September 6, 2026
Uncategorized

ಬೆಳ್ತಂಗಡಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ನೆಲ್ಯಾಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರ ನೆಲ್ಯಾಡಿಯಲ್ಲಿ ಜು.26ರಂದು ಭಾರತೀಯ ಸೇನೆಯು ಪಾಕಿಸ್ತಾನವನ್ನು ಕಾರ್ಗಿಲ್ ಯುದ್ಧದಲ್ಲಿ ಪರಾಭವಗೊಳಿಸಿದ ಸವಿ ನೆನಪಿನ ಕಾರ್ಗಿಲ್ ವಿಜಯ ದಿವಸ್ ಅದ್ದೂರಿಯಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸೇನೆಯಲ್ಲಿ ಸೇವೆ ಸಲ್ಲಿಸಿದ ಯೋಧರಾದ ನೈನಾನ್ ಓಲಿಕಲ್ (ಭಾರತೀಯ ನೌಕಾ ಪಡೆ), ಜೋನ್ ಕಾರ್ಮಲ್ ಭವನ್ (ಭಾರತೀಯ ಭೂ ಸೇನೆ), ಬೇಬಿ ಮಟ್ಟಮ್ (ಭಾರತೀಯ ಭೂ ಸೇನೆ), ಅಲೆಕ್ಸ್ ಚೆಛಬಿತ್ತಾನಮ್ (ಭಾರತೀಯ ಭೂ ಸೇನೆ), ಟೋಮಿ ಚುಂಡಯಿಲ್ (ಭಾರತೀಯ ಭೂ ಸೇನೆ), ಮತ್ತಚ್ಚನ್ ವಾಯಪ್ಪಳ್ಳಿ (ಭಾರತೀಯ ಭೂ ಸೇನೆ), ವಿನೋದ್ ಎ.ಜೆ. (ವಾಯುಸೇನೆ ಸಿ.ಆರ್.ಪಿ.ಎಫ್), ಶ್ರೀಮತಿ ಲಿಸಿ ಡೊಮಿನಿಕ್ (ಆರ್‌ಪಿಎಫ್ ಗಡಿ ರಕ್ಷಣಾ ಪಡೆ ಕಮಾಂಡೆಂಟ್), ಶ್ರೀಮತಿ ಅನ್ನಮ್ಮ ಯೇಸುದಾಸ್ (ಆರ್‌ಪಿಎಫ್ ಗಡಿ ರಕ್ಷಣಾ ಪಡೆ ಕಮಾಂಡೆಂಟ್) ಇವರುಗಳನ್ನು ಅಭಿನಂದಿಸಿ ಗೌರವಿಸಲಾಯಿತು.

ಯುದ್ಧದಲ್ಲಿ ಮೃತಪಟ್ಟ ಸೈನಿಕರಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಧರ್ಮ ಗುರು ವಂ. ಫಾ. ಶಾಜಿ ಮಾತ್ಯು ಸೈನಿಕರ ಸೇವೆಯನ್ನು ಮುಕ್ತ ಕಂಠದಿಂದ ಪ್ರಶಂಸಿಸಿದರು. ಪುತ್ತೂರು ಧರ್ಮಾಧ್ಯಕ್ಷ ಗೀವರ್ಗಿಸ್ ಮಾರ್ ಮಕಾರಿಯೋಸ್ ಅವರು ಸೈನಿಕರನ್ನು ಶಾಲು ಹೊದಿಸಿ ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಚರ್ಚ್ ಪಾಲನಾ ಸಮಿತಿಯ ಅಲೆಕ್ಸ್, ಜೋಬಿನ್, ರೆ. ಫಾ. ಕೈಪನಡ್ಕ, ರೆ. ಫಾ. ಬಿಜು ಜೋನ್ ಕುನ್ನತೇತ್ತ್, ಫಾ. ನೋಮಿಸ್, ಕೆ.ಎಸ್.ಎಂ.ಸಿ.ಯ ಅಧ್ಯಕ್ಷ ಶಿಬು ಪನಚಿಕ್ಕಲ್, ರಂಜನ್ ರಾಯಲ್ಸ್, ಬಿನಿಶ್ ರೊಯ್ ಕೊಳಂಗರಾತ್ತ್ ಮೊದಲಾದವರು ಭಾಗವಹಿಸಿದ್ದರು.

Related posts

ಭಾ.ಜ.ಪಾ ಬೆಳ್ತಂಗಡಿ ಮಂಡಲ ವತಿಯಿಂದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ

Suddi Udaya

ಸಂತ ಅಂತೋನಿ ಪದವಿ ಕಾಲೇಜು ಹಾಗೂ ಪದವಿಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಲಾ ಸಂಭ್ರಮ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 341 ಕೋಟಿ ವ್ಯವಹಾರ, ರೂ. 1.53 ಕೋಟಿ ಲಾಭ, ಸದಸ್ಯರಿಗೆ ಶೇ. 13 ಡಿವಿಡೆಂಟ್

Suddi Udaya

ಮಿತ್ತಬಾಗಿಲು ಕೊಪ್ಪದಗುಂಡಿ ಕಿಂಡಿ ಅಣೆಕಟ್ಟು ಮುಳುಗಡೆ:ಬೈಕ್ ಸಹಿತ ನೀರು ಪಾಲಾದ ವ್ಯಕ್ತಿ ಅಪಾಯದಿಂದ ಪಾರು

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ಗುರುವಾಯನಕೆರೆ ನವಶಕ್ತಿ ಮನೆಗೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya
error: Content is protected !!