July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ವಾರ್ಷಿಕ ಯೋಜನೆಗಳ ಗ್ರಾಮ ವಿಕಾಸಕ್ಕೆ ಆಯ್ಕೆಯಾದ ಮೊಗ್ರು ಗ್ರಾಮ

ಮೊಗ್ರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ವಾರ್ಷಿಕ ಯೋಜನೆಗಳಲ್ಲಿ ಒಂದಾದ ಗ್ರಾಮ ವಿಕಾಸ. ವಿದ್ಯಾವರ್ಧಕ ಸಂಘದ ಸಹ ಸಂಸ್ಥೆಯಾದ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ನೇತೃತ್ವದಲ್ಲಿ ಗ್ರಾಮ ವಿಕಾಸಕ್ಕೆ ಆಯ್ಕೆಯಾದ ಗ್ರಾಮ ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮ.

ಕಳೆದ ಒಂದು ವರ್ಷದಿಂದ ಗ್ರಾಮ ವಿಕಾಸ ಸಮಿತಿಯು ಯೋಜನೆಗಳನ್ನು ರೂಪಿಸಿಕೊಂಡು ಸಮಾಜಮುಖಿ ಕಾರ್ಯದಲ್ಲಿ ಇಂದ್ರಪ್ರಸ್ಥ ವಿದ್ಯಾಲಯದ ಮಕ್ಕಳನ್ನು ತೊಡಗಿಸಿಕೊಳ್ಳುತ್ತಾ ಬಂದಿದೆ.

ಜು.26ರಂದು ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿಗಳು ತಾವೇ ತಯಾರಿಸಿದ “ಸೀಡ್ ಬಾಲ್” ಹಾಗೂ ಗಿಡಗಳನ್ನು ಮೊಗ್ರು ಗ್ರಾಮದ ಅಲೆಕ್ಕಿ ಎಂಬಲ್ಲಿ ಅಲ್ಲಲ್ಲಿ ಭೂಮಿಗೆ ಬಿಸಾಡುವ ಕಾರ್ಯವನ್ನು ಮಾಡಿದರು.

ಈ ಸಂದರ್ಭದಲ್ಲಿ ಮಕ್ಕಳ ಜೊತೆಗೆ ಗ್ರಾಮ ವಿಕಾಸ್ ತಂಡದ ಸದಸ್ಯರಾದ ಶಶಿಕಲಾ ಜಿ. ಬಾಂಕ್ಯ, ಶಿಕ್ಷಕರಾದ ವಿದ್ಯಾ ಹಾಗೂ ಜ್ಯೋತಿಕಿರಣ್ ಉಪಸ್ಥಿತರಿದ್ದರು ಅಲೆಕ್ಕಿ ಶ್ರೀರಾಮ ಶಿಶುಮಂದಿರದ ಮಾತಾಜಿ ಹಾಗೂ ಆಡಳಿತ ಸಮಿತಿಯ ಸದಸ್ಯರು ಸಹಕರಿಸಿದರು.

Related posts

ವೇಣೂರು: ಮಹಾಮಸ್ತಕಾಭಿಷೇಕ ಮಹೋತ್ಸವದ ನೋಡೆಲ್ ಅಧಿಕಾರಿಯಾಗಿ ಮಾಣಿಕ್ಯ ಹಾಗೂ ಸಮನ್ವಯ ಅಧಿಕಾರಿಯಾಗಿ ಕೆ. ಜಯಕೀರ್ತಿ ಜೈನ್ ನೇಮಕ

Suddi Udaya

ಎಸ್ .ಡಿ.ಎಂ. ಶಿಕ್ಷಣ ಸಂಸ್ಥೆ ವತಿಯಿಂದ ಚಾಲಕರಿಗೆ ಕಾರ್ಯಾಗಾರ

Suddi Udaya

ಮೇ 1: ಎಸ್.ಡಿ.ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮಿಲನ

Suddi Udaya

ಡಿ.27: ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ತಾಲೂಕಿನ ಹಲವೆಡೆ ಉತ್ತಮ ಮಳೆ

Suddi Udaya
error: Content is protected !!