September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಎನೇಲ್ ಗೊಬ್ಬು” ಕ್ರೀಡಾಕೂಟ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೆಳ್ತಂಗಡಿ/ಲಾಯಿಲ ವಲಯ ಪ್ರಗತಿಬಂಧು, ಜ್ಞಾನವಿಕಾಸ, ಸ್ವಸಹಾಯ ಸಂಘಗಳ ಒಕ್ಕೂಟ ಬೆಳ್ತಂಗಡಿ ಮತ್ತು ಲಾಲ ವಲಯ, ವಲಯ ಜನಜಾಗೃತಿ ವೇದಿಕೆ, ವಲಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಮತ್ತು ವಲಯ ಭಜನಾ ಪರಿಷತ್ ಇವುಗಳ ಜಂಟಿ ಆಶ್ರಯದಲ್ಲಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಡಾ|| ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ “ಎನೇಲ್ ಗೊಬ್ಬು” ಕ್ರೀಡಾಕೂಟವು ಜು.28ರಂದು ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಕ್ರೀಡಾಂಗಣದಲ್ಲಿ ಜರುಗಿತು ಕಾರ್ಯಕ್ರಮ ಉದ್ಘಾಟನೆಯನ್ನು ಶ್ರೀ ಕ್ಷೇ.ಧ.ಗ್ರಾ.ಯೋ. ಬಿ.ಸಿ. ಟ್ರಸ್ಟ್‌ನ ಕಾರ್ಯನಿರ್ವಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್. ನೆರವೇರಿಸಿದರು.

ಕ್ರೀಡಾಕೂಟದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ ಭೋಜ ಮಲೆಕುಡಿಯ ಲಾಯಿಲ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಅಧ್ಯಕ್ಷರಾದ ರಕ್ಷಿತ್ ಶಿವರಾಮ್. ವಲಯ ಪ್ರಗತಿ ಬಂದು ಒಕ್ಕೂಟದ ಅಧ್ಯಕ್ಷರಾದ ಬಿಎ ರಜಾಕ್.ಬೆಳ್ತಂಗಡಿ ವಲಯ ಅಧ್ಯಕ್ಷರು ಜನಜಾಗ್ರತಿ ವೇದಿಕೆ ಪುರುಷೋತ್ತಮ ಕನ್ನಾಜೆ. ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಸಹ ಶಿಕ್ಷಕಿ ಪ್ರಮೀಳಾ. ನಿವೃತ್ತ ಸೈನಿಕರು ಗಣೇಶ್ ಬಿ. ಎಲ್ ಉಪಸ್ಥಿತರಿದ್ದರು.

ಕೇಂದ್ರ ಪ್ರ.ಬಂ. ಸ್ವ-ಸಹಾಯ ಸಂಘಗಳ ಬೆಳ್ತಂಗಡಿ ಒಕ್ಕೂಟದ ಅಧ್ಯಕ್ಷ ಸೀತಾರಾಮ್ ಆರ್. ಸ್ವಾಗತಿಸಿ ಕಾರ್ಯಕ್ರಮ ಸಚಿನ್ ಗೇರುಕಟ್ಟೆ ನಿರೂಪಿಸಿದರು.

ಸ್ಪರ್ಧೆಗಳು:ಮಕ್ಕಳಿಗೆ: 100ಮೀ. ಓಟ, ಅಡಿಕೆಹಾಳೆ ಎಳೆಯುವುದು, ನಿಧಿ ಹುಡುಕುವುದುಮಹಿಳೆಯರಿಗೆ: ಹಗ್ಗಜಗ್ಗಾಟ, ಅಡಿಕೆಹಾಳೆ ಎಳೆಯುವುದು, ಗುಂಡೆಸೆತ, ನಿಧಿ ಹುಡುಕುವುದು, ಗೂಟದ ಓಟ, ತ್ರೋಬಾಲ್, ಸಂಧಿ ಪಾಡ್ದನ, ಸಂಗೀತ ಕುರ್ಚಿ.ಪುರುಷರಿಗೆ: ಹಗ್ಗಜಗ್ಗಾಟ, ಅಡಿಕೆಹಾಳೆ ಎಳೆಯುವುದು, ಗುಂಡೆಸೆತ, ನಿಧಿ ಹುಡುಕುವುದು, ಗೂಟದ ಓಟ, ವಾಲಿಬಾಲ್, ಕಬಡ್ಡಿ, ಪಟ್ಟಣಕ್ಕೆ ಬಾಂಬ್ ಸ್ಪರ್ಧೆಗಳ ನಡೆಯಲಿರುವುದು.

Related posts

ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಕೊಕ್ಕಡ ಗ್ರಾ.ಪಂ. ಸ್ವಚ್ಛತಾ ಸಂಕೀರ್ಣಕ್ಕೆ ಭೇಟಿ

Suddi Udaya

ಉಜಿರೆ: ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಜಿಲ್ಲಾ ಬಂದ್‌ಗೆ ತಾಲೂಕಿನಲ್ಲಿ ಬೆಂಬಲ: ಅಂಗಡಿ-ಮುಂಗಟ್ಟುಗಳು ಬಂದ್; ಸಂಚಾರ ಸ್ಥಗಿತಗೊಳಿಸಿದ ಕೆಎಸ್ಸಾರ್ಟಿಸಿ, ಖಾಸಗಿ ಬಸ್‌ಗಳು

Suddi Udaya

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಕಾರ್ಯಕ್ರಮ

Suddi Udaya

ಕುವೆಟ್ಟು: ಜಲಾಯನ ವ್ಯಾಪ್ತಿಯ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆಹಾರ ಉತ್ಪನ್ನ ತಯಾರಿಕೆ ಮತ್ತು ಸಿಹಿ ತಿಂಡಿ ತಯಾರಿ ಬಗ್ಗೆ ತರಬೇತಿ

Suddi Udaya
error: Content is protected !!