29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿ

ನೆರಿಯ ಕುವೆತ್ತಿಲ್ ಎಂಬಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

ಬೆಳ್ತಂಗಡಿ: ನೆರಿಯ ಗ್ರಾಮದ ಕುವೆತ್ತಿಲ್ ಅನಿಲ್ ಎಂಬವರ ಮನೆಯ ಹಿಂಬದಿಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ,ಬಳಿಕ ಬೆಂಕಿ ಮನೆಗೆ ಆವರಿಸಿ ಸಂಪೂರ್ಣವಾಗಿ ಮನೆಗೆ ಹಾನಿಯಾಗಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.
ಮನೆಯಲ್ಲಿ 4 ಜನರು ವಾಸವಿದ್ದು, ಎಲ್ಲರೂ ಕ್ಷೇತ್ರವೊಂದಕ್ಕೆ ಭೇಟಿ ನೀಡಿದ್ದು ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಈ ಘಟನೆ ಸಂಭವಿಸಿದೆ.ಬೆಂಕಿಯು ಮನೆಯ ಹಿಂಬದಿಯ ನೆಟ್ ಒಂದಕ್ಕೆ ತಗುಲಿ ನಂತರ ಮನೆಯಲ್ಲಿದ್ದ ಪುಸ್ತಕ,ರಬ್ಬರ್ ಗೆ ಹೊತ್ತಿ ಉರಿದಿದೆ.

ಸ್ಥಳೀಯಯರಾದ ಆನಂದ್,ಆಶೋಕ್, ಸತೀಶ್, ಧರ್ಣಪ್ಪ ಗೌಡ, ಯಶೋದಾ, ಗೀತಾ,ರಮಾನಂದಶ ಮತ್ತಿತರರು ಬೆಂಕಿಯನ್ನು ಹತೋಟಿಗೆ ತರಲು ಪ್ರಯತ್ನಿಸಿದರು. ಆದರೆ ಬೆಂಕಿಯು ಮನೆಯ ಸುತ್ತಲೂ ಆವರಿಸಿದ ಕಾರಣ ಮನೆಗೆ ಸಂಪೂರ್ಣ ಹಾನಿಯಾಗಿದೆ ಎಂದು ತಿಳಿದುಬಂದಿದೆ

Related posts

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಅಂತರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ

Suddi Udaya

ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ ಪ್ರಕ್ರಿಯೆ ಜೂ.9 ಬೆಳಿಗ್ಗೆಯಿಂದ ಅಂಗಾಂಗ ದಾನ ನೋಂದಣಿ, ರಕ್ತದಾನ ಶಿಬಿರ, ವೈದ್ಯಕೀಯ ತಪಾಸಣಾ ಶಿಬಿರ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ಅಧ್ಯಕ್ಷ ದೇವದಾಸ್ ಕೆ ಸಾಲಿಯಾನ್ ಹೇಳಿಕೆ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya

ಮೇಲಂತಬೆಟ್ಟು: ಪಾಲೆತ್ತಡಿಗುತ್ತು ದೈವಗಳ ಧರ್ಮಚಾವಡಿ, ಭಂಡಾರದ ಮನೆ (ತರವಾಡು) ಪುನಃ ನಿರ್ಮಾಣದ ಶಂಕುಸ್ಥಾಪನೆ

Suddi Udaya

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya
error: Content is protected !!