September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜೇಸಿಐ ವಲಯ 15ರ ತಾತ್ಕಾಲಿಕ ವಲಯ ತರಬೇತುದಾರರಾಗಿ ಚಂದ್ರಹಾಸ ಬಳಂಜ ಆಯ್ಕೆ

ವ್ಯಕ್ತಿತ್ವ ವಿಕಸನಕ್ಕೆ ಹೆಸರಾದ ಅಂತರಾಷ್ಟ್ರೀಯ ಸಂಸ್ಥೆ ಜೇಸಿಐನ ವಲಯ 15 ರ ವಲಯ ತರಬೇತುದಾರರ ತರಬೇತಿ ಕಾರ್ಯಗಾರ ಜುಲೈ 18 ರಿಂದ 21 ರ ತನಕ ಜೇಸಿಐ ಕಾಪುವಿನ ಆತಿಥ್ಯದಲ್ಲಿ ಕಾಪುವಿನಲ್ಲಿ ನಡೆದಿದ್ದು ಜೇಸಿಐ ಬೆಳ್ತಂಗಡಿ ಮಂಜುಶ್ರೀಯ ಉಪಾಧ್ಯಕ್ಷರಾದ ಚಂದ್ರಹಾಸ ಬಳಂಜ ಭಾಗವಹಿಸಿ ಉತ್ತೀರ್ಣರಾಗಿ ತಾತ್ಕಾಲಿಕ ವಲಯ ತರಬೇತುದಾರರಾಗಿ ಆಯ್ಕೆಯಾಗಿದ್ದಾರೆ. ಗೋವಾ, ಆಂಧ್ರಪ್ರದೇಶ, ಕೇರಳ ಹೀಗೆ ವಿವಿಧ ಕಡೆಯಿಂದ ಜೇಸಿಐ ಸದಸ್ಯರು ಇದರಲ್ಲಿ ಭಾಗವಹಿಸಿದ್ದು ಇದು ಜೇಸಿಐ ನ ಅತ್ಯುತ್ತಮ ತರಬೇತಿ ಕಾರ್ಯಗಾರದಲ್ಲಿ ಒಂದಾಗಿದೆ.


ಜೇಸಿಐನ ಸಕ್ರೀಯ ಸದಸ್ಯರಾಗಿರುವ ಇವರು ಇದರೊಂದಿಗೆ ಹಲವಾರು ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕ್ಕೊಂಡಿದ್ದಾರೆ.

ಪುಣ್ಕೆದೊಟ್ಟು ಶ್ರೀಧರ ಪೂಜಾರಿ, ಸುಶೀಲ ದಂಪತಿಗಳ ಪುತ್ರರಾಗಿರುವ ಇವರು ಬಹುಮುಖ ಪ್ರತಿಭೆಯಾಗಿದ್ದು ನಿರೂಪಣೆ, ಭಾಷಣ, ಬರವಣಿಗೆ, ನಟ, ನೃತ್ಯಪಟು, ಕುಣಿತ ಭಜನೆ, ತೀರ್ಪುಗಾರಿಕೆ ಕಾರ್ಯಕ್ರಮ ಸಂಯೋಜನೆ ಎಲ್ಲಾ ವಿಭಾಗದಲ್ಲಿ ಕೂಡ ಸೈ ಎನಿಸಿಕ್ಕೊಂಡಿದ್ದು ಹೀಗಾಗಲೆ ಜಿಲ್ಲೆಯಾದ್ಯಾಂತ ಶಾಲಾ ಕಾಲೇಜು, ಸಂಘ ಸಂಸ್ಥೆಗಳಲ್ಲಿ ಹಲವಾರು ತರಬೇತಿ ನಡೆಸಿದ ಅನುಭವವನ್ನು ಪಡೆದಿದ್ದಾರೆ.

Related posts

ಬೆಳ್ತಂಗಡಿ ಒಕ್ಕಲಿಗ ಗೌಡರ ಸಂಘ ಹಾಗೂ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಿಂದ ತುoಗಪ್ಪ ಗೌಡರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya

ಕರಾಯ ತ್ರಿವರ್ಣ ಸಂಗಮ ಆಟೋ ಚಾಲಕ ಮಾಲಕ ಸಂಘದ ಸಮಿತಿ ರಚನೆ: ಅಧ್ಯಕ್ಷರಾಗಿ ವೆಂಕಟೇಶ್ ಪೂಜಾರಿ ಅವಿರೋಧ ಆಯ್ಕೆ

Suddi Udaya

ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ

Suddi Udaya

ಯಕ್ಷಗಾನ ಕಲಾವಿದ ವಸಂತ ಗೌಡ ಅವರಿಗೆ ಯಕ್ಷಭಾರತಿಯಿಂದ ಗೌರವ ಸನ್ಮಾನ

Suddi Udaya

ಕುವೆಟ್ಟು ಕೋಡಿಮನೆ ನಿವಾಸಿ ಕಲ್ಯಾಣಿ ನಿಧನ

Suddi Udaya
error: Content is protected !!