25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜೇಸಿಐ ವಲಯ 15ರ ತಾತ್ಕಾಲಿಕ ವಲಯ ತರಬೇತುದಾರರಾಗಿ ಚಂದ್ರಹಾಸ ಬಳಂಜ ಆಯ್ಕೆ

ವ್ಯಕ್ತಿತ್ವ ವಿಕಸನಕ್ಕೆ ಹೆಸರಾದ ಅಂತರಾಷ್ಟ್ರೀಯ ಸಂಸ್ಥೆ ಜೇಸಿಐನ ವಲಯ 15 ರ ವಲಯ ತರಬೇತುದಾರರ ತರಬೇತಿ ಕಾರ್ಯಗಾರ ಜುಲೈ 18 ರಿಂದ 21 ರ ತನಕ ಜೇಸಿಐ ಕಾಪುವಿನ ಆತಿಥ್ಯದಲ್ಲಿ ಕಾಪುವಿನಲ್ಲಿ ನಡೆದಿದ್ದು ಜೇಸಿಐ ಬೆಳ್ತಂಗಡಿ ಮಂಜುಶ್ರೀಯ ಉಪಾಧ್ಯಕ್ಷರಾದ ಚಂದ್ರಹಾಸ ಬಳಂಜ ಭಾಗವಹಿಸಿ ಉತ್ತೀರ್ಣರಾಗಿ ತಾತ್ಕಾಲಿಕ ವಲಯ ತರಬೇತುದಾರರಾಗಿ ಆಯ್ಕೆಯಾಗಿದ್ದಾರೆ. ಗೋವಾ, ಆಂಧ್ರಪ್ರದೇಶ, ಕೇರಳ ಹೀಗೆ ವಿವಿಧ ಕಡೆಯಿಂದ ಜೇಸಿಐ ಸದಸ್ಯರು ಇದರಲ್ಲಿ ಭಾಗವಹಿಸಿದ್ದು ಇದು ಜೇಸಿಐ ನ ಅತ್ಯುತ್ತಮ ತರಬೇತಿ ಕಾರ್ಯಗಾರದಲ್ಲಿ ಒಂದಾಗಿದೆ.


ಜೇಸಿಐನ ಸಕ್ರೀಯ ಸದಸ್ಯರಾಗಿರುವ ಇವರು ಇದರೊಂದಿಗೆ ಹಲವಾರು ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕ್ಕೊಂಡಿದ್ದಾರೆ.

ಪುಣ್ಕೆದೊಟ್ಟು ಶ್ರೀಧರ ಪೂಜಾರಿ, ಸುಶೀಲ ದಂಪತಿಗಳ ಪುತ್ರರಾಗಿರುವ ಇವರು ಬಹುಮುಖ ಪ್ರತಿಭೆಯಾಗಿದ್ದು ನಿರೂಪಣೆ, ಭಾಷಣ, ಬರವಣಿಗೆ, ನಟ, ನೃತ್ಯಪಟು, ಕುಣಿತ ಭಜನೆ, ತೀರ್ಪುಗಾರಿಕೆ ಕಾರ್ಯಕ್ರಮ ಸಂಯೋಜನೆ ಎಲ್ಲಾ ವಿಭಾಗದಲ್ಲಿ ಕೂಡ ಸೈ ಎನಿಸಿಕ್ಕೊಂಡಿದ್ದು ಹೀಗಾಗಲೆ ಜಿಲ್ಲೆಯಾದ್ಯಾಂತ ಶಾಲಾ ಕಾಲೇಜು, ಸಂಘ ಸಂಸ್ಥೆಗಳಲ್ಲಿ ಹಲವಾರು ತರಬೇತಿ ನಡೆಸಿದ ಅನುಭವವನ್ನು ಪಡೆದಿದ್ದಾರೆ.

Related posts

ನಾಳ ಶ್ರೀ ಕ್ಷೇತ್ರದಲ್ಲಿ ತೆನೆ ವಿತರಣೆ ಹಾಗೂ ಹೊಸ ಅಕ್ಕಿ ಊಟ

Suddi Udaya

ಮಡಂತ್ಯಾರು: ಸಾಲುಮರ ಬಳಿ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ರವಿ ಕಕ್ಕೆಪದವು ರವರಿಗೆ ತೆರೆಮರೆಯ ನಾಯಕ ಪುರಸ್ಕಾರ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಜನಜಾತಿಯ ಗರಿಮಾ ಉತ್ಸವ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ

Suddi Udaya
error: Content is protected !!