July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಐ.ಟಿ. ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದ 2024-25ನೇ ಸಾಲಿನ ‘ಐ.ಟಿ. ಕ್ಲಬ್’ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಇಂದು (ಜು.29) ಜರಗಿತು.

ಉದ್ಘಾಟನೆ ನೆರವೇರಿಸಿ ಮಾತನಾಡಿದ ಉಜಿರೆಯ ಪ್ರಕಾಶ ಎಲೆಕ್ಟ್ರಾನಿಕ್ಸ್ ಇದರ ಪಾರ್ಟ್ನರ್ ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸುಮನಾ ಶೆಟ್ಟಿ, “ತಂತ್ರಜ್ಞಾನ ಬಹಳಷ್ಟು ಮುಂದುವರಿದಿದೆ. ನಾವು ಅದರ ಜೊತೆ ಸಾಗಬೇಕು ಹೊರತು ಹಿಂದುಳಿಯಬಾರದು” ಎಂದರು.

“ತಂತ್ರಜ್ಞಾನ ಕ್ಷೇತ್ರ ಜನರಿಗೆ ಸದಾ ಪೂರಕವಾಗಿ ಇರಬೇಕು. ಸಮಾಜಕ್ಕೆ ನಮ್ಮ ಕೈಲಾದಷ್ಟು ಕೊಡುಗೆ ನೀಡುವುದರ ಕಡೆಗೆ ನಮ್ಮ ಗಮನ ಇರಲಿ” ಎಂದು ಅವರು ಕಿವಿಮಾತು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಮಾತನಾಡಿ, ಆಧುನಿಕತೆಯ ಯುಗದಲ್ಲಿ ತಂತ್ರಜ್ಞಾನದ ಕ್ಷೇತ್ರದಲ್ಲಿ ಸ್ಪರ್ಧೆ ಹೆಚ್ಚಾಗಿದೆ. ವಿದ್ಯಾರ್ಥಿ ಹಂತದಲ್ಲಿ ಉತ್ತಮ ಹಾಗೂ ನಿರ್ದಿಷ್ಟ ಗುರಿಯನ್ನು ಹೊಂದಿರಬೇಕು. ಕಾಲೇಜಿನಲ್ಲಿ ಎದುರಾಗುವ ಎಲ್ಲ ಸವಾಲುಗಳನ್ನು ಅವಕಾಶದಂತೆ ಸ್ವೀಕರಿಸಿ ಒಳ್ಳೆಯ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಐ.ಟಿ. ಕ್ಲಬ್ ಸಂಯೋಜಕರಿಗೆ ಬ್ಯಾಡ್ಜ್ ನೀಡಿ ಅಭಿನಂದಿಸಲಾಯಿತು. ದ್ವಿತೀಯ ಬಿಸಿಎ ವಿದ್ಯಾರ್ಥಿಗಳು ತಯಾರಿಸಿದ ಭಿತ್ತಿಪತ್ರ ಅನಾವರಣಗೊಳಿಸಲಾಯಿತು. ವಿಭಾಗದ ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು.

ವಿಭಾಗ ಮುಖ್ಯಸ್ಥ ಶೈಲೇಶ್ ಕುಮಾರ್ ಹಾಗೂ ಪ್ರಾಧ್ಯಾಪಕರು ಉಪಸ್ಥಿತರಿದ್ದರು.

ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಮೋನಲ್ ಸ್ವಾಗತಿಸಿದರು. ಆಶಾ ಹಾಗೂ ತಂಡ ಪ್ರಾರ್ಥಿಸಿದರು. ಐ. ಟಿ. ಕ್ಲಬ್ ಕಾರ್ಯದರ್ಶಿ ಅಂಶಿತಾ ವಂದಿಸಿದರು. ತ್ರಿಶಾ ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡಾಜೆ: ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯ ರಾಶಿ

Suddi Udaya

ಪಟ್ರಮೆ: ಪಾದೆಯಲ್ಲಿ ಧರೆ ಕುಸಿತ: ಮನೆಗೆ ಹಾನಿ

Suddi Udaya

ಅಳದಂಗಡಿ ಹಿಂದೂ ಯುವ ಶಕ್ತಿ ಆಲಡ್ಕ ಕ್ಷೇತ್ರ, ರಾಜಕೀಯ ರಹಿತ ಸಾಮಾಜಿಕ ಸೇವಾ ಸಂಘಟನೆಯ ನೂತನ ಪ್ರದಾನ ಕಚೇರಿ ಉದ್ಘಾಟನೆ

Suddi Udaya

ರೆಂಕೆದಗುತ್ತು: ವಿಪರೀತ ಮಳೆಯಿಂದ ಮನೆಗೆ ಹಾನಿ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya

ತಣ್ಣೀರುಪಂತ: ಪಾಲೇದು ಮಹಮ್ಮಾಯಿ ದೇವಿಯ ಅಂಗಾರ ಪೂಜೆ

Suddi Udaya

ಉಜಿರೆ: ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ವ್ಯಕ್ತಿ ನಾಪತ್ತೆ

Suddi Udaya
error: Content is protected !!