23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ನೆಲ್ಯಾಡಿ: ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಪುತ್ತೂರು ಧರ್ಮಾಧ್ಯಕ್ಷ ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರಿಂದ ಪೂಜಾರ್ಪಣೆ

ನೆಲ್ಯಾಡಿಯ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಜುಲೈ 19ರಂದು ಆರಂಭಗೊಂಡ ನವದಿನಗಳ ನೋವೇನಾ ಮಹೋತ್ಸವದ ಎಂಟನೇ ದಿನದಲ್ಲಿ ಪುತ್ತೂರು ಸೀರೋ ಮಲಂಕರ ಧರ್ಮ ಪ್ರಾಂತ್ಯ ಧರ್ಮಾಧ್ಯಕ್ಷರಾದ ಗೀವರ್ಗೀಸ್ ಮಾರ್ ಮಕಾರಿಯೋಸ್ ಬಲಿ ಪೂಜೆಯನ್ನು ಅರ್ಪಿಸಿದರು ಮತ್ತು ಸಂತ ಅಲ್ಫೋನ್ಸ ನೋವೇನಾದ ಆಶೀರ್ವಾದವನ್ನು ನೀಡಿದರು.

ಪರಮ ಪೂಜ್ಯರು ಸೇವೆ, ತ್ಯಾಗ, ಮತ್ತು ದೇವರಲ್ಲಿನ ಪ್ರೀತಿಯನ್ನು ಬಾಳಿನಲ್ಲಿ ಮೈಗೂಡಿಸಿಕೊಂಡಾಗ, ಎಲ್ಲವನ್ನು ಸಹಿಸುವ ತಾಳುವ ಶಕ್ತಿಯನ್ನು ಪ್ರತಿಯೋರ್ವ ವ್ಯಕ್ತಿ ಜೀವನದಲ್ಲಿ ಪಡೆಯಬಹುದೆಂದು ಕರೆ ನೀಡಿದರು.

ಬೇಥನಿ ಸಂಸ್ಥೆಗಳ ವಂದನಿಯ ವರ್ಗೀಸ್, ಕೈಪನಡ್ಕ ಪುತ್ತೂರು ಧರ್ಮ ಪ್ರಾಂತ್ಯದ ಚಾನ್ಸಲರ್ ವಂದನಿಯ ಫಾ. ಬಿಜು ಜೋನ್, ಸೆಂಟ್ ಜೋರ್ಜ್ ಸಂಸ್ಥೆಗಳ ಸಂಚಾಲಕರಾದ ವಂದನಿಯ ಫಾ. ನೋಮಿಸ್ ಸಹಾಯಕರಾಗಿ ಭಾಗವಹಿಸಿ ಪ್ರಾರ್ಥಿಸಿದರು. ವಂದನಿಯ ಫಾ. ಎಬಿನ್ ಸ್ವಾಗತಿಸಿ ಧರ್ಮ ಗುರುಗಳಾದ ವಂದನಿಯ ಶಾಜಿ ಮಾತ್ಯು ವಂದಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾ.ಪಂ. ವ್ಯಾಪ್ತಿಯ ಅಭಿಮಾನಿಗಳಿಂದ ಶಾಸಕ ಹರೀಶ್ ಪೂoಜರವರ ಹುಟ್ಟುಹಬ್ಬ ಆಚರಣೆ

Suddi Udaya

ಬೆಂಗಳೂರಿನಲ್ಲಿರುವ ಯೂಟ್ಯೂಬರ್ ಸಮೀರ್.ಎಂ.ಡಿ ರವರ ಬಾಡಿಗೆ ಮನೆಗೆ ಬೆಳ್ತಂಗಡಿ ಪೊಲೀಸರ ದಾಳಿ

Suddi Udaya

ನೀಟ್ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ ಪ್ರಜ್ವಲ್ ಹೆಚ್.ಎಂ. ಗೆ ಎಕ್ಸೆಲ್ ಕಾಲೇಜಿನ ವತಿಯಿಂದ ಭವ್ಯ ಮೆರವಣಿಗೆ ಮೂಲಕ ಗೌರರ್ವಾಪಣೆ

Suddi Udaya

ಗುಂಡೂರಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಎ.25: ಮರೋಡಿ ದೇವಸ್ಥಾನ: ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!