25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಕುಕ್ಕೇಡಿ : ಶ್ರೀ ಶಾರದಾಂಭ ಭಜನಾ ಮಂಡಳಿ ಶ್ರೀ ಶಾರದನಗರ ಬುಳೆಕ್ಕರ ಕುಕ್ಕೇಡಿ ಇದರ ವಾರ್ಷಿಕ ಮಹಾಸಭೆಯು ಶ್ರೀ ಶಾರದಾಂಭ ಭಜನಾ ಮಂದಿರದ ತಿಮ್ಮಯ್ಯ ಬಲ್ಲಾಳ್ ಸಭಾಭವನದಲ್ಲಿ ಇತ್ತೀಚೆಗೆ ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ಮಂಡಳಿಯ ಅಧ್ಯಕ್ಷ ಪ್ರಕಾಶ್ ಪೂಜಾರಿಯವರು ವಹಿಸಿದರು.

ವೇದಿಕೆಯಲ್ಲಿ ಕುಕ್ಕೇಡಿ ಗ್ರಾಮ ಪಂಚಾಯತ್ ಸದಸ್ಯ ಗೋಪಾಲ್ ಶೆಟ್ಟಿ , ಮಹಿಳಾ ಸಮಿತಿ ಅಧ್ಯಕ್ಷೆ ಶ್ರೀಮತಿ ಶಕುಂತಲಾ ಕೃಷ್ಣಪ್ಪ ದೇವಾಡಿಗ ಉಪಸ್ಥಿತರಿದ್ದರು.

ಈ ವೇಳೆ ಮುಂದಿನ ಸಾಲಿನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಗೌರವಾಧ್ಯಕ್ಷರಾಗಿ ರಾಜೇಶ್ ಜೈನ್ ಬುಳೆಕ್ಕರ್ ಬೀಡು, ಅಧ್ಯಕ್ಷರಾಗಿ ಹರೀಶ್ ಬಂಗೇರ, ಉಪಾಧ್ಯಕ್ಷರಾಗಿ ಚಂದ್ರಹಾಸ ಪೂಜಾರಿ, ನಿತಿನ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಜಿ., ಕಾರ್ಯದರ್ಶಿಯಾಗಿ ರಕ್ಷಿತ್ ಪೂಜಾರಿ, ಜೊತೆ ಕಾರ್ಯದರ್ಶಿಯಾಗಿ ನಿತೇಶ್ ಮಂಗತ್ಯಾರ್ , ಕೋಶಾಧಿಕಾರಿಯಾಗಿ ಸುದೀಪ್ ಕುಮಾರ್, ಭಜನಾ ಸಂಚಾಲಕರಾಗಿ ಗಣೇಶ್ ಪೂಜಾರಿ, ಲೆಕ್ಕಪರಿಶೋಧಕರಾಗಿ ಸತೀಶ್ ಬಂಗೇರ , ಕಾರ್ಯಧ್ಯಕ್ಷರಾಗಿ ದಯಾನಂದ ಶೆಟ್ಟಿ, ಗೌರವ ಸಲಹೆಗಾರರಾಗಿ ಗೋಪಾಲ ಶೆಟ್ಟಿ, ವಿಶ್ವನಾಥ ದೇವಾಡಿಗ, ಪ್ರಕಾಶ್ ಪೂಜಾರಿ, ಸುಂದರ ದೇವಾಡಿಗ, ನಾರಾಯಣ ನಾಯ್ಕ, ಹಾಗೂ ಇತರ ಮೂವತ್ತು ಸದಸ್ಯರನ್ನು ಆಯ್ಕೆಮಾಡಲಾಯಿತು.

ಪ್ರವೀಣ್ ಪೂಜಾರಿ ಸ್ವಾಗತಿಸಿದರು. ಜಗದೀಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ನವೀನ್ ಜಿ. ಧನ್ಯವಾದವಿತ್ತರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರಿಂದ ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ಮಟ್ಟದ ಜಿನ ಭಜನೆ ಸೀಸನ್ 7ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂದಬೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೆ ಹರಿದ ಮಳೆ ನೀರು ಹಾಗೂ ರಸ್ತೆಯುದ್ದಕ್ಕೂ ಬಾಗಿ ನಿಂತ ಅಪಾಯಕಾರಿ ಮರಗಳು

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸನ್ಮಾನ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಉತ್ಸವ ಸಮಿತಿ ರಚನೆ

Suddi Udaya

ನಾವೂರು ಗ್ರಾಮ ಪಂಚಾಯತ್ ನ ವಿಶೇಷ ಗ್ರಾಮ ಸಭೆ

Suddi Udaya

ಕೊಕ್ಕಡ ವಲಯದ ಅನಾರು ಕಾರ್ಯಕ್ಷೇತ್ರದ ದುರ್ಗ ಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya
error: Content is protected !!