24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಐ.ಟಿ. ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದ 2024-25ನೇ ಸಾಲಿನ ‘ಐ.ಟಿ. ಕ್ಲಬ್’ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಇಂದು (ಜು.29) ಜರಗಿತು.

ಉದ್ಘಾಟನೆ ನೆರವೇರಿಸಿ ಮಾತನಾಡಿದ ಉಜಿರೆಯ ಪ್ರಕಾಶ ಎಲೆಕ್ಟ್ರಾನಿಕ್ಸ್ ಇದರ ಪಾರ್ಟ್ನರ್ ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸುಮನಾ ಶೆಟ್ಟಿ, “ತಂತ್ರಜ್ಞಾನ ಬಹಳಷ್ಟು ಮುಂದುವರಿದಿದೆ. ನಾವು ಅದರ ಜೊತೆ ಸಾಗಬೇಕು ಹೊರತು ಹಿಂದುಳಿಯಬಾರದು” ಎಂದರು.

“ತಂತ್ರಜ್ಞಾನ ಕ್ಷೇತ್ರ ಜನರಿಗೆ ಸದಾ ಪೂರಕವಾಗಿ ಇರಬೇಕು. ಸಮಾಜಕ್ಕೆ ನಮ್ಮ ಕೈಲಾದಷ್ಟು ಕೊಡುಗೆ ನೀಡುವುದರ ಕಡೆಗೆ ನಮ್ಮ ಗಮನ ಇರಲಿ” ಎಂದು ಅವರು ಕಿವಿಮಾತು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಮಾತನಾಡಿ, ಆಧುನಿಕತೆಯ ಯುಗದಲ್ಲಿ ತಂತ್ರಜ್ಞಾನದ ಕ್ಷೇತ್ರದಲ್ಲಿ ಸ್ಪರ್ಧೆ ಹೆಚ್ಚಾಗಿದೆ. ವಿದ್ಯಾರ್ಥಿ ಹಂತದಲ್ಲಿ ಉತ್ತಮ ಹಾಗೂ ನಿರ್ದಿಷ್ಟ ಗುರಿಯನ್ನು ಹೊಂದಿರಬೇಕು. ಕಾಲೇಜಿನಲ್ಲಿ ಎದುರಾಗುವ ಎಲ್ಲ ಸವಾಲುಗಳನ್ನು ಅವಕಾಶದಂತೆ ಸ್ವೀಕರಿಸಿ ಒಳ್ಳೆಯ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಐ.ಟಿ. ಕ್ಲಬ್ ಸಂಯೋಜಕರಿಗೆ ಬ್ಯಾಡ್ಜ್ ನೀಡಿ ಅಭಿನಂದಿಸಲಾಯಿತು. ದ್ವಿತೀಯ ಬಿಸಿಎ ವಿದ್ಯಾರ್ಥಿಗಳು ತಯಾರಿಸಿದ ಭಿತ್ತಿಪತ್ರ ಅನಾವರಣಗೊಳಿಸಲಾಯಿತು. ವಿಭಾಗದ ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು.

ವಿಭಾಗ ಮುಖ್ಯಸ್ಥ ಶೈಲೇಶ್ ಕುಮಾರ್ ಹಾಗೂ ಪ್ರಾಧ್ಯಾಪಕರು ಉಪಸ್ಥಿತರಿದ್ದರು.

ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಮೋನಲ್ ಸ್ವಾಗತಿಸಿದರು. ಆಶಾ ಹಾಗೂ ತಂಡ ಪ್ರಾರ್ಥಿಸಿದರು. ಐ. ಟಿ. ಕ್ಲಬ್ ಕಾರ್ಯದರ್ಶಿ ಅಂಶಿತಾ ವಂದಿಸಿದರು. ತ್ರಿಶಾ ಕಾರ್ಯಕ್ರಮ ನಿರೂಪಿಸಿದರು.

Related posts

ಕಿರಿಯ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಬೆಳ್ತಂಗಡಿಯ ಯುವಕ ಮಂಜುನಾಥ್ ಶಿವಲಿಂಗಪ್ಪ ಜಿ.

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಉದ್ಘಾಟನೆ

Suddi Udaya

ಮಿತ್ತಬಾಗಿಲು ಕಾಡು ಹಂದಿ ಬೇಟೆ: ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಯ್ಯೂರಿನ ಮಹಿಳೆ ನಾಪತ್ತೆ; ದೂರು ದಾಖಲು

Suddi Udaya

ಪುತ್ತೂರು ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್: ಸಾರ್ವಜನಿಕ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya
error: Content is protected !!