24.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮಳೆ ಹಾನಿಗೊಳಗಾದ ನೆರಿಯ, ಚಿಬಿದ್ರೆ ಗ್ರಾಮಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ: ಪರಿಹಾರಕ್ಕಾಗಿ ಸರಕಾರಕ್ಕೆ ಒತ್ತಾಯಿಸುವ ಭರವಸೆ

ನೆರಿಯ: ನೆರಿಯ ಗ್ರಾಮದಲ್ಲಿ ಜು.25ರಂದು ಸುರಿದ ವಿಪರೀತ ಗಾಳಿ ಮಳೆಗೆ ಮನೆಗಳಿಗೆ ಹಾನಿ ಉಂಟಾಗಿದ್ದು, ಇಲ್ಲಿನ ಜನರು ಮನೆಯಲ್ಲಿ ವಾಸಿಸಲು ತುಂಬ ಭಯಪಡುವ ವಾತಾವರಣ ನಿರ್ಮಾಣವಾಗಿದ್ದು, ಹಾನಿಗೊಳಗಾದ ಮನೆಗಳಿಗೆ ಶಾಸಕ ಹರೀಶ್ ಪೂಂಜ ಜು.27ರಂದು ಭೇಟಿ ನೀಡಿ, ಪರಿಶೀಲನೆ ನಡೆಸಿ ಧೈರ್ಯ ತುಂಬಿ ತಮ್ಮ ಸ್ವಂತ ಖರ್ಚಿನಲ್ಲಿ ಸಣ್ಣ ಮಟ್ಟಿನ ಧನಸಹಾಯವನ್ನು ಸ್ಥಳದಲ್ಲಿ ನೀಡಿ ಮಾನವೀಯತೆ ಮೆರೆದು ಹೆಚ್ಚಿನ ಪರಿಹಾರಕ್ಕಾಗಿ ಸರಕಾರಕ್ಕೆ ಮತ್ತು ಸಂಬಂಧಪಟ್ಟ ಇಲಾಖೆಗೆ ತಿಳಿಸುತ್ತೇನೆ ಎಂದು ಭರವಸೆ ನೀಡಿದರು.

ಕೃಷ್ಣಪ್ಪ ಕೋಲೋಡಿ, ಪದ್ಮನಾಭ ಆಚಾರಿ, ದಯಾನಂದ ಗೌಡ, ಅಣ್ಣುಗೌಡ, ಕುಳೆನಾಡಿ ರಾಮಯ್ಯ ಗೌಡ, ಜಯಂತ ಪಾದೆ, ಆನಂದ ಅಣಿಯೂರು, ಶೇಖರ ಕುಳೆನಾಡಿ, ನವೀನ್ ಕುಳೆನಾಡಿ, ಗಂಗಾಧರ ಗೌಡ, ಗಣೇಶ್ ಕಡ್ಡಿಬಾಗಿಲು, ಶಾಜಿ ಪರ್ವಕರ್ ರವರ ಮನೆಗೆ ಮತ್ತು ಶಾಲೆಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ನೆರಿಯ ಗ್ರಾಮ ಪಂಚಾಯತ್ ಅಧ್ಯಕ್ಷೆ ವಸಂತಿ, ಉಪಾಧ್ಯಕ್ಷೆ ಸಜಿತಾ, ಸದಸ್ಯರಾದ ಕುಶಲ, ವೇದಾವತಿ, ದಿನೇಶ್, ಸವಿತಾ, ಮಾಲತಿ, ಸಚಿನ್, ಬಾಬು ಗೌಡ ಹಾಗೂ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಗೌಡ, ಶಕ್ತಿ ಕೇಂದ್ರ ಅದ್ಯಕ್ಷ ವಿಶ್ವನಾಥ್ ಉಪಸ್ಥಿತರಿದ್ದರು.

Related posts

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಹತ್ಯಡ್ಕ: ದರ್ಭೆತಡ್ಕ ನಿವಾಸಿ ಶ್ರೀಮತಿ ಪದ್ಮಾಕ್ಷಿ ಗೋಗಟೆ ನಿಧನ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎರಡು ವಾಹನಗಳು ರಸ್ತೆಗೆ ಪಲ್ಟಿ

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಗೆ ಶೇ. 100 ಫಲಿತಾಂಶ: ವಿದ್ಯಾರ್ಥಿ ತ್ರಿಷಾ ರಾಜ್ಯಕ್ಕೆ 10 ನೇ ರ್‍ಯಾಂಕ್

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಿಂದ ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ

Suddi Udaya
error: Content is protected !!