July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮಳೆ ಹಾನಿಗೊಳಗಾದ ನೆರಿಯ, ಚಿಬಿದ್ರೆ ಗ್ರಾಮಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ: ಪರಿಹಾರಕ್ಕಾಗಿ ಸರಕಾರಕ್ಕೆ ಒತ್ತಾಯಿಸುವ ಭರವಸೆ

ನೆರಿಯ: ನೆರಿಯ ಗ್ರಾಮದಲ್ಲಿ ಜು.25ರಂದು ಸುರಿದ ವಿಪರೀತ ಗಾಳಿ ಮಳೆಗೆ ಮನೆಗಳಿಗೆ ಹಾನಿ ಉಂಟಾಗಿದ್ದು, ಇಲ್ಲಿನ ಜನರು ಮನೆಯಲ್ಲಿ ವಾಸಿಸಲು ತುಂಬ ಭಯಪಡುವ ವಾತಾವರಣ ನಿರ್ಮಾಣವಾಗಿದ್ದು, ಹಾನಿಗೊಳಗಾದ ಮನೆಗಳಿಗೆ ಶಾಸಕ ಹರೀಶ್ ಪೂಂಜ ಜು.27ರಂದು ಭೇಟಿ ನೀಡಿ, ಪರಿಶೀಲನೆ ನಡೆಸಿ ಧೈರ್ಯ ತುಂಬಿ ತಮ್ಮ ಸ್ವಂತ ಖರ್ಚಿನಲ್ಲಿ ಸಣ್ಣ ಮಟ್ಟಿನ ಧನಸಹಾಯವನ್ನು ಸ್ಥಳದಲ್ಲಿ ನೀಡಿ ಮಾನವೀಯತೆ ಮೆರೆದು ಹೆಚ್ಚಿನ ಪರಿಹಾರಕ್ಕಾಗಿ ಸರಕಾರಕ್ಕೆ ಮತ್ತು ಸಂಬಂಧಪಟ್ಟ ಇಲಾಖೆಗೆ ತಿಳಿಸುತ್ತೇನೆ ಎಂದು ಭರವಸೆ ನೀಡಿದರು.

ಕೃಷ್ಣಪ್ಪ ಕೋಲೋಡಿ, ಪದ್ಮನಾಭ ಆಚಾರಿ, ದಯಾನಂದ ಗೌಡ, ಅಣ್ಣುಗೌಡ, ಕುಳೆನಾಡಿ ರಾಮಯ್ಯ ಗೌಡ, ಜಯಂತ ಪಾದೆ, ಆನಂದ ಅಣಿಯೂರು, ಶೇಖರ ಕುಳೆನಾಡಿ, ನವೀನ್ ಕುಳೆನಾಡಿ, ಗಂಗಾಧರ ಗೌಡ, ಗಣೇಶ್ ಕಡ್ಡಿಬಾಗಿಲು, ಶಾಜಿ ಪರ್ವಕರ್ ರವರ ಮನೆಗೆ ಮತ್ತು ಶಾಲೆಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ನೆರಿಯ ಗ್ರಾಮ ಪಂಚಾಯತ್ ಅಧ್ಯಕ್ಷೆ ವಸಂತಿ, ಉಪಾಧ್ಯಕ್ಷೆ ಸಜಿತಾ, ಸದಸ್ಯರಾದ ಕುಶಲ, ವೇದಾವತಿ, ದಿನೇಶ್, ಸವಿತಾ, ಮಾಲತಿ, ಸಚಿನ್, ಬಾಬು ಗೌಡ ಹಾಗೂ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಗೌಡ, ಶಕ್ತಿ ಕೇಂದ್ರ ಅದ್ಯಕ್ಷ ವಿಶ್ವನಾಥ್ ಉಪಸ್ಥಿತರಿದ್ದರು.

Related posts

ಲಾಯಿಲ ಗ್ರಾ.ಪಂ. ವತಿಯಿಂದ ಶಾಲಾ ಬಳಿಯ ಅಪಾಯಕಾರಿ ಮರ ತೆರವು

Suddi Udaya

ಭಾರೀ ಮಳೆ: ಲಾಯಿಲ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ

Suddi Udaya

ನಾರಾವಿ: ಪರಸ್ಪರ ಯುವಕ ಮಂಡಲ ನೂತನ ಅಧ್ಯಕ್ಷರಾಗಿ ಅಶೋಕ್ ಎಂ.ಕೆ ಹಾಗೂ ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ ಆಯ್ಕೆ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

Suddi Udaya

ನಾಲ್ಕೂರು: ರಾಮನಗರದಲ್ಲಿ ಬ್ರಹ್ಮಕುಮಾರಿ ಸಂಸ್ಥೆಯಿಂದ ರಕ್ಷಾಬಂಧನ ಕಾರ್ಯಕ್ರಮ

Suddi Udaya
error: Content is protected !!