September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮಳೆ ಹಾನಿಗೊಳಗಾದ ನೆರಿಯ, ಚಿಬಿದ್ರೆ ಗ್ರಾಮಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ: ಪರಿಹಾರಕ್ಕಾಗಿ ಸರಕಾರಕ್ಕೆ ಒತ್ತಾಯಿಸುವ ಭರವಸೆ

ನೆರಿಯ: ನೆರಿಯ ಗ್ರಾಮದಲ್ಲಿ ಜು.25ರಂದು ಸುರಿದ ವಿಪರೀತ ಗಾಳಿ ಮಳೆಗೆ ಮನೆಗಳಿಗೆ ಹಾನಿ ಉಂಟಾಗಿದ್ದು, ಇಲ್ಲಿನ ಜನರು ಮನೆಯಲ್ಲಿ ವಾಸಿಸಲು ತುಂಬ ಭಯಪಡುವ ವಾತಾವರಣ ನಿರ್ಮಾಣವಾಗಿದ್ದು, ಹಾನಿಗೊಳಗಾದ ಮನೆಗಳಿಗೆ ಶಾಸಕ ಹರೀಶ್ ಪೂಂಜ ಜು.27ರಂದು ಭೇಟಿ ನೀಡಿ, ಪರಿಶೀಲನೆ ನಡೆಸಿ ಧೈರ್ಯ ತುಂಬಿ ತಮ್ಮ ಸ್ವಂತ ಖರ್ಚಿನಲ್ಲಿ ಸಣ್ಣ ಮಟ್ಟಿನ ಧನಸಹಾಯವನ್ನು ಸ್ಥಳದಲ್ಲಿ ನೀಡಿ ಮಾನವೀಯತೆ ಮೆರೆದು ಹೆಚ್ಚಿನ ಪರಿಹಾರಕ್ಕಾಗಿ ಸರಕಾರಕ್ಕೆ ಮತ್ತು ಸಂಬಂಧಪಟ್ಟ ಇಲಾಖೆಗೆ ತಿಳಿಸುತ್ತೇನೆ ಎಂದು ಭರವಸೆ ನೀಡಿದರು.

ಕೃಷ್ಣಪ್ಪ ಕೋಲೋಡಿ, ಪದ್ಮನಾಭ ಆಚಾರಿ, ದಯಾನಂದ ಗೌಡ, ಅಣ್ಣುಗೌಡ, ಕುಳೆನಾಡಿ ರಾಮಯ್ಯ ಗೌಡ, ಜಯಂತ ಪಾದೆ, ಆನಂದ ಅಣಿಯೂರು, ಶೇಖರ ಕುಳೆನಾಡಿ, ನವೀನ್ ಕುಳೆನಾಡಿ, ಗಂಗಾಧರ ಗೌಡ, ಗಣೇಶ್ ಕಡ್ಡಿಬಾಗಿಲು, ಶಾಜಿ ಪರ್ವಕರ್ ರವರ ಮನೆಗೆ ಮತ್ತು ಶಾಲೆಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ನೆರಿಯ ಗ್ರಾಮ ಪಂಚಾಯತ್ ಅಧ್ಯಕ್ಷೆ ವಸಂತಿ, ಉಪಾಧ್ಯಕ್ಷೆ ಸಜಿತಾ, ಸದಸ್ಯರಾದ ಕುಶಲ, ವೇದಾವತಿ, ದಿನೇಶ್, ಸವಿತಾ, ಮಾಲತಿ, ಸಚಿನ್, ಬಾಬು ಗೌಡ ಹಾಗೂ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಗೌಡ, ಶಕ್ತಿ ಕೇಂದ್ರ ಅದ್ಯಕ್ಷ ವಿಶ್ವನಾಥ್ ಉಪಸ್ಥಿತರಿದ್ದರು.

Related posts

ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಕುಮಿತೆ ಹಾಗೂ ಕಟಾ ವಿಭಾಗದಲ್ಲಿ ಚಿನ್ನದ ಪದಕ

Suddi Udaya

ಗೋಳಿಯಂಗಡಿ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ವಿವಾಹ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

Suddi Udaya

ರಾಷ್ಟ್ರೀಯ ಕರಾಟೆ ಪಂದ್ಯಾಟ: ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ್ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಮತ್ತು ಸೈನಿಕರ ಸುರಕ್ಷತೆಗಾಗಿ ವಿಶೇಷ ಭಜನೆ ಮತ್ತು ಭಾರತ ಮಾತೆಗೆ ಪೂಜಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya
error: Content is protected !!