25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ವಾರ್ಷಿಕ ಯೋಜನೆಗಳ ಗ್ರಾಮ ವಿಕಾಸಕ್ಕೆ ಆಯ್ಕೆಯಾದ ಮೊಗ್ರು ಗ್ರಾಮ

ಮೊಗ್ರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ವಾರ್ಷಿಕ ಯೋಜನೆಗಳಲ್ಲಿ ಒಂದಾದ ಗ್ರಾಮ ವಿಕಾಸ. ವಿದ್ಯಾವರ್ಧಕ ಸಂಘದ ಸಹ ಸಂಸ್ಥೆಯಾದ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ನೇತೃತ್ವದಲ್ಲಿ ಗ್ರಾಮ ವಿಕಾಸಕ್ಕೆ ಆಯ್ಕೆಯಾದ ಗ್ರಾಮ ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮ.

ಕಳೆದ ಒಂದು ವರ್ಷದಿಂದ ಗ್ರಾಮ ವಿಕಾಸ ಸಮಿತಿಯು ಯೋಜನೆಗಳನ್ನು ರೂಪಿಸಿಕೊಂಡು ಸಮಾಜಮುಖಿ ಕಾರ್ಯದಲ್ಲಿ ಇಂದ್ರಪ್ರಸ್ಥ ವಿದ್ಯಾಲಯದ ಮಕ್ಕಳನ್ನು ತೊಡಗಿಸಿಕೊಳ್ಳುತ್ತಾ ಬಂದಿದೆ.

ಜು.26ರಂದು ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿಗಳು ತಾವೇ ತಯಾರಿಸಿದ “ಸೀಡ್ ಬಾಲ್” ಹಾಗೂ ಗಿಡಗಳನ್ನು ಮೊಗ್ರು ಗ್ರಾಮದ ಅಲೆಕ್ಕಿ ಎಂಬಲ್ಲಿ ಅಲ್ಲಲ್ಲಿ ಭೂಮಿಗೆ ಬಿಸಾಡುವ ಕಾರ್ಯವನ್ನು ಮಾಡಿದರು.

ಈ ಸಂದರ್ಭದಲ್ಲಿ ಮಕ್ಕಳ ಜೊತೆಗೆ ಗ್ರಾಮ ವಿಕಾಸ್ ತಂಡದ ಸದಸ್ಯರಾದ ಶಶಿಕಲಾ ಜಿ. ಬಾಂಕ್ಯ, ಶಿಕ್ಷಕರಾದ ವಿದ್ಯಾ ಹಾಗೂ ಜ್ಯೋತಿಕಿರಣ್ ಉಪಸ್ಥಿತರಿದ್ದರು ಅಲೆಕ್ಕಿ ಶ್ರೀರಾಮ ಶಿಶುಮಂದಿರದ ಮಾತಾಜಿ ಹಾಗೂ ಆಡಳಿತ ಸಮಿತಿಯ ಸದಸ್ಯರು ಸಹಕರಿಸಿದರು.

Related posts

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಕಲ್ಲುಂಜ ಪ್ರಗತಿಪರ ಕೃಷಿಕ, ನಾಟಿ ವೈದ್ಯ ಅಣ್ಣಿ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ ವಿ.ಹಿಂ.ಪ ಬಜರಂಗದಳ ಪ್ರಖಂಡದ ವತಿಯಿಂದ ಬಕ್ರೀದ್ ಹಬ್ಬದ ಸಂದರ್ಭ ಗೋ ಹತ್ಯೆಯನ್ನು ಖಂಡಿಸಿ ಪೋಲಿಸ್ ಠಾಣೆ ಮತ್ತು ಗೋ ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ

Suddi Udaya

ಬಂದಾರು ಬೀಬಿಮಜಲುವಿನಲ್ಲಿ ಒಂಟಿಸಲಗ ದಾಳಿ: ಕೃಷಿಗೆ ಹಾನಿ

Suddi Udaya

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

Suddi Udaya

ಬಿ.ಜೆ.ಪಿ ಅಭ್ಯರ್ಥಿ ಭಾರೀ ಮುನ್ನಡೆಯಿಂದ ಗೆಲುವಿನ ಜಯಭೇರಿ ಭಾರಿಸಲಿದ್ದಾರೆ, ಬಿಜೆಪಿ 400ರ ಗಡಿ ದಾಟಲಿದೆ-ಪ್ರಭಾಕರ ಬಂಗೇರ ಪತ್ರಿಕಾಗೋಷ್ಠಿ

Suddi Udaya
error: Content is protected !!