ಚ್ ಪಾಲನಾ ಸಮಿತಿಯ ಅಲೆಕ್ಸ್, ಜೋಬಿನ್, ರೆ. ಫಾ. ಕೈಪನಡ್ಕ, ರೆ. ಫಾ. ಬಿಜು ಜೋನ್ ಕುನ್ನತೇತ್ತ್, ಫಾ. ನೋಮಿಸ್, ಕೆ.ಎಸ್.ಎಂ.ಸಿ.ಯ ಅಧ್ಯಕ್ಷ ಶಿಬು ಪನಚಿಕ್ಕಲ್, ರಂಜನ್ ರಾಯಲ್ಸ್, ಬಿನಿಶ್ ರೊಯ್ ಕೊಳಂಗರಾತ್ತ್ ಮೊದಲಾದವರು ಭಾಗವಹಿಸಿದ್ದರು.

Related posts

ಧರ್ಮಸ್ಥಳದ ಮೇಲೆ ಅಪಪ್ರಚಾರವನ್ನು ಸೃಷ್ಟಿಸಿರುವ ಮುಖವಾಡದ ಹಿಂದೆ ಇರುವ ಧಾರ್ಮಿಕ ವಿರೋಧಿ ಶಕ್ತಿಗಳ ವಿರುದ್ಧ ಸಿಬಿಐ ಅಥವಾ ಎನ್.ಐ.ಎ ತನಿಖೆ ನಡೆಸಿ ಕಠಿಣ ಶಿಕ್ಷೆಗೆ ಗುರಿಪಡಿಸಿ ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಪರಿಷತ್ ಅಧ್ಯಕ್ಷ ಡಾ. ಸಂಪತ್ ಕುಮಾರ್ ಆಗ್ರಹ

Suddi Udaya

ಗುರುವಾಯನಕೆರೆ ಶಕ್ತಿನಗರದ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಪೊಲೀಸ್ ದಾಳಿ: ಇಬ್ಬರ ಬಂಧನ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya

ಕಾಯರ್ತಡ್ಕ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಆಚರಣೆ

Suddi Udaya

ಬೆಳ್ತಂಗಡಿ : ಮೂರುಗೋಳಿಯ ಪ್ರವೀಣ್.ಎಂ‌‌ ಅವರಿಗೆ ಮುಖ್ಯಮಂತ್ರಿ ಪದಕ ಪ್ರದಾನ:

Suddi Udaya
error: Content is protected !!