23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ನೆರಿಯ: ಕುವೆತ್ತಿಲ್ ನಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

ಬೆಳ್ತಂಗಡಿ: ನೆರಿಯ ಗ್ರಾಮದ ಕುವೆತ್ತಿಲ್ ಅನಿಲ್ ಎಂಬವರ ಮನೆಯ ಹಿಂಬದಿಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ,ಬಳಿಕ ಬೆಂಕಿ ಮನೆಗೆ ಆವರಿಸಿ ಸಂಪೂರ್ಣವಾಗಿ ಮನೆಗೆ ಹಾನಿಯಾಗಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.

ಮನೆಯಲ್ಲಿ 4 ಜನರು ವಾಸವಿದ್ದು, ಎಲ್ಲರೂ ಕ್ಷೇತ್ರವೊಂದಕ್ಕೆ ಭೇಟಿ ನೀಡಿದ್ದು ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಈ ಘಟನೆ ಸಂಭವಿಸಿದೆ. ಬೆಂಕಿಯು ಮನೆಯ ಹಿಂಬದಿಯ ನೆಟ್ ಒಂದಕ್ಕೆ ತಗುಲಿ ನಂತರ ಮನೆಯಲ್ಲಿದ್ದ ಪುಸ್ತಕ,ರಬ್ಬರ್ ಗೆ ಹೊತ್ತಿ ಉರಿದಿದೆ.

ಸ್ಥಳೀಯಯರಾದ ಆನಂದ್,ಆಶೋಕ್, ಸತೀಶ್, ಧರ್ಣಪ್ಪ ಗೌಡ, ಯಶೋದಾ, ಗೀತಾ,ರಮಾನಂದಶ ಮತ್ತಿತರರು ಬೆಂಕಿಯನ್ನು ಹತೋಟಿಗೆ ತರಲು ಪ್ರಯತ್ನಿಸಿದರು. ಆದರೆ ಬೆಂಕಿಯು ಮನೆಯ ಸುತ್ತಲೂ ಆವರಿಸಿದ ಕಾರಣ ಮನೆಗೆ ಸಂಪೂರ್ಣ ಹಾನಿಯಾಗಿದೆ ಎಂದು ತಿಳಿದುಬಂದಿದೆ.

Related posts

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಎರ್ಡೂರು ನಿರಂಜನ್ ರಾವ್ ನಿಧನ

Suddi Udaya

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ: ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ

Suddi Udaya

ನ .29: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ವಾಹನಗಳ ಹರಾಜು

Suddi Udaya

ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರೀಯ ಚಾಂಪಿಯನ್ ಶಿಬಿರಕ್ಕೆ ವಾಣಿ ಕಾಲೇಜಿನ ಮೋಹಿತ್ ಆಯ್ಕೆ

Suddi Udaya
error: Content is protected !!