24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಕುಕ್ಕೇಡಿ : ಶ್ರೀ ಶಾರದಾಂಭ ಭಜನಾ ಮಂಡಳಿ ಶ್ರೀ ಶಾರದನಗರ ಬುಳೆಕ್ಕರ ಕುಕ್ಕೇಡಿ ಇದರ ವಾರ್ಷಿಕ ಮಹಾಸಭೆಯು ಶ್ರೀ ಶಾರದಾಂಭ ಭಜನಾ ಮಂದಿರದ ತಿಮ್ಮಯ್ಯ ಬಲ್ಲಾಳ್ ಸಭಾಭವನದಲ್ಲಿ ಇತ್ತೀಚೆಗೆ ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ಮಂಡಳಿಯ ಅಧ್ಯಕ್ಷ ಪ್ರಕಾಶ್ ಪೂಜಾರಿಯವರು ವಹಿಸಿದರು.

ವೇದಿಕೆಯಲ್ಲಿ ಕುಕ್ಕೇಡಿ ಗ್ರಾಮ ಪಂಚಾಯತ್ ಸದಸ್ಯ ಗೋಪಾಲ್ ಶೆಟ್ಟಿ , ಮಹಿಳಾ ಸಮಿತಿ ಅಧ್ಯಕ್ಷೆ ಶ್ರೀಮತಿ ಶಕುಂತಲಾ ಕೃಷ್ಣಪ್ಪ ದೇವಾಡಿಗ ಉಪಸ್ಥಿತರಿದ್ದರು.

ಈ ವೇಳೆ ಮುಂದಿನ ಸಾಲಿನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಗೌರವಾಧ್ಯಕ್ಷರಾಗಿ ರಾಜೇಶ್ ಜೈನ್ ಬುಳೆಕ್ಕರ್ ಬೀಡು, ಅಧ್ಯಕ್ಷರಾಗಿ ಹರೀಶ್ ಬಂಗೇರ, ಉಪಾಧ್ಯಕ್ಷರಾಗಿ ಚಂದ್ರಹಾಸ ಪೂಜಾರಿ, ನಿತಿನ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಜಿ., ಕಾರ್ಯದರ್ಶಿಯಾಗಿ ರಕ್ಷಿತ್ ಪೂಜಾರಿ, ಜೊತೆ ಕಾರ್ಯದರ್ಶಿಯಾಗಿ ನಿತೇಶ್ ಮಂಗತ್ಯಾರ್ , ಕೋಶಾಧಿಕಾರಿಯಾಗಿ ಸುದೀಪ್ ಕುಮಾರ್, ಭಜನಾ ಸಂಚಾಲಕರಾಗಿ ಗಣೇಶ್ ಪೂಜಾರಿ, ಲೆಕ್ಕಪರಿಶೋಧಕರಾಗಿ ಸತೀಶ್ ಬಂಗೇರ , ಕಾರ್ಯಧ್ಯಕ್ಷರಾಗಿ ದಯಾನಂದ ಶೆಟ್ಟಿ, ಗೌರವ ಸಲಹೆಗಾರರಾಗಿ ಗೋಪಾಲ ಶೆಟ್ಟಿ, ವಿಶ್ವನಾಥ ದೇವಾಡಿಗ, ಪ್ರಕಾಶ್ ಪೂಜಾರಿ, ಸುಂದರ ದೇವಾಡಿಗ, ನಾರಾಯಣ ನಾಯ್ಕ, ಹಾಗೂ ಇತರ ಮೂವತ್ತು ಸದಸ್ಯರನ್ನು ಆಯ್ಕೆಮಾಡಲಾಯಿತು.

ಪ್ರವೀಣ್ ಪೂಜಾರಿ ಸ್ವಾಗತಿಸಿದರು. ಜಗದೀಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ನವೀನ್ ಜಿ. ಧನ್ಯವಾದವಿತ್ತರು.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆ: ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಕಾರ್ಯಕ್ರಮ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ ನಿಧನ

Suddi Udaya

ಇಂದಬೆಟ್ಟು : ಬಂಗಾಡಿ ನಿವಾಸಿ ಪ್ರದೀಪ್ ದೇವಾಡಿಗ ನಿಧನ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

Suddi Udaya
error: Content is protected !!