26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೊಲೇರೋ ವಾಹನ ಡಿಕ್ಕಿ ಹೊಡೆದು ಬಾಲಕಿ ಅನರ್ಘ್ಯಾ ಸಾವನ್ನಪ್ಪಿದ ಪ್ರಕರಣ : ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬೆಳ್ತಂಗಡಿ ಚಿತ್ಪಾವನ ಸಂಘಟನೆ ವತಿಯಿಂದ ಪೊಲೀಸರಿಗೆ ಹಾಗೂ ತಹಶೀಲ್ದಾರರಿಗೆ ಮನವಿ

ಬೆಳ್ತಂಗಡಿ: ಮುಂಡಾಜೆ ಸಮೀಪದ ಸೀಟು ಬಳಿ ತಂದೆ ಮತ್ತು ಮಗಳು ಸಂಚರಿಸುತ್ತಿದ್ದ ಬೈಕ್‌ಗೆ ಜು. 27ರಂದು ಬೊಲೆರೊ ವಾಹನ ಹಿಂಬದಿಯಿಂದ ಢಿಕ್ಕಿ ಹೊಡೆದು ಬಾಲಕಿ ಸಾವನ್ನಪ್ಪಿದ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಅಗತ್ಯ ಪರಿಹಾರಗಳನ್ನು ದೊರಕಿಸಿಕೊಡಬೇಕು ಎಂದು ಆಗ್ರಹಿಸಿ ಬೆಳ್ತಂಗಡಿ ಚಿತ್ಪಾವನ ಸಂಘಟನೆ ವತಿಯಿಂದ ಅಧ್ಯಕ್ಷ ತ್ರಿವಿಕ್ರಮ್ ಹೆಬ್ಬಾರ್ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆ ಹಾಗೂ ತಹಸೀಲ್ದಾರರಿಗೆ ಜು.29ರಂದು ಸೋಮವಾರ ಮನವಿ ಸಲ್ಲಿಸಲಾಯಿತು.


ಜು.25 ರಂದು ಕಲ್ಮಂಜ ಗ್ರಾಮದ ಕುಡೆಂಚಿ ನಿವಾಸಿ ಗುರುಪ್ರಸಾದ್ ಅವರು ಮುಂಡಾಜೆಯ ತನ್ನ ಮನೆಗೆ ಹೋಗುತ್ತಿರುವ ಸಂದರ್ಭ ಹಿಂದಿನಿಂದ ಬಂದು ಬೊಲೇರೋ ವಾಹನ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಅವರ ಪುತ್ರಿ ಉಜಿರೆ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಅನರ್ಘ್ಯಾ(10ವ) ಮೇಲೆ ಬೊಲೆರೋ ವಾಹನ ಚಲಿಸಿದ ಪರಿಣಾಮ ಬಾಲಕಿ ಆಸ್ಪತ್ರೆಗೆ ಚಿಕಿತ್ಸೆಗೆ ಸಾಗಿಸುವಾಗ ಮೃಟಪಟ್ಟಿದ್ದರು. ಬಾಲಕಿಯ ತಂದೆ ಗುರುಪ್ರಸಾದ್ ಅವರಿಗೂ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related posts

ಕಾಶಿಪಟ್ಣ ಸ.ಪ್ರೌ. ಶಾಲೆಗೆ ಶೇ.100 ಫಲಿತಾಂಶ

Suddi Udaya

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಬೈಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ತರಗತಿ ಉದ್ಘಾಟನೆ

Suddi Udaya

ಎಸ್.ಡಿ.ಎಂ ಮಸ್ಟರಿಂಗ್ ಕೇಂದ್ರದಿಂದ ತಾಲೂಕಿನ 241 ಮತಗಟ್ಟೆಗಳಿಗೆ ಮತಯಂತ್ರಯೊಂದಿಗೆ ತೆರಳಿದ ಚುನಾವಣಾ ಸಿಬ್ಬಂದಿಗಳು

Suddi Udaya

ಶಿಶಿಲ :ಹರೀಶ್ ಪೂಂಜಾ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಪೆನ್ ವಿತರಣೆ

Suddi Udaya
error: Content is protected !!