25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

ಬೆಳ್ತಂಗಡಿ: ಜೆಸಿಐ ಭಾರತದ ವಲಯ 15ರ ಜೂನಿಯರ್ ಜೆಸಿ ಹಾಗೂ ಲೇಡಿ ಜೇಸಿ ಸಮ್ಮೇಳನವು ಬೈಂದೂರಿನಲ್ಲಿ ನಡೆಯಿತು.

ಸಮ್ಮೇಳನದಲ್ಲಿ ಬೆಳ್ತಂಗಡಿ ಜೆಸಿಯ ಜೂನಿಯರ್ ಜೆಸಿ ವಿಭಾಗಕ್ಕೆ ವಲಯದ ಅತ್ಯುತ್ತಮ ಜೆಜೆಸಿ ವಿಭಾಗ ಹಾಗೂ ಲೇಡಿ ಜೆಸಿ ವಿಭಾಗಕ್ಕೆ ಅತ್ಯುತ್ತಮ ರನ್ನರ್ ಪ್ರಶಸ್ತಿ ಹಾಗೂ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದುಕೊಂಡಿದೆ.

ಆ ಪ್ರಯುಕ್ತ ನಡೆದ ಅಭಿನಂದನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ JFM ರಂಜಿತ್ ಎಚ್ ಡಿ ವಹಿಸಿ ಎಲ್ಲರನ್ನು ಸ್ವಾಗತಿಸಿದರು. ಈ ನಡೆದ ವರ್ಷದಲ್ಲಿ ಎಲ್ಲಾ ಕಾರ್ಯಕ್ರಮಗಳಿಗೆ ಮಾರ್ಗದರ್ಶನವನ್ನು ಮಾಡಿದ ನಿಕಟ ಪೂರ್ವ ಅಧ್ಯಕ್ಷರಿಗೆ, ಪೂರ್ವಾಧ್ಯಕ್ಷರುಗಳಿಗೆ ಹಾಗೂ ಸಹಕಾರವನ್ನು ನೀಡಿದ ಎಲ್ಲಾ ಪದಾಧಿಕಾರಿಗಳಿಗೆ ಮತ್ತು ಸದಸ್ಯರುಗಳಿಗೆ ಧನ್ಯವಾದವನ್ನು ಸಲ್ಲಿಸಿದರು.

