23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ನೆಲ್ಯಾಡಿ: ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಪುತ್ತೂರು ಧರ್ಮಾಧ್ಯಕ್ಷ ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರಿಂದ ಪೂಜಾರ್ಪಣೆ

ನೆಲ್ಯಾಡಿಯ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಜುಲೈ 19ರಂದು ಆರಂಭಗೊಂಡ ನವದಿನಗಳ ನೋವೇನಾ ಮಹೋತ್ಸವದ ಎಂಟನೇ ದಿನದಲ್ಲಿ ಪುತ್ತೂರು ಸೀರೋ ಮಲಂಕರ ಧರ್ಮ ಪ್ರಾಂತ್ಯ ಧರ್ಮಾಧ್ಯಕ್ಷರಾದ ಗೀವರ್ಗೀಸ್ ಮಾರ್ ಮಕಾರಿಯೋಸ್ ಬಲಿ ಪೂಜೆಯನ್ನು ಅರ್ಪಿಸಿದರು ಮತ್ತು ಸಂತ ಅಲ್ಫೋನ್ಸ ನೋವೇನಾದ ಆಶೀರ್ವಾದವನ್ನು ನೀಡಿದರು.

ಪರಮ ಪೂಜ್ಯರು ಸೇವೆ, ತ್ಯಾಗ, ಮತ್ತು ದೇವರಲ್ಲಿನ ಪ್ರೀತಿಯನ್ನು ಬಾಳಿನಲ್ಲಿ ಮೈಗೂಡಿಸಿಕೊಂಡಾಗ, ಎಲ್ಲವನ್ನು ಸಹಿಸುವ ತಾಳುವ ಶಕ್ತಿಯನ್ನು ಪ್ರತಿಯೋರ್ವ ವ್ಯಕ್ತಿ ಜೀವನದಲ್ಲಿ ಪಡೆಯಬಹುದೆಂದು ಕರೆ ನೀಡಿದರು.

ಬೇಥನಿ ಸಂಸ್ಥೆಗಳ ವಂದನಿಯ ವರ್ಗೀಸ್, ಕೈಪನಡ್ಕ ಪುತ್ತೂರು ಧರ್ಮ ಪ್ರಾಂತ್ಯದ ಚಾನ್ಸಲರ್ ವಂದನಿಯ ಫಾ. ಬಿಜು ಜೋನ್, ಸೆಂಟ್ ಜೋರ್ಜ್ ಸಂಸ್ಥೆಗಳ ಸಂಚಾಲಕರಾದ ವಂದನಿಯ ಫಾ. ನೋಮಿಸ್ ಸಹಾಯಕರಾಗಿ ಭಾಗವಹಿಸಿ ಪ್ರಾರ್ಥಿಸಿದರು. ವಂದನಿಯ ಫಾ. ಎಬಿನ್ ಸ್ವಾಗತಿಸಿ ಧರ್ಮ ಗುರುಗಳಾದ ವಂದನಿಯ ಶಾಜಿ ಮಾತ್ಯು ವಂದಿಸಿದರು.

Related posts

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಅಳದಂಗಡಿ:ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಾಗ್ರಿಗಳ ಅಂಗಡಿ ಶುಭಾರಂಭ

Suddi Udaya

ಹತ್ಯಡ್ಕ ಅಂಬರಕಾಪು ಶ್ರೀ ವಿಠೋಬ ರಕುಮಾಯಿ ನೂತನ ದೇವಾಲಯಕ್ಕೆ ಶಿಲಾನ್ಯಾಸ

Suddi Udaya

ಶ್ರೀ ರಾಮ ಗೆಳೆಯರ ಬಳಗ ನೇರೋಳ್ ಪಲ್ಕೆ ಇದರ ವತಿಯಿಂದ ಶ್ರೀ ರಾಮೋತ್ಸವ

Suddi Udaya

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

Suddi Udaya
error: Content is protected !!