23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಹಿಟ್ ಅಂಡ್ ರನ್ ಪ್ರಕರಣ ದಲ್ಲಿ ಬಾಲಕಿಗೆ ಸಾವು ಬೋಲೆರೋ ಚಾಲಕ ಪ್ರಶಾಂತ್ ಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ :ಜು.27ರಂದು ಸಂಜೆ ಬೆಳ್ತಂಗಡಿ ತಾಲೂಕಿನ ಉಜಿರೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಸೀಟು ಕಾಡು ಎಂಬಲ್ಲಿ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕುಡೆಂಚಿ ನಿವಾಸಿ ಗುರುಪ್ರಸಾದ್ ಗೋಖಲೆಯವರು ತನ್ನ ಮಗಳಾದ 5 ನೇ ತರಗತಿ ವಿದ್ಯಾರ್ಥಿನಿ ಅನರ್ಘ್ಯ(11ವ)ಳನ್ನು ಕುಳ್ಳಿರಿಸಿಕೊಂಡು ಮುಂಡಾಜೆ ಕಡೆ ಹೋಗುತ್ತಿದ್ದಾಗ ಹಿಂಬದಿಯಿಂದ ಅಜಾಗರೂಕತೆಯಿಂದ ಮದ್ಯ ಸೇವಿಸಿ ಬೊಲೆರೋ ವಾಹನ ಚಲಾಯಿಸಿಕೊಂಡು ಬರುತ್ತಿದ್ದ ಚಾಲಕನು ಮುಂದಿದ್ದ ಬೈಕ್‌ಗೆ ಡಿಕ್ಕಿ ಹೊಡೆದು ಬೈಕ್ ಸಮೇತ ಕೆಲ 30 ಮೀಟರ್ ದೂರ ಎಳೆದುಕೊಂಡು ಹೋಗಿ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದು, ಸ್ಥಳೀಯರು ಅರ್ಥ ಕಿ.ಮೀ. ಸಾಗುವಷ್ಟರಲ್ಲಿ ಬೊಲೆರೋ ವಾಹನವನ್ನು ತಡೆದು ನಿಲ್ಲಿಸುವಲ್ಲಿ ಸಾರ್ವಜನಿಕರು ಯಶಸ್ವಿಯಾಗಿದ್ದಾರೆ.

ಘಟನೆಯಲ್ಲಿ ಬೈಕಿನಲ್ಲಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಬಾಲಕಿಯ ತಂದೆ ಗುರುಪ್ರಸಾದ್ ಗೋಖಲೆಗೆ ಗಂಭೀರ ಗಾಯವಾಗಿದ್ದು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಗೆ ಸಂಬಂಧಿಸಿ ಬೊಲೆರೊ ಚಾಲಕ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲು ನಿವಾಸಿ ಪ್ರಶಾಂತ್ (31ವ) ವಿರುದ್ಧ ಜು.28 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 105,125A BNS,134A&B, IMV Act ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.

ಬೊಲೆರೊ ಚಾಲಕ ಆರೋಪಿ ಪ್ರಶಾಂತ್ ನನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು ಜು.28 ರಂದು ಸಂಜೆ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಧರ್ಮಸ್ಥಳ ಪೊಲೀಸರು ಹಾಜರುಪಡಿಸಿದ್ದಾರೆ. ಈ ವೇಳೆ ಬೆಳ್ತಂಗಡಿ ನ್ಯಾಯಾಧೀಶರು ಬೊಲೆರೋ ಚಾಲಕ ಪ್ರಶಾಂತ್ ಗೆ ನ್ಯಾಯಾಂಗ ಬಂಧನವನ್ನು ವಿಧಿಸಿದ್ದಾರೆ.

Related posts

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಬಗ್ಗೆ ಮಂಗಳೂರು ವಲಯ ಸಮಾಲೋಚನಾ ಸಭೆ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಭಂಡಾರಿಗೋಳಿ ಬಸ್ ಸ್ಟಾಂಡ್ ಗೆ ಹೊಸ ಶೀಟು ಅಳವಡಿಕೆ

Suddi Udaya

ಧರ್ಮಸ್ಥಳ ಮುಂಡ್ರುಪಾಡಿಯಲ್ಲಿ ಬೈಕಿಗೆ ಲಾರಿ ಡಿಕ್ಕಿ : ಬೈಕ್ ಸವಾರ ಬೆಳ್ತಂಗಡಿ ಖಾಸಗಿ ಸವೆ೯ಯರ್ ಸಹಾಯಕ ಗುರುವಾಯನಕೆರೆ ಶಕ್ತಿನಗರ ನಿವಾಸಿ ಪ್ರಸಾದ್ ಶೆಟ್ಟಿ ಮೃತ್ಯು: ಸಹ ಸವಾರ ಖಾಸಗಿ ಸವೆ೯ಯರ್ ವಿಶ್ವನಾಥ್ ರಾವ್ ಗೆ ಗಾಯ

Suddi Udaya

ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಆಚರಣೆ

Suddi Udaya

ಧರ್ಮಸ್ಥಳ: ಮೃತ ದೇಹಗಳನ್ನು ಹೂತು ಹಾಕಿದ ದೂರು ಪ್ರಕರಣ ಕೇಸ್ ಫೈಲ್ ಪಡೆಯಲು ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ. ತನಿಖಾಧಿಕಾರಿ ಜಿತೇಂದ್ರ ದಯಾಮ

Suddi Udaya
error: Content is protected !!