22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ನೆಲ್ಯಾಡಿ: ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಪುತ್ತೂರು ಧರ್ಮಾಧ್ಯಕ್ಷ ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರಿಂದ ಪೂಜಾರ್ಪಣೆ

ನೆಲ್ಯಾಡಿಯ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಜುಲೈ 19ರಂದು ಆರಂಭಗೊಂಡ ನವದಿನಗಳ ನೋವೇನಾ ಮಹೋತ್ಸವದ ಎಂಟನೇ ದಿನದಲ್ಲಿ ಪುತ್ತೂರು ಸೀರೋ ಮಲಂಕರ ಧರ್ಮ ಪ್ರಾಂತ್ಯ ಧರ್ಮಾಧ್ಯಕ್ಷರಾದ ಗೀವರ್ಗೀಸ್ ಮಾರ್ ಮಕಾರಿಯೋಸ್ ಬಲಿ ಪೂಜೆಯನ್ನು ಅರ್ಪಿಸಿದರು ಮತ್ತು ಸಂತ ಅಲ್ಫೋನ್ಸ ನೋವೇನಾದ ಆಶೀರ್ವಾದವನ್ನು ನೀಡಿದರು.

ಪರಮ ಪೂಜ್ಯರು ಸೇವೆ, ತ್ಯಾಗ, ಮತ್ತು ದೇವರಲ್ಲಿನ ಪ್ರೀತಿಯನ್ನು ಬಾಳಿನಲ್ಲಿ ಮೈಗೂಡಿಸಿಕೊಂಡಾಗ, ಎಲ್ಲವನ್ನು ಸಹಿಸುವ ತಾಳುವ ಶಕ್ತಿಯನ್ನು ಪ್ರತಿಯೋರ್ವ ವ್ಯಕ್ತಿ ಜೀವನದಲ್ಲಿ ಪಡೆಯಬಹುದೆಂದು ಕರೆ ನೀಡಿದರು.

ಬೇಥನಿ ಸಂಸ್ಥೆಗಳ ವಂದನಿಯ ವರ್ಗೀಸ್, ಕೈಪನಡ್ಕ ಪುತ್ತೂರು ಧರ್ಮ ಪ್ರಾಂತ್ಯದ ಚಾನ್ಸಲರ್ ವಂದನಿಯ ಫಾ. ಬಿಜು ಜೋನ್, ಸೆಂಟ್ ಜೋರ್ಜ್ ಸಂಸ್ಥೆಗಳ ಸಂಚಾಲಕರಾದ ವಂದನಿಯ ಫಾ. ನೋಮಿಸ್ ಸಹಾಯಕರಾಗಿ ಭಾಗವಹಿಸಿ ಪ್ರಾರ್ಥಿಸಿದರು. ವಂದನಿಯ ಫಾ. ಎಬಿನ್ ಸ್ವಾಗತಿಸಿ ಧರ್ಮ ಗುರುಗಳಾದ ವಂದನಿಯ ಶಾಜಿ ಮಾತ್ಯು ವಂದಿಸಿದರು.

Related posts

ಕೋರಂ ಕೊರತೆ; ಉಜಿರೆ ಗ್ರಾಮಸಭೆ ಮುಂದೂಡಿಕೆ

Suddi Udaya

ಫೆ.6-14: ಗುರುವಾಯನಕರೆ ಉರೂಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಿಂದ ತರಬೇತಿ ಕಾರ್ಯಕ್ರಮ

Suddi Udaya

ವೇಣೂರು ಐಟಿಐ ಕಾಲೇಜಿನಲ್ಲಿ ಯುವ ಮತ್ತು ಭವಿಷ್ಯದ ಮತದಾರರೊಂದಿಗೆ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ ಸಂವಾದ

Suddi Udaya

ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಕಾರ್‍ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಚಾರ್ಮಾಡಿ ಗ್ರಾ.ಪಂ. ಅಧ್ಯಕ್ಷರಾಗಿ ಶಾರದಾ ಎ., ಉಪಾಧ್ಯಕ್ಷರಾಗಿ ನೀಲು

Suddi Udaya
error: Content is protected !!