25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ

ಕನ್ಯಾಡಿ : ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮುದ್ದೇನಹಳ್ಳಿ ಚಿಕ್ಕಬಳ್ಳಾಪುರ ಜಿಲ್ಲೆ ಇವರು ಕರ್ನಾಟಕ ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ “ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ 2024” ಗಾಗಿ ಅರ್ಜಿಗಳನ್ನು ಆಹ್ವಾನಿಸಿದ್ದರು. ಅದರಲ್ಲಿ ಆಯ್ದ 100 ಶಾಲೆಗಳಿಗೆ ಮಾತ್ರ ಈ ಪ್ರಶಸ್ತಿ ನೀಡುವುದಾಗಿ ತಿಳಿಸಿದರು.

ಅದರಲ್ಲಿ ಕನ್ಯಾಡಿ – 2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ “ಆಯ್ಕೆ ಆಗಿರುವುದು ಬೆಳ್ತಂಗಡಿ ತಾಲೂಕಿಗೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ.

ಈ ಪ್ರಶಸ್ತಿಯನ್ನು ಶಾಲೆಯ ಹಿರಿಯ ಶಿಕ್ಷಕಿ ಶಾರದ ಜಿ ಇವರು ಜು. 27 ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ,ಸತ್ಯಸಾಯಿ ಗ್ರಾಮದಲ್ಲಿ ಜರುಗಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿ ಸದ್ಗುರು ಮಧುಸೂದನ ಸಾಯಿ ಅವರ ದಿವ್ಯ ಸಾನಿಧ್ಯದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದರು.
ಪ್ರಶಸ್ತಿಯು ರೂಪಾಯಿ ಹತ್ತು ಸಾವಿರ ನಗದು ಪುರಸ್ಕಾರವನ್ನು ಹೊಂದಿದೆ.

Related posts

ಸರಕಾರಿ ನೌಕರರ ಜಿಲ್ಲಾ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ: ಹೇಮಚಂದ್ರರಿಗೆ ಪ್ರಥಮ ಸ್ಥಾನ

Suddi Udaya

ಶ್ರೀ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಬಗ್ಗೆ ಬೆಳ್ತಂಗಡಿ ವಲಯದ ಪೂರ್ವಭಾವಿ ಸಭೆ

Suddi Udaya

ಯುವ ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ನ ಉಪಾಧ್ಯಕ್ಷರಾಗಿ ಯತೀಶ್ ಯಕ್ಷ ಧರ್ಮಸ್ಥಳ ನೇಮಕ

Suddi Udaya

ಮದ್ದಡ್ಕ ಮುಖ್ಯರಸ್ತೆಯಲ್ಲಿ ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು: ಟ್ರಾಫಿಕ್ ಜಾಮ್, ವಾಹನ ಸವಾರರ ಪರಾದಾಟ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚಾರಿಸುವಂತೆ ಸೂಚನೆ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ. ಪ್ರಾ. ಶಾಲೆಯ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya
error: Content is protected !!