September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮಾಲಾಡಿ ಸೋಣಂದೂರಿನಲ್ಲಿ ಗಾಳಿ ಮಳೆಗೆ ಮನೆ, ಕೃಷಿಗೆ ತೀವ್ರ ತರಹದ ಹಾನಿ: ಕೋಟ್ಯಾಂತರ ರೂ. ನಷ್ಟಮಾಲಾಡಿ ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್‌ರವರ ನೇತೃತ್ವದಲ್ಲಿ ಕಾರ್ಯಾಚರಣೆ

ತಾಲೂಕಿನಲ್ಲಿ ಗಾಳಿ ಮಳೆಯ ಅಬ್ಬರ ಮುಂದುವರಿದಿದೆ. ಜು.೨೬ರಂದು ಮಾಲಾಡಿ ಸೋಣಂದೂರಿನಲ್ಲಿ ತನ್ನ ಪ್ರತಾಪವನ್ನು ತೋರಿಸಿದ್ದು ವ್ಯಾಪಕ ಹಾನಿಗೆ ಕಾರಣವಾಗಿದೆ.

ಮಾಲಾಡಿಯ ಶಾಂತಿಧಾಮ ಆಶ್ರಮಕ್ಕೆ ಸಂಪೂರ್ಣವಾಗಿ ಹಾನಿಯಾಗಿದ್ದು, ಗಾಳಿಯ ಅಬ್ಬರಕ್ಕೆ ಕಟ್ಟಡದ ಮೇಲ್ಛಾವಣಿ ಸಂಪೂರ್ಣವಾಗಿ ನೆಲ ಕಚ್ಚಿದೆ. ಅದೃಷ್ಟವಶಾತ್ ಆಶ್ರಮದಲ್ಲಿ ಇದ್ದವರು ಅಪಾಯದಿಂದ ಪಾರಗಿದ್ದಾರೆ.

ಮಾಲಾಡಿ, ಸೋಣಂದೂರಿನಲ್ಲಿ ಭಾರೀ ಗಾಳಿಗೆ ಸುಮಾರು ೧೧ ಮನೆಗಳಿಗೆ ತೀವ್ರತರಹದ ಹಾನಿಗಳಾಗಿದೆ. ಭಾರೀಗಾತ್ರದ ಮರಗಳು ನೆಲಕ್ಕೆ ಉರುಳಿದೆ. ಈ ಪರಿಸರದಲ್ಲಿ ಕೃಷಿಗೆ ವ್ಯಾಪಕ ಹಾನಿಯಾಗಿದ್ದು ಅಡಿಕೆ ಮರಗಳು ಮುರಿದು ಬಿದ್ದಿದೆ, ಕೃಷಿ ಹಾನಿಯ ಬಗ್ಗೆ ಇನ್ನಷ್ಟೇ ಮಾಹಿತಿಗಳು ತಿಳಿದು ಬರಬೇಕಾಗಿದೆ.

ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಗಾಳಿ ಮಳೆಯ ಅಬ್ಬರಕ್ಕೆ ಕೋಟ್ಯಾಂತರ ರೂ ಹಾನಿ ಸಂಭವಿಸಿದೆ.
ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್‌ರವರ ನೇತೃತ್ವದಲ್ಲಿ ಗ್ರಾಮಸ್ಥರು ಹಾನಿಗೀಡಾದ ಪ್ರದೇಶಗಳಲ್ಲಿ ತುರ್ತು ನೆರವು ಕಾರ್ಯಾಚರಣೆ ನಡೆಸಲಾಗಿದ್ದು ಮರಗಳನ್ನು ತೆರವುಗೊಳಿಸಲಾಗಿದೆ.

ಹಾನಿಗೆ ಈಡಾದ ಪ್ರದೇಶಗಳಿಗೆ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್, ಮಾಜಿ ಅಧ್ಯಕ್ಷ ಬೇಬಿ ಸುವರ್ಣ, ಅಭಿವೃದ್ಧಿ ಅಧಿಕಾರಿ ರಾಜಶೇಖರ ರೈ, ಗ್ರಾಮ ಸಹಾಯಕ ಎಂ. ಗುಣಕರ ಹೆಗ್ಡೆ, ಗ್ರಾ.ಪಂ ಸದಸ್ಯ ಉಮೇಶ್, ಮೆಸ್ಕಾಂ ಜೆಇ ಹಾಗೂ ಇತರರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ನಿವೃತ್ತ ಯೋಧ ಫ್ರಾನ್ಸಿಸ್ ರವರಿಗೆ ಉಜಿರೆ ಕೆಎಸ್ಎಂಸಿಎ ಸಂಘಟನೆ ಮತ್ತು ಊರ ಗಣ್ಯರಿಂದ ಭವ್ಯ ಸ್ವಾಗತ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ಬೆಳಾಲು: ಉಷಾ ಎನ್ ಉಡುಪ ಹೆಸರಿನ ಶಾಶ್ವತ ದತ್ತಿ ನಿಧಿ ವಿತರಣಾ ಕಾರ್ಯಕ್ರಮ

Suddi Udaya

ಶಿಶಿಲ : ಒಟ್ಲ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚುನಾವಣೆಯಲ್ಲಿ ಶಾಸಕ ಹರೀಶ್ ಪೂಂಜರವರು ಗೆದ್ದು ಬರುವಂತೆ ಪ್ರಾರ್ಥನೆ

Suddi Udaya

ಪುದುವೆಟ್ಟು: ಬೇರಿಕೆ ನಿವಾಸಿ ಲಿಂಗಪ್ಪ ರೈ ನಿಧನ

Suddi Udaya

ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮಾ ಆರ್. ರಾವ್, ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಆಯ್ಕೆ

Suddi Udaya
error: Content is protected !!