ನೆರಿಯ ಕುವೆತ್ತಿಲ್ ಎಂಬಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

Suddi Udaya

ಬೆಳ್ತಂಗಡಿ: ನೆರಿಯ ಗ್ರಾಮದ ಕುವೆತ್ತಿಲ್ ಅನಿಲ್ ಎಂಬವರ ಮನೆಯ ಹಿಂಬದಿಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ,ಬಳಿಕ ಬೆಂಕಿ ಮನೆಗೆ ಆವರಿಸಿ ಸಂಪೂರ್ಣವಾಗಿ ಮನೆಗೆ ಹಾನಿಯಾಗಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.
ಮನೆಯಲ್ಲಿ 4 ಜನರು ವಾಸವಿದ್ದು, ಎಲ್ಲರೂ ಕ್ಷೇತ್ರವೊಂದಕ್ಕೆ ಭೇಟಿ ನೀಡಿದ್ದು ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಈ ಘಟನೆ ಸಂಭವಿಸಿದೆ.ಬೆಂಕಿಯು ಮನೆಯ ಹಿಂಬದಿಯ ನೆಟ್ ಒಂದಕ್ಕೆ ತಗುಲಿ ನಂತರ ಮನೆಯಲ್ಲಿದ್ದ ಪುಸ್ತಕ,ರಬ್ಬರ್ ಗೆ ಹೊತ್ತಿ ಉರಿದಿದೆ.

ಸ್ಥಳೀಯಯರಾದ ಆನಂದ್,ಆಶೋಕ್, ಸತೀಶ್, ಧರ್ಣಪ್ಪ ಗೌಡ, ಯಶೋದಾ, ಗೀತಾ,ರಮಾನಂದಶ ಮತ್ತಿತರರು ಬೆಂಕಿಯನ್ನು ಹತೋಟಿಗೆ ತರಲು ಪ್ರಯತ್ನಿಸಿದರು. ಆದರೆ ಬೆಂಕಿಯು ಮನೆಯ ಸುತ್ತಲೂ ಆವರಿಸಿದ ಕಾರಣ ಮನೆಗೆ ಸಂಪೂರ್ಣ ಹಾನಿಯಾಗಿದೆ ಎಂದು ತಿಳಿದುಬಂದಿದೆ

Leave a Comment

error: Content is protected !!