25.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

ಬೆಳ್ತಂಗಡಿ: 2024-25ನೇ ಶೈಕ್ಷಕಣಿಕ ವರ್ಷದ ರಕ್ಷಕ ಶಿಕ್ಷಕ ಮಹಾಸಭೆ ಸಂತ ತೆರೇಸಾ ಪ್ರೌಢಶಾಲೆಯ ಸಭಾಂಗಣದಲ್ಲಿ ಜು.27ರಂದು ನಡೆಯಿತು.

ಜೀವನ ಶಿಕ್ಷಣ ನೀಡೋಣ ಮಕ್ಕಳ ಬಾಳು ಬೆಳಗಿಸೋಣ ಎಂಬ ಧ್ಯೇಯದೊಂದಿಗೆ ಆರಂಭಿಸಿದ ಈ ಶೈಕ್ಷಣಿಕ ವರ್ಷ ಪೋಷಕರ, ಶಿಕ್ಷಕ ವೃಂದದ ಅವಿರತ ಬೆಂಬಲದಿಂದ ಕಳೆದ ೬೦ ವರ್ಷಗಳಿಂದ ಬೆಳ್ತಂಗಡಿ ತಾಲೂಕಿನಲ್ಲಿ ಸಂತ ತೆರೇಸಾ ಪ್ರೌಢಶಾಲೆ ಸಾವಿರಾರು ವಿದ್ಯಾರ್ಥಿಗಳ ಜೀವನ ರೂಪಿಸಿದೆ. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡು ನಮ್ಮ ಶಾಲಾ ಸಂಚಾಲಕಿ ವಂದನೀಯ ಭಗಿನಿ ತೆರೇಸಿಯಾ ಸೆರಾರವರು ಪೋಷಕರ ಬೆಂಬಲನ್ನು ಸ್ಮರಿಸಿ, ಆಡಳಿತ ಮಂಡಳಿಯ ಶುಭಾಶಯ ನೀಡಿ ಶಿಕ್ಷಕ ವೃಂದದ ಅವಿರತ ಪ್ರಯತ್ನವನ್ನು ಶ್ಲಾಘಿಸಿದರು.

ಸಂಪನ್ಮೂಲ ವ್ಯಕ್ತಿ ಸುನೀಲ್ ಪಿ ಜಿ ಜೀವಶಾಸ್ತ್ರ ಉಪನ್ಯಾಸಕರು ಇದೇ ಶಾಲೆಯ ವಿದ್ಯಾರ್ಥಿಯಾಗಿ ಅವರ ಅಮೂಲ್ಯ ಅನುಭವವನ್ನು ಹಂಚುವ ಮೂಲಕ ಸರ್ವರ ಮನ ಮುಟ್ಟುವಂತೆ ಪ್ರಚಲಿತ ಸಮಸ್ಯೆ ಮೊಬೈಲ್ ದುಶ್ಚಟಗಳು ಹಿರಿಯರಿಗೆ ಗೌರವ ನೀಡುವ ತತ್ವಗಳನ್ನು ತಿಳಿಸಿದರು.

ಹದಿಹರೆಯ ಪ್ರಾಯ ಸುಂದರ ಆದರೆ ಕುದಿಯುವ ಪ್ರಾಯ. ನಾವು ಹೇಳುವ ವಿಚಾರಗಳಿಗಿಂತ ಮಾಡುವ ವಿಚಾರಗಳನ್ನು ಅನುಕರಣೆ ಮಾಡಿಕೊಳ್ಳುತ್ತಾರೆ. ನಮ್ಮ ಅಪ್ಪಂದಿರು ಹೀರೋ ಮತ್ತು ಅಮ್ಮಂದಿರು ಹಿರೋಹಿನ್‌ಗಳಾಗಬೇಕು. ಮಕ್ಕಳಿಗೆ ಎಲ್ಲಾ ಅಯಾಮಗಳನ್ನು ತೋರಿಸಿ, ಆಗ ಮಾತ್ರ ಸತ್ಪ್ರಜೆಗಳಾಗಿ ಬೆಳೆಯಲು ಸಾಧ್ಯ ಎಂದು ಸರಳ ಉದಾಹರಣೆಗಳಿಂದ ಎಳೆ ಎಳೆಯಾಗಿ ತಿಳಿಸಿದರು.

ಆಡಳಿತ ಮಂಡಳಿ ಶಿಕ್ಷಣ ಸಂಸ್ಥೆಗಳಿಗೆ ನೀಡುವ ಧ್ಯೇಯ ಭ್ರಾತೃತ್ವ ಎಂಬ ವಿಷಯವನ್ನು ಉದ್ಘಾಟನೆಯನ್ನು ವೇದಿಕೆಯಲ್ಲಿರುವ ಗಣ್ಯರು ಭಾರತದ ಸಂವಿಧಾನದ ದಾಖಲೆಗಳನ್ನು ಅಲಂಕರಿಸಿದ ವೇದಿಕೆಯಲ್ಲಿರಿಸುವುದರ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದರು. ಕಳೆದ ರಕ್ಷಕ ಶಿಕ್ಷಕ ಮಹಾಸಭೆಯ ವರದಿಯನ್ನು ಕಾರ್ಯದರ್ಶಿ ಶಿಕ್ಷಕಿ ನಿಶಾರವರು ಸಭೆಯಲ್ಲಿ ಮಂಡಿಸಿದರು.
2023-24ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಶಾಲೆಗೆ ಪ್ತಥಮ ಸ್ಥಾನ ಪಡೆದ ಕನ್ನಡ ಮಾಧ್ಯಮದ ಯಶಸ್ವಿ, ಆಂಗ್ಲ ಮಾಧ್ಯಮದ ಸಮೀಕ್ಷರವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.

ವೇದಿಕೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ನಾರಾಯಣ ಶೆಟ್ಟಿ, ಸಂತ ತೆರೇಸಾ ಪದವಿಪೂರ್ವ ಕಾಲೇಜು, ಪ್ರಾಂಶುಪಾಲರು ವಂದನೀಯ ಆರೋಗ್ಯರವರು ಉಪಸ್ಥಿತರಿದ್ದರು.

ವಂ. ಭಗಿನಿ ಜೆಸಿಂತಾ ಬರೆಟ್ಟೊ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಕ ವಿನ್ಸೆಂಟ್ ವಂದಿಸಿದರು.

Related posts

ಅಭಯ ಹಾಸ್ಪಿಟಲ್ ನಲ್ಲಿ ನೇತ್ರ ಚಿಕಿತ್ಸಾ ಸೇವೆ ಪ್ರಾರಂಭ

Suddi Udaya

ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಫಾರ್ಮ್ ಫುಡ್ ಪಾಂಡವರಕಲ್ಲು ಇವರಿಂದ ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ನವಧ್ಯಾನ ಹಿಂಡಿ, ನಿಸರ್ಗ ಮೇವು ಸಮರ್ಪಣೆ

Suddi Udaya

ಬೆಳ್ತಂಗಡಿ: ಶ್ರೀ ಗುರುರಾಘವೇಂದ್ರ ಸ್ವಾಮಿ ಬೃಂದಾವನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya

ಸಾವ್ಯ: ಆಕಸ್ಮಿಕವಾಗಿ ಕುಸಿದುಬಿದ್ದು ವ್ಯಕ್ತಿ ಸಾವು

Suddi Udaya

ಕಲ್ಮಂಜ: ಪರಾರಿ ಮನೆ ಪ್ರಗತಿಪರ ಕೃಷಿಕ ರಾಜಶೇಖರ ಹೆಬ್ಬಾರ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!