25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ವಾಕರ್ ವಿತರಣೆ

ಬಳಂಜ: ಬೆಳ್ತಂಗಡಿ ತಾಲೂಕಿನ ಹೆಸರಾಂತ ಭಜನೆ ಮಂಡಳಿಗಳಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಒಂದು. ಈ ತಂಡವು ಕೇವಲ ಭಜನೆಯನ್ನು ಮಾತ್ರವಲ್ಲದೆ ಸಮಾಜಮುಖಿ ಕೆಲಸ, ಅಗತ್ಯ ವಸ್ತುಗಳ ಪೂರೈಕೆ, ಧಾರ್ಮಿಕತೆ ಸಾಂಸ್ಕೃತಿಕತೆ, ಮುಂತಾದವುಗಳಲ್ಲಿ ತೊಡಗಿಸಿಕೊಂಡಿದೆ. ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ತಂಡದ ಸದಸ್ಯರಾದ ಅದ್ವಿತ್ ಮತ್ತು ಕೃತಿ ಅವರ ಪೋಷಕರಾದ ವೇದಾವತಿ ಅವರ ತಾಯಿ ಮನೆಯಲ್ಲಿ ಆಕಸ್ಮಿಕವಾಗಿ ಬಿದ್ದು ಪೆಟ್ಟಾಗಿದ್ದು ಈಗಾಗಲೇ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯನ್ನು ಮಾಡಿಸಿ ಚೇತರಿಸಿಕೊಂಡಿದ್ದಾರೆ.

ಆದರೆ ಅವರಿಗೆ ಇನ್ನೊಬ್ಬರ ಸಹಾಯವಿಲ್ಲದೆ ನಡೆದಾಡಲು ಕಷ್ಟವಾಗುತ್ತಿದ್ದು ಇದೀಗ ಅವರಿಗೆ ನಡೆದಾಡಲು ವಾಕರ್ ನ ಅವಶ್ಯಕತೆ ಇದ್ದು ಅದನ್ನು ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ಆರೋಗ್ಯ ಸೇವಾ ಎಂಟನೇ ಯೋಜನೆಯ ಮೂಲಕ ಜು.28ರಂದು ಅವರಿಗೆ ಹಸ್ತಾಂತರ ಮಾಡಲಾಯಿತು.

ಈ ಸೇವಾ ಯೋಜನೆಗೆ ಯುವ ಉದ್ಯಮಿಗಳಾದ ಎಗ್ರೀನ್ ಬಯೋಟೆಕ್ ಸಂಸ್ಥಾಪಕರು ಅಶ್ವಥ್ ಹೆಗ್ಡೆ ಬಳಂಜ ಇವರು ಕೂಡ ಕೈ ಜೋಡಿಸಿದ್ದು, ವೇದಾವತಿ ಅವರ ಮನೆಗೆ 30 ಕೆಜಿ ಅಕ್ಕಿ ಮತ್ತು ಎಲ್ಲಾ ದಿನಸಿ ಸಾಮಗ್ರಿಗಳನ್ನೂ ನೀಡಲು ಸಹಾಯಹಸ್ತ ನೀಡಿದರು. ಈ ಸಂದರ್ಭದಲ್ಲಿ ಮಂಡಳಿಯ ಸಂಚಾಲಕರು ಹರೀಶ್ ವೈ ಚಂದ್ರಮ, ಅದ್ಯಕ್ಷರು ಜ್ಯೋತಿ ಪೂಜಾರಿ, ಗುರುಗಳು ಮಾನ್ಯ ಹಾಗೂ ತಂಡದ ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ತಂಡದ ಪೋಷಕರು ಹಾಜರಿದ್ದರು.

Related posts

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.): ಅಧ್ಯಕ್ಷರಾಗಿ ರಂಜನ್ ಜಿ. ಗೌಡ, ಉಪಾಧ್ಯಕ್ಷರಾಗಿ ಶಿವಕಾಂತ ಗೌಡ

Suddi Udaya

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯ ನವೀಕರಿಸಿದ ಶಾಲಾ ಕಟ್ಟಡ ಹಸ್ತಾಂತರ

Suddi Udaya

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ವಿಭಾಗದ ವಿದ್ಯಾರ್ಥಿ‌‌ಸಂಘ ಉದ್ಘಾಟನಾ ಸಮಾರಂಭದೊಂದಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಆಟಿ ಡೊಂಜಿ ಕೆಸರದ ಗೊಬ್ಬು ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!