23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮಾಲಾಡಿ ಸೋಣಂದೂರಿನಲ್ಲಿ ಗಾಳಿ ಮಳೆಗೆ ಮನೆ, ಕೃಷಿಗೆ ತೀವ್ರ ತರಹದ ಹಾನಿ: ಕೋಟ್ಯಾಂತರ ರೂ. ನಷ್ಟಮಾಲಾಡಿ ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್‌ರವರ ನೇತೃತ್ವದಲ್ಲಿ ಕಾರ್ಯಾಚರಣೆ

ತಾಲೂಕಿನಲ್ಲಿ ಗಾಳಿ ಮಳೆಯ ಅಬ್ಬರ ಮುಂದುವರಿದಿದೆ. ಜು.೨೬ರಂದು ಮಾಲಾಡಿ ಸೋಣಂದೂರಿನಲ್ಲಿ ತನ್ನ ಪ್ರತಾಪವನ್ನು ತೋರಿಸಿದ್ದು ವ್ಯಾಪಕ ಹಾನಿಗೆ ಕಾರಣವಾಗಿದೆ.

ಮಾಲಾಡಿಯ ಶಾಂತಿಧಾಮ ಆಶ್ರಮಕ್ಕೆ ಸಂಪೂರ್ಣವಾಗಿ ಹಾನಿಯಾಗಿದ್ದು, ಗಾಳಿಯ ಅಬ್ಬರಕ್ಕೆ ಕಟ್ಟಡದ ಮೇಲ್ಛಾವಣಿ ಸಂಪೂರ್ಣವಾಗಿ ನೆಲ ಕಚ್ಚಿದೆ. ಅದೃಷ್ಟವಶಾತ್ ಆಶ್ರಮದಲ್ಲಿ ಇದ್ದವರು ಅಪಾಯದಿಂದ ಪಾರಗಿದ್ದಾರೆ.

ಮಾಲಾಡಿ, ಸೋಣಂದೂರಿನಲ್ಲಿ ಭಾರೀ ಗಾಳಿಗೆ ಸುಮಾರು ೧೧ ಮನೆಗಳಿಗೆ ತೀವ್ರತರಹದ ಹಾನಿಗಳಾಗಿದೆ. ಭಾರೀಗಾತ್ರದ ಮರಗಳು ನೆಲಕ್ಕೆ ಉರುಳಿದೆ. ಈ ಪರಿಸರದಲ್ಲಿ ಕೃಷಿಗೆ ವ್ಯಾಪಕ ಹಾನಿಯಾಗಿದ್ದು ಅಡಿಕೆ ಮರಗಳು ಮುರಿದು ಬಿದ್ದಿದೆ, ಕೃಷಿ ಹಾನಿಯ ಬಗ್ಗೆ ಇನ್ನಷ್ಟೇ ಮಾಹಿತಿಗಳು ತಿಳಿದು ಬರಬೇಕಾಗಿದೆ.

ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಗಾಳಿ ಮಳೆಯ ಅಬ್ಬರಕ್ಕೆ ಕೋಟ್ಯಾಂತರ ರೂ ಹಾನಿ ಸಂಭವಿಸಿದೆ.
ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್‌ರವರ ನೇತೃತ್ವದಲ್ಲಿ ಗ್ರಾಮಸ್ಥರು ಹಾನಿಗೀಡಾದ ಪ್ರದೇಶಗಳಲ್ಲಿ ತುರ್ತು ನೆರವು ಕಾರ್ಯಾಚರಣೆ ನಡೆಸಲಾಗಿದ್ದು ಮರಗಳನ್ನು ತೆರವುಗೊಳಿಸಲಾಗಿದೆ.

ಹಾನಿಗೆ ಈಡಾದ ಪ್ರದೇಶಗಳಿಗೆ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್, ಮಾಜಿ ಅಧ್ಯಕ್ಷ ಬೇಬಿ ಸುವರ್ಣ, ಅಭಿವೃದ್ಧಿ ಅಧಿಕಾರಿ ರಾಜಶೇಖರ ರೈ, ಗ್ರಾಮ ಸಹಾಯಕ ಎಂ. ಗುಣಕರ ಹೆಗ್ಡೆ, ಗ್ರಾ.ಪಂ ಸದಸ್ಯ ಉಮೇಶ್, ಮೆಸ್ಕಾಂ ಜೆಇ ಹಾಗೂ ಇತರರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೆಂಗಳೂರು ರಾಜೀವ ಗಾಂಧಿ ವಿಶ್ವವಿದ್ಯಾಲಯ ಕುಲಪತಿ ಡಾ. ಭಗವಾನ್ ಬಿ.ಸಿ ಭೇಟಿ

Suddi Udaya

ಜೋಡುಸ್ಥಾನ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಯುಗಂಧರ್, ಕಾರ್ಯದರ್ಶಿ ಚೇತನ್

Suddi Udaya

ಲೂಮೋಸ್ – ಟೆಸರಾಕ್ಟ್ ಫಿಲ್ಮ್ ಸೊಸೈಟಿ ವಾರ್ಷಿಕ ಸಮಾರೋಪ ; ನಮ್ಮ ಕಲ್ಪನೆಯೇ ನಮ್ಮ ಮಿತಿ: ಡಾ. ರಾಘವೇಂದ್ರ

Suddi Udaya

ಮರೋಡಿಯ ವಸಂತ ಕುಮಾರ್ ಹಾರೋದ್ದು ರವರಿಂದ ದೇಹ ದಾನಕ್ಕೆ ನೋಂದಣಿ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

Suddi Udaya
error: Content is protected !!