23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಆಟಿದ ಕೂಟ

ಮುಂಡಾಜೆ : ಬಂಟರ ಗ್ರಾಮ ಸಮಿತಿ ಮುಂಡಾಜೆ ಇದರ ವತಿಯಿಂದ ಜು.28 ರಂದು ಮುಂಡಾಜೆ ಪಂಚಾಯತ್ ಭವನದಲ್ಲಿ ಆಟಿದ ಕೂಟ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಅಗರಿ ರಾಮಣ್ಣ ಶೆಟ್ಟಿ, ಮುಂಡ್ರುಪಾಡಿ ವಿಶ್ವನಾಥ ಶೆಟ್ಟಿ ಮತ್ತು ವನಿತಾ ಶೆಟ್ಟಿ, ಅಧ್ಯಕ್ಷರು ಉಜಿರೆ ವಲಯ ಬಂಟರ ಸಂಘ ಇವರು ದೀಪ ಬೆಳಗಿಸಿ ಮತ್ತು ಚೆಣ್ಣೆ ಮಣೆ ಆಡಿ ನೆರವೇರಿಸಿದರು.

ಗ್ರಾಮ ಸಮಿತಿ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ ಅಗರಿ ಇವರು ಆಟಿದ ದಿನದ ಮಹತ್ವದ ಬಗ್ಗೆ ತಿಳಿಸಿದರು.

ಪ್ರಸಾದ್ ಶೆಟ್ಟಿ ಮಂಜುಶ್ರೀ ನಗರ ಮತ್ತು ನಾರಾಯಣ ಶೆಟ್ಟಿ ಮಂಜುಶ್ರೀ ನಗರ ಇವರು ವಿವಿಧ ಭಕ್ತಿ ಸುಗಿಪು ಹಾಡುಗಳು ಮತ್ತು ಸಂದಿ ಪಾಡ್ದನಗಳನ್ನು ಹಾಡಿದರು. ಬಳಿಕ ತುಳುನಾಡ ಸಿರಿ ಎಂಬ ಯಕ್ಷಗಾನ ತಾಳಮದ್ದಲೆ ಯನ್ನು ಗ್ರಾಮದ ಬಂಟ ಕಲಾವಿದರು ನೆರವೇರಿಸಿದರು. ಗ್ರಾಮ ಸಮಿತಿಯ ಸದಸ್ಯರು ಆಟಿ ತಿಂಗಳಿನ ವಿವಿಧ ತಿಂಡಿ ತಿನಿಸುಗಳನ್ನು ತಂದು ಶಿವರಾಜ್ ರೈ ಸೋಮಂತಡ್ಕ ಇವರ ಮನೆಯಲ್ಲಿ ಭೋಜನ ಕೂಟ ವನ್ನು ಏರ್ಪಡಿಸಿದರು. ಗ್ರಾಮ ಸಮಿತಿಯ ಎಲ್ಲಾ ಸದಸ್ಯರು ಸಹಕರಿಸಿದರು.

ಜೊತೆ ಕಾರ್ಯದರ್ಶಿ ನವೀನ್ ಶೆಟ್ಟಿ ಇವರು ನಿರೂಪಿಸಿ,ಕಾರ್ಯದರ್ಶಿ ವಿಜಯಕುಮಾರ್ ರೈ ಇವರು ವಂದಿಸಿದರು.

Related posts

ಬೆಳ್ತಂಗಡಿ: ಹಳೆಕೋಟೆ ಡಿಸ್ಕೌಂಟ್ ಸೇಲ್ ಬಟ್ಟೆ ಮತ್ತು ಚಪ್ಪಲಿ ಅಂಗಡಿಯವರಿಂದ ವಯನಾಡ್ ನೆರೆ ಸಂತ್ರಸ್ತರಿಗೆ ದಿ‌ನಬಳಕೆ ವಸ್ತುಗಳ ಸಹಾಯಹಸ್ತ

Suddi Udaya

ನಡ್ತಿಕಲ್ಲು: ಆಧಾರ್ ನೋಂದಣಿ-ತಿದ್ದುಪಡಿ ಶಿಬಿರದ ಉದ್ಘಾಟನೆ

Suddi Udaya

ವೇಣೂರಿನ ಧೀಮಹಿಯಲ್ಲಿ ಭರತನಾಟ್ಯ ತರಗತಿಗಳ ಉದ್ಘಾಟನೆ

Suddi Udaya

ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ಗೂ, ಸೌತಡ್ಕ ದೇವಸ್ಥಾನಕ್ಕೂ ಯಾವುದೇ ಸಂಬಂಧ ಇಲ್ಲ

Suddi Udaya

ಭೀಕರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದ ತೋಟಕ್ಕೆ ನುಗ್ಗಿದ ನೀರು: ಕೊಚ್ಚಿ ಬಂದ ಮರದ ದಿಮ್ಮಿಗಳು

Suddi Udaya

ಕಾಶಿಪಟ್ಣ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!