23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮ

ಬೆಳ್ತಂಗಡಿ : ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಲಾಯಿಲ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘ ಲಾಯಿಲ ವತಿಯಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮವು ಜು.28 ರಂದು ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಸಂಸದ ಕ್ಯಾ| ಬ್ರಿಜೇಶ್ ಚೌಟ ಮಾತನಾಡಿ ವಿಶ್ವಕರ್ಮ ಸಮಾಜದ ಜೊತೆಗೆ ನಾವೆಲ್ಲರೂ ಇದ್ದೇವೆ. ವಿಶ್ವಕರ್ಮ ಸಮಾಜ ನಮ್ಮ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ದೊಡ್ಡ ಪಾತ್ರ ವಹಿಸಿದೆ ಎಂದರು.

ಸಂಸದರ ನಿಧಿಯಿಂದ ನೂತನ ಸಭಾಭವನಕ್ಕೆ ಅನುದಾನ ಒದಗಿಸುವ ಬಗ್ಗೆ ಮನವಿ ಮತ್ತು ಸಂಘದ ಸಭಾಭವನ ನಿರ್ಮಾಣದ ಜೊತೆಗೆ ಶಿಲ್ಪಕಲಾ ಕೇಂದ್ರ ಮತ್ತು ಪಂಚಕಸುಬುಗಳನ್ನು ಉತ್ತೇಜಿಸಲು ಅಧ್ಯಯನ ಕೇಂದ್ರ ತೆರೆಯಲು ಕೇಂದ್ರ ಸರಕಾರದ ಸಂಬಂಧಪಟ್ಟ ಇಲಾಖೆಗಳಿಂದ ವಿಶೇಷ ಅನುದಾನ ಒದಗಿಸಿಕೊಡುವ ಬಗ್ಗೆ ಹಾಗೂ ಜನಸಾಮಾನ್ಯರ ಅನುಕೂಲಕ್ಕಾಗಿ “ಪಿ.ಎಂ. ವಿಶ್ವಕರ್ಮ” ಯೋಜನೆಯ ತರಬೇತಿ ಕೇಂದ್ರವನ್ನು ತಾಲೂಕಿನಲ್ಲಿ ನಡೆಸುವಂತೆ ಹಾಗೂ ಕಬ್ಬಿಣ ಕೆಲಸದ ಸಂಘದ ವಿವಿಧ ಬೇಡಿಕೆಗಳ ಮನವಿಯನ್ನು ನೂತನ ಸಂಸದ ಕ್ಯಾ | ಬ್ರಿಜೇಶ್ ಚೌಟರಿಗೆ ಮನವಿ ಸಲ್ಲಿಸಲಾಯಿತು.

ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಜಿಲ್ಲಾ ನಾಯಕ ಹರಿಕೃಷ್ಣ ಬಂಟ್ವಾಳ, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಶ್ರೀ ವಿಶ್ವಕರ್ಮಾಭ್ಯುದಯ ಸಭಾದ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಾಯಕೋಡಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶ್ರೀ ವಿಶ್ವಕರ್ಮಾಭ್ಯುದಯ ಸಭಾದ ಉಪಾಧ್ಯಕ್ಷ ರಾಘವೇಂದ್ರ ಆಚಾರ್ಯ ನೈಕುಳಿ, ಶಿವಪ್ರಸಾದ್ ಪುರೋಹಿತರು, ನಿವೃತ್ತ ತಹಸೀಲ್ದಾರ್ ರಾಘವೇಂದ್ರ ಆಚಾರ್ಯ ನಿಸರ್ಗ ಬಾರ್ಯ, ಉಮೇಶ್ ಆಚಾರ್ಯ ಕಾನರ್ಪ, ರಮೇಶ್ ಆಚಾರ್ಯ ಮದ್ದಡ್ಕ, ಗುರುಸೇವಾ ಪರಿಷತ್ ಸಂಘಟನಾ ಕಾರ್ಯದರ್ಶಿ ಮಂಜುನಾಥ ಆಚಾರ್ಯ ಅಳದಂಗಡಿ, ಕಬ್ಬಿಣ ಕೆಲಸ ಸಂಘದ ಅಧ್ಯಕ್ಷ ಆನಂದ ಆಚಾರ್ಯ ಮಾಪಲಾಡಿ, ರುಕ್ಮಯ ಆಚಾರ್ಯ ಕನ್ನಾಜೆ, ಶಿಲ್ಪಿ ಜಯಚಂದ್ರ ಆಚಾರ್ಯ, ವಿಶ್ವಕರ್ಮ ಯುವಮಿಲನ ಅಧ್ಯಕ್ಷ ಸುಧಾಕರ್ ಆಚಾರ್ಯ ವೇಣೂರು, ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದ ಅಧ್ಯಕ್ಷೆ ಉಷಾ ಹರಿಪ್ರಸಾದ್, ಕಾರ್ಯದರ್ಶಿ ಪುಷ್ಪಾ ಗಣೇಶ್ ಆಚಾರ್ಯ, ಆಶಾ ಸತೀಶ್ ಆಚಾರ್ಯ, ಮೀನಾಕ್ಷಿ ಗೋಪಾಲ್ ಆಚಾರ್ಯ, ಪ್ರಸನ್ನ ಅಶೋಕ್ ಆಚಾರ್ಯ ಮತ್ತು ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.ಕಾರ್ಯದರ್ಶಿ ರಾಮ್ ಪ್ರಸಾದ್ ಎನ್ ಎಸ್ ಗುಂಪಲಾಜೆ ನಿರೂಪಿಸಿ ವಂದಿಸಿದರು.

Related posts

ಪೆರ್ಲ-ಬೈಪಾಡಿ: ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

Suddi Udaya

ಪದ್ಮುಂಜ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೊಲ್ಪಾಡಿ ಶಾಲೆಯ ವಿದ್ಯಾರ್ಥಿನಿ ತನಿಷ್ಕ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಆಳ್ವಾಸ್ ಪದವಿ ಕಾಲೇಜಿನಲ್ಲಿ ವಾರ್ಷಿಕ ಕಾರ್ಯಕ್ರಮ ‘ಇನಾಮು 2026’

Suddi Udaya

ಮಿತ್ತಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ: ಕೇಶವ ಫಡಕೆ ಅಧ್ಯಕ್ಷ – ಸಂದೀಪ್ ಪೂಜಾರಿ ಕಾರ್ಯದರ್ಶಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಪ್ರಣಾಳಿಕೆಯಲ್ಲಿರುವ ಅಂಶಗಳೇನು?

Suddi Udaya
error: Content is protected !!