23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಬೆಳ್ತಂಗಡಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ನೆಲ್ಯಾಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರ ನೆಲ್ಯಾಡಿಯಲ್ಲಿ ಜು.26ರಂದು ಭಾರತೀಯ ಸೇನೆಯು ಪಾಕಿಸ್ತಾನವನ್ನು ಕಾರ್ಗಿಲ್ ಯುದ್ಧದಲ್ಲಿ ಪರಾಭವಗೊಳಿಸಿದ ಸವಿ ನೆನಪಿನ ಕಾರ್ಗಿಲ್ ವಿಜಯ ದಿವಸ್ ಅದ್ದೂರಿಯಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸೇನೆಯಲ್ಲಿ ಸೇವೆ ಸಲ್ಲಿಸಿದ ಯೋಧರಾದ ನೈನಾನ್ ಓಲಿಕಲ್ (ಭಾರತೀಯ ನೌಕಾ ಪಡೆ), ಜೋನ್ ಕಾರ್ಮಲ್ ಭವನ್ (ಭಾರತೀಯ ಭೂ ಸೇನೆ), ಬೇಬಿ ಮಟ್ಟಮ್ (ಭಾರತೀಯ ಭೂ ಸೇನೆ), ಅಲೆಕ್ಸ್ ಚೆಛಬಿತ್ತಾನಮ್ (ಭಾರತೀಯ ಭೂ ಸೇನೆ), ಟೋಮಿ ಚುಂಡಯಿಲ್ (ಭಾರತೀಯ ಭೂ ಸೇನೆ), ಮತ್ತಚ್ಚನ್ ವಾಯಪ್ಪಳ್ಳಿ (ಭಾರತೀಯ ಭೂ ಸೇನೆ), ವಿನೋದ್ ಎ.ಜೆ. (ವಾಯುಸೇನೆ ಸಿ.ಆರ್.ಪಿ.ಎಫ್), ಶ್ರೀಮತಿ ಲಿಸಿ ಡೊಮಿನಿಕ್ (ಆರ್‌ಪಿಎಫ್ ಗಡಿ ರಕ್ಷಣಾ ಪಡೆ ಕಮಾಂಡೆಂಟ್), ಶ್ರೀಮತಿ ಅನ್ನಮ್ಮ ಯೇಸುದಾಸ್ (ಆರ್‌ಪಿಎಫ್ ಗಡಿ ರಕ್ಷಣಾ ಪಡೆ ಕಮಾಂಡೆಂಟ್) ಇವರುಗಳನ್ನು ಅಭಿನಂದಿಸಿ ಗೌರವಿಸಲಾಯಿತು.

ಯುದ್ಧದಲ್ಲಿ ಮೃತಪಟ್ಟ ಸೈನಿಕರಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಧರ್ಮ ಗುರು ವಂ. ಫಾ. ಶಾಜಿ ಮಾತ್ಯು ಸೈನಿಕರ ಸೇವೆಯನ್ನು ಮುಕ್ತ ಕಂಠದಿಂದ ಪ್ರಶಂಸಿಸಿದರು. ಪುತ್ತೂರು ಧರ್ಮಾಧ್ಯಕ್ಷ ಗೀವರ್ಗಿಸ್ ಮಾರ್ ಮಕಾರಿಯೋಸ್ ಅವರು ಸೈನಿಕರನ್ನು ಶಾಲು ಹೊದಿಸಿ ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಚರ್ಚ್ ಪಾಲನಾ ಸಮಿತಿಯ ಅಲೆಕ್ಸ್, ಜೋಬಿನ್, ರೆ. ಫಾ. ಕೈಪನಡ್ಕ, ರೆ. ಫಾ. ಬಿಜು ಜೋನ್ ಕುನ್ನತೇತ್ತ್, ಫಾ. ನೋಮಿಸ್, ಕೆ.ಎಸ್.ಎಂ.ಸಿ.ಯ ಅಧ್ಯಕ್ಷ ಶಿಬು ಪನಚಿಕ್ಕಲ್, ರಂಜನ್ ರಾಯಲ್ಸ್, ಬಿನಿಶ್ ರೊಯ್ ಕೊಳಂಗರಾತ್ತ್ ಮೊದಲಾದವರು ಭಾಗವಹಿಸಿದ್ದರು.

Related posts

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya

ಪ್ರಾಜೆಕ್ಟ್ ಡಿಸೈನ್ ವಿಭಾಗದಲ್ಲಿ ಎಕ್ಸ್ ಪ್ರೋ 201 ಅವಾರ್ಡ್, ವಾರಾಣಸಿ ಸುಬ್ರಾಯ ಭಟ್ ಅವಾರ್ಡ್, ಪ್ರೋಡೆಕ್ಟ್ ಇಂಜಿನಿಯರ್ ಅವಾರ್ಡ್ ಪಡೆದ ಅಜಿತ್ ಕುಮಾರ್ ತೆಂಕಕಾರಂದೂರು

Suddi Udaya

ಸೆ .13: ಶ್ರವಣಬೆಳಗೊಳದ ಮಹಾಸ್ವಾಮೀಜಿ ಬೆಳ್ತಂಗಡಿ ಪುರ ಪ್ರವೇಶ

Suddi Udaya

ಭರತನಾಟ್ಯ ಜ್ಯೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಮಾಲಾಡಿ ಯುವಕ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

Suddi Udaya

ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿಯ ದೂರು ಪ್ರಕರಣ :ಕೇಸು ದಾಖಲಿಸಿಕೊಂಡ ಧರ್ಮಸ್ಥಳ ಠಾಣಾ ಪೊಲೀಸರು

Suddi Udaya
error: Content is protected !!