ಲಾಯಿಲ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ 36 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಸತೀಶ್ ಭಟ್ ಇವರಿಂದ ಲಾಯಿಲದ ವಿಘ್ನೇಶ್ವರ ಕಲಾಮಂದಿರದಲ್ಲಿ ಜುಲೈ 26ರಂದು ನೆರವೇರಿತು.

ಸಮಿತಿಯ ಈ ಸಾಲಿನ ಅಧ್ಯಕ್ಷರಾದ ಆರ್ ರಮೇಶ್ ಶಾಲು ಹಾಕಿ ಅರ್ಚಕರನ್ನು ಸ್ವಾಗತಿಸಿದರು. ಕಾರ್ಯದರ್ಶಿ ಅರವಿಂದ್ ಕುಮಾರ್ ಸ್ವಾಗತಿಸಿ ಪ್ರಧಾನ ಕಾರ್ಯದರ್ಶಿ ರುಕ್ಮಯ ಕನ್ನಾಜೆ ಪ್ರಸ್ತಾವಿಕವಾಗಿ ಮಾತನಾಡಿದರು.

ಸೆಪ್ಟೆಂಬರ್ 7 ರಿಂದ 9 ರ ವರೆಗೆ ಗಣೇಶೋತ್ಸವ ನಡೆಯಲಿದ್ದು ಎಲ್ಲರ ಸಹಕಾರ ಯಾಚಿಸಿದರು.. ಸಮಿತಿಯ ಹಿರಿಯ ಸದಸ್ಯರುಗಳು, ಸಲಹೆಗಾರುಗಳು, ಪದಾಧಿಕಾರಿಗಳು, ಸದಸ್ಯರುಗಳು, ಬಲಮುರಿ ಮಹಿಳಾ ಭಜನಾ ಮಂಡಳಿಯ ಸದಸ್ಯರುಗಳು ಉಪಸ್ಥಿತರಿದ್ದರು.

Leave a Comment

error: Content is protected !!