25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ನೆಲ್ಯಾಡಿ: ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಪುತ್ತೂರು ಧರ್ಮಾಧ್ಯಕ್ಷ ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರಿಂದ ಪೂಜಾರ್ಪಣೆ

ನೆಲ್ಯಾಡಿಯ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಜುಲೈ 19ರಂದು ಆರಂಭಗೊಂಡ ನವದಿನಗಳ ನೋವೇನಾ ಮಹೋತ್ಸವದ ಎಂಟನೇ ದಿನದಲ್ಲಿ ಪುತ್ತೂರು ಸೀರೋ ಮಲಂಕರ ಧರ್ಮ ಪ್ರಾಂತ್ಯ ಧರ್ಮಾಧ್ಯಕ್ಷರಾದ ಗೀವರ್ಗೀಸ್ ಮಾರ್ ಮಕಾರಿಯೋಸ್ ಬಲಿ ಪೂಜೆಯನ್ನು ಅರ್ಪಿಸಿದರು ಮತ್ತು ಸಂತ ಅಲ್ಫೋನ್ಸ ನೋವೇನಾದ ಆಶೀರ್ವಾದವನ್ನು ನೀಡಿದರು.

ಪರಮ ಪೂಜ್ಯರು ಸೇವೆ, ತ್ಯಾಗ, ಮತ್ತು ದೇವರಲ್ಲಿನ ಪ್ರೀತಿಯನ್ನು ಬಾಳಿನಲ್ಲಿ ಮೈಗೂಡಿಸಿಕೊಂಡಾಗ, ಎಲ್ಲವನ್ನು ಸಹಿಸುವ ತಾಳುವ ಶಕ್ತಿಯನ್ನು ಪ್ರತಿಯೋರ್ವ ವ್ಯಕ್ತಿ ಜೀವನದಲ್ಲಿ ಪಡೆಯಬಹುದೆಂದು ಕರೆ ನೀಡಿದರು.

ಬೇಥನಿ ಸಂಸ್ಥೆಗಳ ವಂದನಿಯ ವರ್ಗೀಸ್, ಕೈಪನಡ್ಕ ಪುತ್ತೂರು ಧರ್ಮ ಪ್ರಾಂತ್ಯದ ಚಾನ್ಸಲರ್ ವಂದನಿಯ ಫಾ. ಬಿಜು ಜೋನ್, ಸೆಂಟ್ ಜೋರ್ಜ್ ಸಂಸ್ಥೆಗಳ ಸಂಚಾಲಕರಾದ ವಂದನಿಯ ಫಾ. ನೋಮಿಸ್ ಸಹಾಯಕರಾಗಿ ಭಾಗವಹಿಸಿ ಪ್ರಾರ್ಥಿಸಿದರು. ವಂದನಿಯ ಫಾ. ಎಬಿನ್ ಸ್ವಾಗತಿಸಿ ಧರ್ಮ ಗುರುಗಳಾದ ವಂದನಿಯ ಶಾಜಿ ಮಾತ್ಯು ವಂದಿಸಿದರು.

Related posts

ಉಜಿರೆ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಎಂಬವರ ಮನೆಗೆ ಬಡಿದ ಸಿಡಿಲು: ಮನೆಯ ಮೀಟರ್ ಬೋರ್ಡ್, ಗೋಡೆ ಸಹಿತ, ಶೀಟ್ ಗೆ ಹಾನಿ

Suddi Udaya

ಬೆಳ್ತಂಗಡಿ: ಅಚ್ಚಿನಡ್ಕದಲ್ಲಿ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಕಾರುಣ್ಯ ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ ಬೆಳ್ಳಿಹಬ್ಬದ ಆಚರಣೆಯ ಸಮಾಲೋಚನ ಸಭೆ

Suddi Udaya

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಸನ್ನಿಧಿ ಎಸ್ ಹೆಗ್ಡೆ ಹಾಗೂ ದಿಯಾ ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ 7ನೇ ಸ್ಥಾನ

Suddi Udaya
error: Content is protected !!