ಮುಂಡ್ರುಪ್ಪಾಡಿ: ಶಾಲೆತಡ್ಕ ರಾಮಣ್ಣ ಗೌಡರ ಮನೆ ಹಾಗೂ ಕೊಟ್ಟಿಗೆಗೆ ಬಿದ್ದ ಮರ: ಅಪಾರ ಹಾನಿ

Suddi Udaya

ಮುಂಡ್ರುಪ್ಪಾಡಿ ಶಾಲೆತಡ್ಕ ಎಂಬಲ್ಲಿ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ, ಜು.೨೬ರಂದು ರಾತ್ರಿ ಸುರಿದ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ಬಿದ್ದು ಅಪಾರ ಹಾನಿಯಾಗಿದೆ. ಶೌರ್ಯ ವಿಪತ್ತು ತಂಡದ ಸ್ವಯಂಸೇವಕರು ಅವರ ಕರೆಗೆ ಸ್ಪಂದಿಸಿ ಮರವನ್ನು ತೆರವುಗೊಳಿಸಿದರು.

ಈ ಸಂದರ್ಭದಲ್ಲಿ ಶೌರ್ಯ ವಿಪತ್ತು ತಂಡದ ಸ್ವಯಂ ಸೇವಕರಾದ ಸ್ನೇಕ್ ಪ್ರಕಾಶ್, ನಳಿನ್ ಕುಮಾರ್, ಗಂಗಾಧರ ಗೌಡ ಉಪಸ್ಥಿತರಿದ್ದರು.

Leave a Comment

error: Content is protected !!