25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ನಾಳೆ (ಜು.28) ಕುಲಾಲ ಮಂದಿರದಲ್ಲಿನೂತನ ಸಂಸದ ಕ್ಯಾ| ಬೃಜೇಶ್ ಚೌಟರಿಗೆ ಅಭಿನಂದನೆ – ವಿದ್ಯಾರ್ಥಿ ವೇತನ ವಿತರಣೆ – ಆಟಿ ಕೂಟ ಕಾಯ೯ಕ್ರಮ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಗುರುವಾಯನಕೆರೆ ಮತ್ತು ಕುಲಾಲ, ಕುಂಬಾರರ ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ಸಹಯೋಗದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟರವರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ವಿದ್ಯಾರ್ಥಿ ವೇತನ ವಿತರಣೆ ಮತ್ತು ಆಟಿದ ಕೂಟ ಕಾರ್ಯಕ್ರಮ ಜು.28 ರಂದು ಕುಲಾಲ ಮಂದಿರ ಗುರುವಾಯನಕೆರೆಯಲ್ಲಿ ಜರುಗಲಿದೆ.

ಜು. 21ರಂದು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಮಾಸಿಕ ಸಭೆಯಲ್ಲಿ
ಈ ನಿಧಾ೯ರವನ್ನು ಕೈಗೊಳ್ಳಲಾಯಿತು. ಅಧ್ಯಕ್ಷತೆಯನ್ನು
ಸಂಘದ ಅಧ್ಯಕ್ಷ ಹರೀಶ್ ಕಾರಿಂಜ ಇವರು ವಹಿಸಿದ್ದರು.
ಸಂಘದ ಕಾರ್ಯದರ್ಶಿ ಯತೀಶ್ ಸಿರಿಮಜಲ್ ಸ್ವಾಗತಿಸಿ ಹಿಂದಿನ ಸಭೆಯ ನಡವಳಿ ಓದಿ ಮಂದಿಸಿದರು. ಜು.28.ರ ಆದಿತ್ಯವಾರ ರಂದು ಶಾಸಕರಾದ ಹರೀಶ್ ಪೂಂಜಾ ಇವರ ಉಪಸ್ಥಿತಿಯಲ್ಲಿ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರನ್ನು ಅಭಿನಂದಿಸುವುದು ಮತ್ತು ಪ್ರಸ್ತುತ ವರ್ಷದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ತರಗತಿಯಲ್ಲಿ ಡಿಸ್ಟಿಂಕ್ಷನ್ (ಶೇಕಡಾ 85.00% ಮತ್ತು ಅಧಿಕ ಅಂಕ) ಪಡೆದ ಸ್ವಜಾತಿ ವಿದ್ಯಾರ್ಥಿಗಳನ್ನು ಗೌರವಿಸುವುದು* ಹಾಗೂ ಆಟಿಡೊಂಜಿ ಕೂಟ* ಕಾರ್ಯಕ್ರಮ ನಡೆಸುವುದು ಎಂದು. ತೀರ್ಮಾನಿಸಲಾಯಿತು.

ನಮ್ಮ ಸಂಘದ ಎಲ್ಲಾ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಈ ಮೂಲಕ ವಿನಂತಿಸಲಾಯಿತು. ಸಭೆಯಲ್ಲಿ ಲೋಕೇಶ್ ಕುಲಾಲ್ ಕಂಚಿಂಜ, ಜಗನ್ನಾಥ್ ಸಿರಿಮಜಲ್, ತಿಲಕ್ ರಾಜ್ ಕುಲಾಲ್ ಕಂಚಿಂಜ, ಹರೀಶ್ ಮೂಲ್ಯ ನಾರಾವಿ, ಪ್ರವೀಣ್ ಕುಲಾಲ್ ಬರಾಯ, ಮೋಹನ್ ಕುಲಾಲ್ ಕಂಚಿಂಜ, ಹರಿಶ್ಚಂದ್ರ ಕುಲಾಲ್ ಪಾಂಡೇಶ್ವರ, ಸಂಜೀವ ಕುಲಾಲ್ ಬೆಳ್ತಂಗಡಿ, ಗಣೇಶ್ ಕುಲಾಲ್ ಗುರುವಾಯನಕೆರೆ, ದಯಾನಂದ ಕುಲಾಲ್ ಅಂಡಿಂಜೆ, ಸಂಘದ ಮೆನೇಜರ್ ಮುಖೇಶ್ ಕುಲಾಲ್ ಉಪಸ್ಥಿತರಿದ್ದರು.

Related posts

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ಮತ್ತು ಗ್ರಾಮೀಣ ಸಮಿತಿಗಳ ವತಿಯಿಂದ ‘ಮತಕಳ್ಳರೇ ಅಧಿಕಾರ ಬಿಟ್ಟು ತೊಲಗಿ’ ಪ್ರತಿಭಟನೆ

Suddi Udaya

ಇಂದಬೆಟ್ಟು: ವಿದ್ಯುತ್ ಕಾಮಗಾರಿ ವೇಳೆ ಅವಘಡ: ಕಾರ್ಮಿಕ ಅಕ್ಬರ್ ಅಲಿ ಮೃತ್ಯು

Suddi Udaya

ಮೇ 25: ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ನೇತ್ರ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ

Suddi Udaya

ಚಿನ್ನ / ನಿಧಿಯ ಹೆಸರಿನಲ್ಲಿ ನಿರಂತರ ಕರೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ದಾಖಲು

Suddi Udaya

ಬಳಂಜ ಸರಕಾರಿ ಪ್ರೌಢ ಶಾಲೆಗೆ ಶೇ.92.5 ಫಲಿತಾಂಶ

Suddi Udaya
error: Content is protected !!