ಬೆಳ್ತಂಗಡಿ: ಗಾಳಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಬೆಳ್ತಂಗಡಿ: ತಾಲೂಕಿನಲ್ಲಿ ಮಳೆ ಗಾಳಿಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಜನರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗಳನ್ನು ತಿಳಿದುಕೊಂಡರು.

ತಾಲೂಕಿನ ದಿಡುಪೆ, ನೆರಿಯಾ ಪ್ರದೇಶಕ್ಕೆ ಭೇಟಿ ನೀಡಿ, ಮಳೆ ಹಾಗೂ ಭೂಕುಸಿತದಿಂದಾಗಿ ಸಂಭವಿಸಿರುವ ಅನಾಹುತಗಳನ್ನು ವೀಕ್ಷಿಸಿದರು. ಮರಗಳ ತೆರವು ಕಾರ್ಯಾಚರಣೆಗೆ ಅನುವು ಮಾಡಿಕೊಟ್ಟರು.

ಜೊತೆಯಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಾಂ, ಅಧಿಕಾರಿಗಳು, ಪಂಚಾಯತ್‌ಗೆ ಸಂಬಂಧಪಟ್ಟ ಅಧಿಕಾರಿಗಳು, ಮೆಸ್ಕಾಂ ಇಲಾಖೆಯ ಅಧಿಕಾರಿಗಳನ್ನು ಕರೆತಂದು ಸೂಕ್ತ ಪರಿಹಾರಕ್ಕೆ ಒತ್ತಾಯಿಸಿದರು.

Leave a Comment

error: Content is protected !!