ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ವಾಕರ್ ವಿತರಣೆ

ಬಳಂಜ: ಬೆಳ್ತಂಗಡಿ ತಾಲೂಕಿನ ಹೆಸರಾಂತ ಭಜನೆ ಮಂಡಳಿಗಳಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಒಂದು. ಈ ತಂಡವು ಕೇವಲ ಭಜನೆಯನ್ನು ಮಾತ್ರವಲ್ಲದೆ ಸಮಾಜಮುಖಿ ಕೆಲಸ, ಅಗತ್ಯ ವಸ್ತುಗಳ ಪೂರೈಕೆ, ಧಾರ್ಮಿಕತೆ ಸಾಂಸ್ಕೃತಿಕತೆ, ಮುಂತಾದವುಗಳಲ್ಲಿ ತೊಡಗಿಸಿಕೊಂಡಿದೆ. ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ತಂಡದ ಸದಸ್ಯರಾದ ಅದ್ವಿತ್ ಮತ್ತು ಕೃತಿ ಅವರ ಪೋಷಕರಾದ ವೇದಾವತಿ ಅವರ ತಾಯಿ ಮನೆಯಲ್ಲಿ ಆಕಸ್ಮಿಕವಾಗಿ ಬಿದ್ದು ಪೆಟ್ಟಾಗಿದ್ದು ಈಗಾಗಲೇ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯನ್ನು ಮಾಡಿಸಿ ಚೇತರಿಸಿಕೊಂಡಿದ್ದಾರೆ.

ಆದರೆ ಅವರಿಗೆ ಇನ್ನೊಬ್ಬರ ಸಹಾಯವಿಲ್ಲದೆ ನಡೆದಾಡಲು ಕಷ್ಟವಾಗುತ್ತಿದ್ದು ಇದೀಗ ಅವರಿಗೆ ನಡೆದಾಡಲು ವಾಕರ್ ನ ಅವಶ್ಯಕತೆ ಇದ್ದು ಅದನ್ನು ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ಆರೋಗ್ಯ ಸೇವಾ ಎಂಟನೇ ಯೋಜನೆಯ ಮೂಲಕ ಜು.28ರಂದು ಅವರಿಗೆ ಹಸ್ತಾಂತರ ಮಾಡಲಾಯಿತು.

ಈ ಸೇವಾ ಯೋಜನೆಗೆ ಯುವ ಉದ್ಯಮಿಗಳಾದ ಎಗ್ರೀನ್ ಬಯೋಟೆಕ್ ಸಂಸ್ಥಾಪಕರು ಅಶ್ವಥ್ ಹೆಗ್ಡೆ ಬಳಂಜ ಇವರು ಕೂಡ ಕೈ ಜೋಡಿಸಿದ್ದು, ವೇದಾವತಿ ಅವರ ಮನೆಗೆ 30 ಕೆಜಿ ಅಕ್ಕಿ ಮತ್ತು ಎಲ್ಲಾ ದಿನಸಿ ಸಾಮಗ್ರಿಗಳನ್ನೂ ನೀಡಲು ಸಹಾಯಹಸ್ತ ನೀಡಿದರು. ಈ ಸಂದರ್ಭದಲ್ಲಿ ಮಂಡಳಿಯ ಸಂಚಾಲಕರು ಹರೀಶ್ ವೈ ಚಂದ್ರಮ, ಅದ್ಯಕ್ಷರು ಜ್ಯೋತಿ ಪೂಜಾರಿ, ಗುರುಗಳು ಮಾನ್ಯ ಹಾಗೂ ತಂಡದ ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ತಂಡದ ಪೋಷಕರು ಹಾಜರಿದ್ದರು.

Related posts

ಬಳಂಜದಲ್ಲಿ ಪುರುಷರ ರಾಶಿ ಪೂಜೆ: ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ

Suddi Udaya

ತಕ್ವ ಜುಮ್ಮಾ ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಅಪಪ್ರಚಾರಗಳಿಗೆ ಕೊನೆಹಾಡುವಂತೆ ಸದನದಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ವಿಶ್ವ ಪರಿಸರ ದಿನಾಚರಣೆ: ಹಣ್ಣಿನ ಗಿಡ ನೆಟ್ಟು ಪರಿಸರ ಸಂರಕ್ಷಣೆಗೆ ಸಂಕಲ್ಪ

Suddi Udaya

ನಾಡಕಚೇರಿಗಳಲ್ಲಿ ಸರ್ವರ್ ಸಮಸ್ಯೆ-ಜನರು ಹೈರಾಣು

Suddi Udaya
error: Content is protected !!