July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮಾಲಾಡಿ ಸೋಣಂದೂರಿನಲ್ಲಿ ಗಾಳಿ ಮಳೆಗೆ ಮನೆ, ಕೃಷಿಗೆ ತೀವ್ರ ತರಹದ ಹಾನಿ: ಕೋಟ್ಯಾಂತರ ರೂ. ನಷ್ಟಮಾಲಾಡಿ ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್‌ರವರ ನೇತೃತ್ವದಲ್ಲಿ ಕಾರ್ಯಾಚರಣೆ

ತಾಲೂಕಿನಲ್ಲಿ ಗಾಳಿ ಮಳೆಯ ಅಬ್ಬರ ಮುಂದುವರಿದಿದೆ. ಜು.೨೬ರಂದು ಮಾಲಾಡಿ ಸೋಣಂದೂರಿನಲ್ಲಿ ತನ್ನ ಪ್ರತಾಪವನ್ನು ತೋರಿಸಿದ್ದು ವ್ಯಾಪಕ ಹಾನಿಗೆ ಕಾರಣವಾಗಿದೆ.

ಮಾಲಾಡಿಯ ಶಾಂತಿಧಾಮ ಆಶ್ರಮಕ್ಕೆ ಸಂಪೂರ್ಣವಾಗಿ ಹಾನಿಯಾಗಿದ್ದು, ಗಾಳಿಯ ಅಬ್ಬರಕ್ಕೆ ಕಟ್ಟಡದ ಮೇಲ್ಛಾವಣಿ ಸಂಪೂರ್ಣವಾಗಿ ನೆಲ ಕಚ್ಚಿದೆ. ಅದೃಷ್ಟವಶಾತ್ ಆಶ್ರಮದಲ್ಲಿ ಇದ್ದವರು ಅಪಾಯದಿಂದ ಪಾರಗಿದ್ದಾರೆ.

ಮಾಲಾಡಿ, ಸೋಣಂದೂರಿನಲ್ಲಿ ಭಾರೀ ಗಾಳಿಗೆ ಸುಮಾರು ೧೧ ಮನೆಗಳಿಗೆ ತೀವ್ರತರಹದ ಹಾನಿಗಳಾಗಿದೆ. ಭಾರೀಗಾತ್ರದ ಮರಗಳು ನೆಲಕ್ಕೆ ಉರುಳಿದೆ. ಈ ಪರಿಸರದಲ್ಲಿ ಕೃಷಿಗೆ ವ್ಯಾಪಕ ಹಾನಿಯಾಗಿದ್ದು ಅಡಿಕೆ ಮರಗಳು ಮುರಿದು ಬಿದ್ದಿದೆ, ಕೃಷಿ ಹಾನಿಯ ಬಗ್ಗೆ ಇನ್ನಷ್ಟೇ ಮಾಹಿತಿಗಳು ತಿಳಿದು ಬರಬೇಕಾಗಿದೆ.

ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಗಾಳಿ ಮಳೆಯ ಅಬ್ಬರಕ್ಕೆ ಕೋಟ್ಯಾಂತರ ರೂ ಹಾನಿ ಸಂಭವಿಸಿದೆ.
ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್‌ರವರ ನೇತೃತ್ವದಲ್ಲಿ ಗ್ರಾಮಸ್ಥರು ಹಾನಿಗೀಡಾದ ಪ್ರದೇಶಗಳಲ್ಲಿ ತುರ್ತು ನೆರವು ಕಾರ್ಯಾಚರಣೆ ನಡೆಸಲಾಗಿದ್ದು ಮರಗಳನ್ನು ತೆರವುಗೊಳಿಸಲಾಗಿದೆ.

ಹಾನಿಗೆ ಈಡಾದ ಪ್ರದೇಶಗಳಿಗೆ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್, ಮಾಜಿ ಅಧ್ಯಕ್ಷ ಬೇಬಿ ಸುವರ್ಣ, ಅಭಿವೃದ್ಧಿ ಅಧಿಕಾರಿ ರಾಜಶೇಖರ ರೈ, ಗ್ರಾಮ ಸಹಾಯಕ ಎಂ. ಗುಣಕರ ಹೆಗ್ಡೆ, ಗ್ರಾ.ಪಂ ಸದಸ್ಯ ಉಮೇಶ್, ಮೆಸ್ಕಾಂ ಜೆಇ ಹಾಗೂ ಇತರರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

Suddi Udaya

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಎಕ್ಸೆಲ್ ಟೆಕ್ನೊ ಸ್ಕೂಲ್ ವೇಣೂರಿಗೆ ಶೇ.100 ಫಲಿತಾಂಶ:ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಬಿ

Suddi Udaya

ಪಡ್ಡಂದಡ್ಕ ಸಾಧನಾಶ್ರೀ ಮಹಿಳಾ ಮಂಡಲ ಉದ್ಘಾಟನೆ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಚರ್ಚೆ ಹಾಗೂ ವಿಶೇಷ ಮಾಹಿತಿ ಶಿಬಿರ

Suddi Udaya

ಹತ್ಯಡ್ಕ ಸಹಕಾರಿ ಸಂಘದ ಚುನಾವಣೆ :ಸಹಕಾರ ಭಾರತೀಯ ಅಭ್ಯರ್ಥಿಗಳ ‘ಮಹಾಭಿಯಾನ’ ಪ್ರಚಾರಕ್ಕೆ ಅರುಣ್ ಕುಮಾರ್ ಪುತ್ತಿಲರಿಂದ ಚಾಲನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya
error: Content is protected !!