25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮಳೆ ಹಾನಿಗೊಳಗಾದ ನೆರಿಯ, ಚಿಬಿದ್ರೆ ಗ್ರಾಮಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ: ಪರಿಹಾರಕ್ಕಾಗಿ ಸರಕಾರಕ್ಕೆ ಒತ್ತಾಯಿಸುವ ಭರವಸೆ

ನೆರಿಯ: ನೆರಿಯ ಗ್ರಾಮದಲ್ಲಿ ಜು.25ರಂದು ಸುರಿದ ವಿಪರೀತ ಗಾಳಿ ಮಳೆಗೆ ಮನೆಗಳಿಗೆ ಹಾನಿ ಉಂಟಾಗಿದ್ದು, ಇಲ್ಲಿನ ಜನರು ಮನೆಯಲ್ಲಿ ವಾಸಿಸಲು ತುಂಬ ಭಯಪಡುವ ವಾತಾವರಣ ನಿರ್ಮಾಣವಾಗಿದ್ದು, ಹಾನಿಗೊಳಗಾದ ಮನೆಗಳಿಗೆ ಶಾಸಕ ಹರೀಶ್ ಪೂಂಜ ಜು.27ರಂದು ಭೇಟಿ ನೀಡಿ, ಪರಿಶೀಲನೆ ನಡೆಸಿ ಧೈರ್ಯ ತುಂಬಿ ತಮ್ಮ ಸ್ವಂತ ಖರ್ಚಿನಲ್ಲಿ ಸಣ್ಣ ಮಟ್ಟಿನ ಧನಸಹಾಯವನ್ನು ಸ್ಥಳದಲ್ಲಿ ನೀಡಿ ಮಾನವೀಯತೆ ಮೆರೆದು ಹೆಚ್ಚಿನ ಪರಿಹಾರಕ್ಕಾಗಿ ಸರಕಾರಕ್ಕೆ ಮತ್ತು ಸಂಬಂಧಪಟ್ಟ ಇಲಾಖೆಗೆ ತಿಳಿಸುತ್ತೇನೆ ಎಂದು ಭರವಸೆ ನೀಡಿದರು.

ಕೃಷ್ಣಪ್ಪ ಕೋಲೋಡಿ, ಪದ್ಮನಾಭ ಆಚಾರಿ, ದಯಾನಂದ ಗೌಡ, ಅಣ್ಣುಗೌಡ, ಕುಳೆನಾಡಿ ರಾಮಯ್ಯ ಗೌಡ, ಜಯಂತ ಪಾದೆ, ಆನಂದ ಅಣಿಯೂರು, ಶೇಖರ ಕುಳೆನಾಡಿ, ನವೀನ್ ಕುಳೆನಾಡಿ, ಗಂಗಾಧರ ಗೌಡ, ಗಣೇಶ್ ಕಡ್ಡಿಬಾಗಿಲು, ಶಾಜಿ ಪರ್ವಕರ್ ರವರ ಮನೆಗೆ ಮತ್ತು ಶಾಲೆಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ನೆರಿಯ ಗ್ರಾಮ ಪಂಚಾಯತ್ ಅಧ್ಯಕ್ಷೆ ವಸಂತಿ, ಉಪಾಧ್ಯಕ್ಷೆ ಸಜಿತಾ, ಸದಸ್ಯರಾದ ಕುಶಲ, ವೇದಾವತಿ, ದಿನೇಶ್, ಸವಿತಾ, ಮಾಲತಿ, ಸಚಿನ್, ಬಾಬು ಗೌಡ ಹಾಗೂ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಗೌಡ, ಶಕ್ತಿ ಕೇಂದ್ರ ಅದ್ಯಕ್ಷ ವಿಶ್ವನಾಥ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸೌತ್ ಕೆನರಾ ಪೋಟೋಗ್ರಾಫ್ ಆಸೋಸಿಯೇಷನ್ ನಿಂದ ಮುದ್ದು ಮಕ್ಕಳ ಪೋಟೋ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಧರ್ಮಸ್ಥಳ ಶತಾಯಿಷಿ ಮತದಾರರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ ಕ್ರೀಡಾ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘದ ಪ್ರಭಾರ ಸಿಇಒ ಆಗಿ ಅಂಕಿತಾ ಬಿ ಅಧಿಕಾರ ಸ್ವೀಕಾರ

Suddi Udaya

ಉಜರೆ: ರತ್ನಮ್ಮ ನಾಯಕ್ ನಿಧನ

Suddi Udaya

ಭಾರತೀಯ ರೆಡ್ ಕ್ರಾಸ್ ಸೊಸೈಟಿಯಿಂದ ರಾಮಣ್ಣ ಗೌಡ ರವರಿಗೆ ವಾಟರ್ ಬೆಡ್ ಹಸ್ತಾಂತರ

Suddi Udaya
error: Content is protected !!