25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಜೆಸಿ ಜಯೇಶ್ ಬರೆಟ್ಟೊ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ವಿಭಾಗದ ಸಮ್ಮೇಳನ ವೈಭವ – 2024 ಕಾರ್ಯಕ್ರಮದಲ್ಲಿ ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರು, ವಲಯ 15ರ ಹೆಮ್ಮೆಯ ಪೂರ್ವ ವಲಯ ಉಪಾಧ್ಯಕ್ಷರು, ಹಾಗೂ ಮಡಂತ್ಯಾರು ಡ್ರೀಮ್ಸ್ ಡೆಕೋರೇಟರ್ಸ್ ಹಾಗೂ ಮೈಸ್ ಕಂಪ್ಯೂಟರಿನ ಮಾಲಕರಾದ ಜೇಸಿ ಜಯೇಶ್ ಬರೆಟ್ಟೊ ಅವರಿಗೆ ವೃತ್ತಿ ಮತ್ತು ಸಮಾಜಸೇವಾ ಕಾರ್ಯಸಾಧನೆಗಾಗಿ ಸಾಧನಾಶ್ರೀ- 2024 ಪ್ರಶಸ್ತಿ ನೀಡಿ ಜು.28 ರಂದು ಗೌರವಿಸಲಾಯಿತು.

2011 ರಲ್ಲಿ ಜೆಸಿಐ ಮಡಂತ್ಯಾರು ಮೂಲಕ ಜೇಸಿ ಆಂದೋಲನಕ್ಕೆ ಸದಸ್ಯರಾಗಿ ಸೇರ್ಪಡೆಗೊಂಡು ನಂತರ ಕೋಶಾಧಿಕಾರಿಯಾಗಿ, ಉಪಾಧ್ಯಕ್ಷರಾಗಿ, ಕಾರ್ಯದರ್ಶಿಯಾಗಿ, ಜೇಸಿ ಸಪ್ತಾಹದ ಕಾರ್ಯಕ್ರಮ ಸಂಯೋಜಕರಾಗಿ ವಿವಿಧ ಹುದ್ದೆಗಳನ್ನು ಅಲಂಕರಿಸಿ 2016 ರಲ್ಲಿ ಜೆಸಿಐ ಮಡಂತ್ಯಾರಿನ ಘಟಕಾಧ್ಯಕ್ಷರಾಗಿ ಹಲವಾರು ಜನಪರ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಸಮಾಜದಲ್ಲಿ ಗುರುತಿಸಿಕೊಂಡಿದ್ದರು. ವೃತ್ತಿಯಲ್ಲಿ 24 ವರ್ಷಗಳ ಸುಧೀರ್ಘ ಅನುಭವ ಹೊಂದಿದ ಇವರು ಸಾಧನಾ ಶ್ರೀ ಪ್ರಶಸ್ತಿ ಪಡೆಯುವಲ್ಲಿ ಅರ್ಹ ವ್ಯಕ್ತಿಯೇ ಸರಿ.

Related posts

ಉಜಿರೆ ಹಳೇಪೇಟೆ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ಅಧ್ಯಕ್ಷರಾಗಿ ಸೂರಪ್ಪ ಗಾಂಧಿನಗರ ಅವಿರೋಧವಾಗಿ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಬ್ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಅತ್ಯಾಧುನಿಕ ಸಿಎಲ್‌ಐಎ ಮೆಶಿನ್ ಅಳವಡಿಕೆ

Suddi Udaya

ಬೆಳ್ತಂಗಡಿ: ಆಟೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Suddi Udaya

ಆಮಂತ್ರಣ ರಾಜ್ಯ ಸಮಿತಿಗೆ ಸದಸ್ಯರಾಗಿ ಹೆಚ್.ಕೆ ನಯನಾಡು ಆಯ್ಕೆ

Suddi Udaya

ಧರ್ಮಸ್ಥಳ : ಮುಳಿಕ್ಕಾರು ನಿವಾಸಿ ವಿನುತ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!