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ನೂತನ ಕಾರ್ಯದರ್ಶಿಗಳಾದ, ಜೆಸಿಐ ಬೆಳ್ತಂಗಡಿ ಘಟಕದ ಪೂರ್ವ ಅಧ್ಯಕ್ಷರಾದ ಕಿರಣ್ ಕುಮಾರ್ ಶೆಟ್ಟಿ ಹಾಗೂ ಕಾರ್ಯಕ್ರಮದ ಪ್ರಾಯೋಜಕತ್ವವನ್ನು ವಹಿಸಿದ ಪೂರ್ವ ಅಧ್ಯಕ್ಷರಾದ ಸ್ವರೂಪ್ ಶೇಖರ್ ಇವರುಗಳನ್ನು ಅಭಿನಂದಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಹೊಸ ಜೆಸಿ ಸದಸ್ಯರಾಗಿ ಪೂರ್ವ ಅಧ್ಯಕ್ಷರಾದ ಶ್ರೀನಾಥ್ ರವರ ಮಕ್ಕಳಾದ ಆಧ್ಯಾತ್ಮಿ ಕೆ ಎಸ್, ಹಾಗೂ ಜೆಜೆಸಿ ಸದಸ್ಯರಾಗಿ ಅದ್ವಿತಿ ಯವರು ಸೇರ್ಪಡೆಗೊಂಡರು. ಇವರಿಗೆ ವಲಯ ಉಪಾಧ್ಯಕ್ಷರಾದ ಶಂಕರ್ ರಾವ್ ರವರು ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಪೂರ್ವ ಅಧ್ಯಕ್ಷರುಗಳಾದ ಅಶೋಕ ಕುಮಾರ್ ಬಿ ಪಿ, ನಾರಾಯಣ ಶೆಟ್ಟಿ, ಶ್ರೀನಾಥ್ ಕೆ ಮ್,ಚಿದಾನಂದ ಇಡ್ಯಾ, ಪ್ರಶಾಂತ್ ಲಾಯಿಲ, ಪ್ರಸಾದ್ ಬಿ ಎಸ್, ಉಪಾಧ್ಯಕ್ಷರುಗಳಾದ ಪ್ರೀತಮ್ ಶೆಟ್ಟಿ, ಆಶಾ ಪ್ರಶಾಂತ್, ಸುದೀರ್ ಕೆಎನ್, ಶೈಲೇಶ್, ಲೇಡಿ ಜೆಸಿ ಸಂಯೋಜಕರಾದ ಶ್ರುತಿ ರಂಜಿತ್, ಕೋಶಾಧಿಕಾರಿಗಳಾದ ಮಮಿತಾ ಸುಧೀರ್, ಕಾರ್ಯಕ್ರಮದ ಸಂಯೋಜಕರಾದ ಪ್ರಮೋದ್, ಪದಾಧಿಕಾರಿಗಳಾದ ಮಧುರಾ ರಾಘವ್, ರಜತ್, ಜಯರಾಜ್ ನಡಕರ, ರತ್ನಾಕರ ಬಳಂಜ, ವಿನಾಯಕ್, ಜೆಜೆಸಿ ಅಧ್ಯಕ್ಷರಾದ ಸಮನ್ವಿತ್ ಕುಮಾರ್, ಜೂನಿಯರ್ ಜೆಸಿ ಸಮ್ಮೇಳನದ ಸಂಯೋಜಕರಾದ ದೀಪ್ತಿ ಕುಲಾಲ್, ತೇಜಸ್, ಅತಿಶ್ರೇಯಾ, ಸೃಜನ್, ನಯನ, ಉದಿತ್ ರವರು ಭಾಗವಹಿಸಿದರು.

ವೇದಿಕೆ ಆಹ್ವಾನವನ್ನು ಜೊತೆ ಕಾರ್ಯದರ್ಶಿಗಳಾದ ರಾಮಕೃಷ್ಣ ನಡೆಸಿದರು ಮತ್ತು ಜೆಸಿ ವಾಣಿಯನ್ನು ಜೆಜೆಸಿ ತ್ರಿಷಾ ಉದ್ಘೋಷಿಸಿದರು . ಕಾರ್ಯದರ್ಶಿಗಳಾದ ಅನುದೀಪ್ ಜೈನ್ ರವರ ಧನ್ಯವಾದದೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

Related posts

ನ್ಯಾಯತರ್ಪು: ಮಾದಕ ವಸ್ತು ದಿನಾಚರಣೆ ಅಂಗವಾಗಿ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಮಾಹಿತಿ ಕಾರ್ಯಕ್ರಮ

Suddi Udaya

ಇಂದಬೆಟ್ಟು : ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಕಂಪ್ಯೂಟರ್ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯದಲ್ಲಿ ಸಂಶೋಧನಾ ಪ್ರಬಂಧ ಮಂಡನೆ ಡಾ. ಅಖಿಲ ತೇಜಸ್ವಿ ಆರ್. ಅವರಿಗೆ ದೇಶದ ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ ರೋಟರಿ ಭವನದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ತರಬೇತಿ

Suddi Udaya

ಬಳಂಜ: ಶ್ರಿಮಾತಾ ನಾಲ್ಕೂರು ಸಂಘಟನೆಯಿಂದ ಬಳಂಜ ಶಾಲೆಗೆ ದೇಣಿಗೆ ಹಸ್ತಾಂತರ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಧನೆಗೈದ ಕುಮಾರ್‌ ನಿಹಾರ್‌ ಎಸ್‌ ಆರ್‌ ಇವರೊಂದಿಗೆ ವಿಶೇಷ ಸಂವಾದ

Suddi Udaya
error: Content is protected !!