23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಬೆಳ್ತಂಗಡಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ನೆಲ್ಯಾಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರ ನೆಲ್ಯಾಡಿಯಲ್ಲಿ ಜು.26ರಂದು ಭಾರತೀಯ ಸೇನೆಯು ಪಾಕಿಸ್ತಾನವನ್ನು ಕಾರ್ಗಿಲ್ ಯುದ್ಧದಲ್ಲಿ ಪರಾಭವಗೊಳಿಸಿದ ಸವಿ ನೆನಪಿನ ಕಾರ್ಗಿಲ್ ವಿಜಯ ದಿವಸ್ ಅದ್ದೂರಿಯಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸೇನೆಯಲ್ಲಿ ಸೇವೆ ಸಲ್ಲಿಸಿದ ಯೋಧರಾದ ನೈನಾನ್ ಓಲಿಕಲ್ (ಭಾರತೀಯ ನೌಕಾ ಪಡೆ), ಜೋನ್ ಕಾರ್ಮಲ್ ಭವನ್ (ಭಾರತೀಯ ಭೂ ಸೇನೆ), ಬೇಬಿ ಮಟ್ಟಮ್ (ಭಾರತೀಯ ಭೂ ಸೇನೆ), ಅಲೆಕ್ಸ್ ಚೆಛಬಿತ್ತಾನಮ್ (ಭಾರತೀಯ ಭೂ ಸೇನೆ), ಟೋಮಿ ಚುಂಡಯಿಲ್ (ಭಾರತೀಯ ಭೂ ಸೇನೆ), ಮತ್ತಚ್ಚನ್ ವಾಯಪ್ಪಳ್ಳಿ (ಭಾರತೀಯ ಭೂ ಸೇನೆ), ವಿನೋದ್ ಎ.ಜೆ. (ವಾಯುಸೇನೆ ಸಿ.ಆರ್.ಪಿ.ಎಫ್), ಶ್ರೀಮತಿ ಲಿಸಿ ಡೊಮಿನಿಕ್ (ಆರ್‌ಪಿಎಫ್ ಗಡಿ ರಕ್ಷಣಾ ಪಡೆ ಕಮಾಂಡೆಂಟ್), ಶ್ರೀಮತಿ ಅನ್ನಮ್ಮ ಯೇಸುದಾಸ್ (ಆರ್‌ಪಿಎಫ್ ಗಡಿ ರಕ್ಷಣಾ ಪಡೆ ಕಮಾಂಡೆಂಟ್) ಇವರುಗಳನ್ನು ಅಭಿನಂದಿಸಿ ಗೌರವಿಸಲಾಯಿತು.

ಯುದ್ಧದಲ್ಲಿ ಮೃತಪಟ್ಟ ಸೈನಿಕರಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಧರ್ಮ ಗುರು ವಂ. ಫಾ. ಶಾಜಿ ಮಾತ್ಯು ಸೈನಿಕರ ಸೇವೆಯನ್ನು ಮುಕ್ತ ಕಂಠದಿಂದ ಪ್ರಶಂಸಿಸಿದರು. ಪುತ್ತೂರು ಧರ್ಮಾಧ್ಯಕ್ಷ ಗೀವರ್ಗಿಸ್ ಮಾರ್ ಮಕಾರಿಯೋಸ್ ಅವರು ಸೈನಿಕರನ್ನು ಶಾಲು ಹೊದಿಸಿ ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಚರ್ಚ್ ಪಾಲನಾ ಸಮಿತಿಯ ಅಲೆಕ್ಸ್, ಜೋಬಿನ್, ರೆ. ಫಾ. ಕೈಪನಡ್ಕ, ರೆ. ಫಾ. ಬಿಜು ಜೋನ್ ಕುನ್ನತೇತ್ತ್, ಫಾ. ನೋಮಿಸ್, ಕೆ.ಎಸ್.ಎಂ.ಸಿ.ಯ ಅಧ್ಯಕ್ಷ ಶಿಬು ಪನಚಿಕ್ಕಲ್, ರಂಜನ್ ರಾಯಲ್ಸ್, ಬಿನಿಶ್ ರೊಯ್ ಕೊಳಂಗರಾತ್ತ್ ಮೊದಲಾದವರು ಭಾಗವಹಿಸಿದ್ದರು.

Related posts

ಚಾರ್ಮಾಡಿ ಗ್ರಾಮದ ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆ ಪತ್ತೆ

Suddi Udaya

ನಿಟ್ಟಡೆ: ಗೋಳಿಯಂಗಡಿಯಲ್ಲಿ ಬೈಕ್ ಗೆ ಡಿಕ್ಕಿಯೊಡೆದ ಆಟೋ ರಿಕ್ಷಾ

Suddi Udaya

ಅಂಡಿಂಜೆ ಗ್ರಾ.ಪಂ. ವತಿಯಿಂದ ಪ.ಜಾತಿ, ಪ. ಪಂಗಡದ ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ತಲಾ ಎರಡರಂತೆ ಚಯರ್ ವಿತರಣೆ

Suddi Udaya

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಬೆಳ್ತಂಗಡಿ ಪಿಡಬ್ಲ್ಯೂಡಿ ಪ್ರಥಮ ಸಹಾಯಕ ನರೇಂದ್ರ ಭಟ್ ಶಟಲ್ ಬ್ಯಾಡ್ಮಿಂಟನ್ ನಲ್ಲಿ ದ್ವಿತೀಯ ಸ್ಥಾನ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ: “ ಸು ಫ್ರಮ್ ಸೋ “ ನಿರ್ದೇಶಕ, ನಟ ಜೆ. ಪಿ. ತುಮಿನಾಡ್ ಕುಟುಂಬ ಸಮೇತರಾಗಿ ಭೇಟಿ

Suddi Udaya

ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳ ಅಕ್ರಮ ಸಾಗಾಟ: ವಾಹನ ಸಹಿತ ಇಬ್ಬರ ಬಂಧನ

Suddi Udaya
error: Content is protected !!